ಅಮಿತ್ ಶಾ  
ದೇಶ

Vice-President Polls: ವಿರೋಧ ಪಕ್ಷಗಳ ಅಭ್ಯರ್ಥಿ ನ್ಯಾ. ರೆಡ್ಡಿ ನಕ್ಸಲಿಸಂಗೆ 'ಸಹಾಯ'; ಅಮಿತ್ ಶಾ ಆರೋಪ

ಸುದರ್ಶನ್ ರೆಡ್ಡಿ ಅವರು ಎಡಪಂಥೀಯ ಉಗ್ರವಾದ ಮತ್ತು ನಕ್ಸಲಿಸಂ ಬೆಂಬಲಿಸುವ ಸಾಲ್ವಾ ಜುಡುಮ್ ತೀರ್ಪು ನೀಡದಿದ್ದರೆ, ದೇಶದಲ್ಲಿ ತೀವ್ರವಾದಿ ಎಡಪಂಥೀಯ ಚಳುವಳಿ 2020ಕ್ಕೂ ಮೊದಲೇ ಅಂತ್ಯವಾಗುತ್ತಿತ್ತು ಎಂದು ಹೇಳಿದರು.

ಕೊಚ್ಚಿ: ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟದ ಉಪ ರಾಷ್ಟ್ರಪತಿ ಅಭ್ಯರ್ಥಿ ನ್ಯಾಯಮೂರ್ತಿ ಬಿ. ಸುದರ್ಶನ್ ರೆಡ್ಡಿ ಅವರು ನಕ್ಸಲಿಸಂ ಅನ್ನು "ಬೆಂಬಲಿಸುತ್ತಿದ್ದಾರೆ" ಎಂದು ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ಹಿರಿಯ ನಾಯಕ ಅಮಿತ್ ಶಾ ಶುಕ್ರವಾರ ಆರೋಪಿಸಿದ್ದಾರೆ.

ಮಲಯಾಳ ಮನೋರಮಾ ಸಮೂಹ ಶುಕ್ರವಾರ ಆಯೋಜಿಸಿದ್ದ ಮನೋರಮಾ ನ್ಯೂಸ್ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅಮಿತ್ ಶಾ, ಸುದರ್ಶನ್ ರೆಡ್ಡಿ ಅವರು ಎಡಪಂಥೀಯ ಉಗ್ರವಾದ ಮತ್ತು ನಕ್ಸಲಿಸಂ ಬೆಂಬಲಿಸುವ ಸಾಲ್ವಾ ಜುಡುಮ್ ತೀರ್ಪು ನೀಡದಿದ್ದರೆ, ದೇಶದಲ್ಲಿ ತೀವ್ರವಾದಿ ಎಡಪಂಥೀಯ ಚಳುವಳಿ 2020ಕ್ಕೂ ಮೊದಲೇ ಅಂತ್ಯವಾಗುತ್ತಿತ್ತು ಎಂದು ಹೇಳಿದರು.

ಎಡಪಂಥೀಯರ ಒತ್ತಡದ ಮೇರೆಗೆ ಸುಪ್ರೀಂ ಕೋರ್ಟ್‌ನಂತಹ ವೇದಿಕೆಯನ್ನು ಬಳಸಿಕೊಂಡು ಎಡಪಂಥೀಯ ಉಗ್ರವಾದ ಮತ್ತು ನಕ್ಸಲ್‌ವಾದವನ್ನು ಬೆಂಬಲಿಸಿದ ಸುದರ್ಶನ್ ರೆಡ್ಡಿಯನ್ನು ಕಾಂಗ್ರೆಸ್ ಉಪ ರಾಷ್ಟ್ರಪತಿ ಅಭ್ಯರ್ಥಿಯನ್ನು ಆಯ್ಕೆ ಮಾಡಿದೆ. ಆದರೆ ಕೇರಳ ನಕ್ಸಲಿಸಂನ ಪರಿಣಾಮ ಅನುಭವಿಸಿದೆ. ಹೀಗಾಗಿ ಕೇರಳದಲ್ಲಿ ಪಕ್ಷದ ಗೆಲುವಿನ ಸಾಧ್ಯತೆ ಮತ್ತಷ್ಟು ಕಡಿಮೆಯಾಗಿದೆ ಎಂದು ಅಮಿತ್ ಶಾ ಹೇಳಿದರು.

"ಸುದರ್ಶನ್ ರೆಡ್ಡಿ ನಕ್ಸಲ್ ವಾದಕ್ಕೆ ಸಹಾಯ ಮಾಡಿದ ವ್ಯಕ್ತಿ. ಅವರು ಸಾಲ್ವಾ ಜುಡುಮ್ ತೀರ್ಪು ನೀಡಿದರು. ಸಾಲ್ವಾ ಜುಡುಮ್ ತೀರ್ಪು ನೀಡದಿದ್ದರೆ, 2020 ರ ವೇಳೆಗೆ ನಕ್ಸಲ್ ಭಯೋತ್ಪಾದನೆ ಕೊನೆಗೊಳ್ಳುತ್ತಿತ್ತು. ಅವರು ಸಾಲ್ವಾ ಜುಡುಮ್ ತೀರ್ಪು ನೀಡಿದ ಸಿದ್ಧಾಂತದಿಂದ ಪ್ರೇರಿತರಾದ ವ್ಯಕ್ತಿ" ಎಂದು ಅಮಿತ್ ಶಾ ವಾಗ್ದಾಳಿ ನಡೆಸಿದರು.

2011ರಲ್ಲಿ ನೀಡಿದ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಸುದರ್ಶನ್ ರೆಡ್ಡಿ ಮತ್ತು ಎಸ್‌ಎಸ್ ನಿಜ್ಜರ್ ಅವರ ದ್ವಿಸದಸ್ಯ ಪೀಠವು ಮಾವೋವಾದಿ ದಂಗೆಯನ್ನು ಎದುರಿಸಲು ಛತ್ತೀಸ್‌ಗಢ ಸರ್ಕಾರವು ಬುಡಕಟ್ಟು ಯುವಕರನ್ನು ವಿಶೇಷ ಪೊಲೀಸ್ ಅಧಿಕಾರಿಗಳಾಗಿ(ಎಸ್‌ಪಿಒ) ನೇಮಿಸಿದ ಸಾಲ್ವಾ ಜುಡುಮ್ ಅನ್ನು ವಿಸರ್ಜಿಸಿತು. ಈ ಸಂಘಟನೆಯು ಕಾನೂನುಬಾಹಿರ ಮತ್ತು ಸಂವಿಧಾನಬಾಹಿರ ಎಂದು ನ್ಯಾಯಪೀಠ ಹೇಳಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT