ಟೋಲ್ ಸಿಬ್ಬಂದಿ ಮೇಲೆ ಕಾರು ಹತ್ತಿಸಿದ 'ದೂರ್ತ ಚಾಲಕ' 
ದೇಶ

Siwaya Toll Plaza: ಟೋಲ್ ಹಣ ನೀಡದೇ ಗಲಾಟೆ, ಪ್ರಶ್ನಿಸಿದ ಸಿಬ್ಬಂದಿ ಮೇಲೆ ಕಾರು ಹತ್ತಿಸಿದ 'ಧೂರ್ತ', Video

ಕಾರು ಚಾಲಕನೊಬ್ಬ ಟೋಲ್ ಶುಲ್ಕದ ಕುರಿತು ಸಿಬ್ಬಂದಿಗಳೊಂದಿಗೆ ಗಲಾಟೆ ತೆಗೆದಿದ್ದಾನೆ.

ಮೀರತ್: ಇತ್ತೀಚಿನ ದಿನಗಳಲ್ಲಿ ಟೋಲ್ ಬೂತ್ ಸಂಘರ್ಷ ಹೆಚ್ಚು ವರದಿಯಾಗುತ್ತಿದ್ದು, ಉತ್ತರ ಪ್ರದೇಶದಲ್ಲಿ ಟೋಲ್ ಹಣದ ವಿಚಾರವಾಗಿ ಕಾರು ಚಾಲಕನೋರ್ವ ಸಿಬ್ಬಂದಿ ಮೇಲೆ ಕಾರು ಹತ್ತಿಸಲು ಯತ್ನಿಸಿರುವ ಘಟನೆ ವ್ಯಾಪಕ ವೈರಲ್ ಆಗುತ್ತಿದೆ.

ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಸಿವಾಯ ಟೋಲ್ ಪ್ಲಾಜಾದಲ್ಲಿ ಈ ಘಟನೆ ವರದಿಯಾಗಿದ್ದು, ಕಾರು ಚಾಲಕನೊಬ್ಬ ಟೋಲ್ ಶುಲ್ಕದ ಕುರಿತು ಸಿಬ್ಬಂದಿಗಳೊಂದಿಗೆ ಗಲಾಟೆ ತೆಗೆದಿದ್ದಾನೆ. ಈ ವೇಳೆ ಟೋಲ್ ಶುಲ್ಕ ನೀಡದ ಹೊರತು ತಾವು ಗೇಟ್ ತೆರೆಯುವುದಿಲ್ಲ ಎಂದಾಗ ನೋಡ ನೋಡುತ್ತಲೇ ಕಾರನ್ನು ಬಲವಂತವಾಗಿ ಚಲಾಯಿಸಿಕೊಂಡು ಹೋಗಿ ಟೋಲ್ ಗೇಟ್ ಧ್ವಂಸ ಮಾಡಿದ್ದಾನೆ.

ಇದೇ ಸಂದರ್ಭದಲ್ಲಿ ಅಲ್ಲಿಯೇ ಇದ್ದ ಇತರೆ ಸಿಬ್ಬಂದಿ ಆತನನ್ನು ತಡೆಯಲು ಯತ್ನಿಸಿದಾಗ ಅವರ ಮೇಲೂ ಕಾರು ಚಲಾಯಿಸಲು ಪ್ರಯತ್ನಿಸಿದ್ದಾನೆ. ಒಂದಲ್ಲ.. ಬರೊಬ್ಬರಿ ಎರಡು ಬಾರಿ ಸಿಬ್ಬಂದಿ ಮೇಲೆ ಕಾರು ಚಲಾಯಿಸಲು ಚಾಲಕ ಮುಂದಾಗಿದ್ದು, ಅದೃಷ್ಟವಶಾತ್ ಸಿಬ್ಬಂದಿ ಪಾರಾಗಿದ್ದಾರೆ. ಇವಿಷ್ಟೂ ವಿಡಿಯೋ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಕಾರು ಚಾಲಕನ ದೂರ್ತತನ ವ್ಯಾಪಕ ವೈರಲ್ ಆಗುತ್ತಿದೆ

ಪೊಲೀಸರಿಂದ ತನಿಖೆ

ಇನ್ನು ಘಟನೆಯ ನಂತರ, ಟೋಲ್ ಆಡಳಿತ ಮಂಡಳಿಯು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿತು. ಪೊಲೀಸರು ಸ್ಥಳಕ್ಕೆ ತಲುಪಿ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ಮಾಡಿ ಆರೋಪಿ ಚಾಲಕನನ್ನು ಗುರುತಿಸಲು ಪ್ರಾರಂಭಿಸಿದ್ದಾರೆ. ಆರೋಪಿಗಳ ವಿರುದ್ಧ ಗಂಭೀರ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಇತ್ತೀಚೆಗಷ್ಟೇ ಇದೇ ಮೀರತ್ ನ ಭೂನಿ ಟೋಲ್ ಪ್ಲಾಜಾದಲ್ಲಿ ಟೋಲ್ ಶುಲ್ಕದ ಕುರಿತು ಗಲಾಟೆ ಮಾಡಿದ್ದ ಯೋಧ ಕಪಿಲ್ ಕವದ್ ನನ್ನು ಟೋಲ್ ಸಿಬ್ಬಂದಿ ಥಳಿಸಿದ ಕಾರಣ ಗ್ರಾಮಸ್ಥರು ಇಡೀ ಟೋಲ್ ಪ್ಲಾಜಾವನ್ನು ಧ್ವಂಸ ಮಾಡಿದ್ದ ಪ್ರಕರಣ ಹಸಿರಾಗಿರುವಂತೆಯೇ ಇದೇ ಮೀರತ್ ನಲ್ಲಿ ಮತ್ತೊಂದು ಟೋಲ್ ಗಲಾಟೆ ವರದಿಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್