ಬಿಜೆಪಿ ಪಕ್ಷದ ಕಾರ್ಯಕ್ರಮದಲ್ಲಿ ಅಮಿತ್ ಶಾ, ಅಣ್ಣಾಮಲೈ ಮತ್ತಿತರರು 
ದೇಶ

ತಮಿಳುನಾಡು: ಸೋನಿಯಾ ಗಾಂಧಿ, ಸ್ಟಾಲಿನ್ ಆಸೆ ಕೈಗೂಡಲ್ಲ; ಕೇಂದ್ರ ಗೃಹ ಸಚಿವ ಅಮಿತ್ ಶಾ!

130ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ಕಪ್ಪು ಮಸೂದೆ ಎಂದು ತಿರಸ್ಕರಿಸುವ ಹಕ್ಕು ಸ್ಟಾಲಿನ್‌ಗೆ ಇಲ್ಲ. ಏಕೆಂದರೆ ಅವರು ಭ್ರಷ್ಟ ಕೆಲಸ ಮಾಡಿದ ಸಿಎಂ ಆಗಿದ್ದಾರೆ ಎಂದು ಆರೋಪಿಸಿದ ಅಮಿತ್ ಶಾ.

ತಿರುನೆಲ್ವೇಲಿ: 130ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು 'ಕಪ್ಪು ಮಸೂದೆ' ಎಂದು ಕರೆಯುವ ಯಾವುದೇ ಹಕ್ಕು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್‌ಗೆ ಇಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ಹೇಳಿದ್ದಾರೆ.

ಪಕ್ಷದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶಾ, ಡಿಎಂಕೆಯು ದೇಶದಲ್ಲಿ "ಅತ್ಯಂತ ಭ್ರಷ್ಟ" ಸರ್ಕಾರವಾಗಿದೆ. ತಮಿಳು ಸಾಹಿತ್ಯದ ಶ್ರೇಷ್ಠ ಕೃತಿ 'ತಿರುಕ್ಕುರಲ್' ನಂತೆ ಸಮರ್ಥ, ದಕ್ಷ ಸರ್ಕಾರವನ್ನು ನಡೆಸಿದ್ದು ಪ್ರಧಾನಿ ನರೇಂದ್ರ ಮೋದಿ ಎಂದು ಹೇಳಿದರು.

130ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ಕಪ್ಪು ಮಸೂದೆ ಎಂದು ತಿರಸ್ಕರಿಸುವ ಹಕ್ಕು ಸ್ಟಾಲಿನ್‌ಗೆ ಇಲ್ಲ. ಏಕೆಂದರೆ ಅವರು ಭ್ರಷ್ಟ ಕೆಲಸ ಮಾಡಿದ ಸಿಎಂ ಆಗಿದ್ದಾರೆ ಎಂದು ಆರೋಪಿಸಿದ ಅಮಿತ್ ಶಾ, ಸ್ಟಾಲಿನ್ ಆಡಳಿತಾವಧಿಯಲ್ಲಿನ ಅನೇಕ ಹಗರಣಗಳನ್ನು ಪ್ರಸ್ತಾಪಿಸಿದರು.

ರಾಜ್ಯ ಮದ್ಯದ ನಿಗಮ TASMAC, ಮರಳು ಗಣಿಗಾರಿಕೆ, ಮೂಲಸೌಕರ್ಯ, ಸಾರಿಗೆ ಇಲಾಖೆ, ಪೌಷ್ಟಿಕಾಂಶ ಕಿಟ್, ಉಚಿತ ಧೋತಿ, ಉದ್ಯೋಗಕ್ಕಾಗಿ ಹಣ, ಪಡಿತರ ಕಳ್ಳಸಾಗಣೆ ಮತ್ತು MGNREGAದಲ್ಲಿ ಬಡ ತಮಿಳರ ಹಣವನ್ನು ಲೂಟಿ ಮಾಡಲಾಗಿದೆ ಎಂದು ಆರೋಪಿಸಿದರು.

ಡಿಎಂಕೆ ನಾಯಕ ಮತ್ತು ಮಾಜಿ ಸಚಿವ ಕೆ ಪೊನ್ಮುಡಿ ವಿರುದ್ಧದ ಪ್ರಕರಣ ಮತ್ತು ವಿ ಸೆಂಥಿಲ್ ಬಾಲಾಜಿ ಅವರ ಇತ್ತೀಚಿನ ಪ್ರಕರಣವನ್ನು ಉಲ್ಲೇಖಿಸಿದ ಶಾ, ಜೈಲು ಪಾಲಾಗಿದ್ದರೂ ಕ್ಯಾಬಿನೆಟ್‌ನ ಭಾಗವಾಗಿ ಮತ್ತು ಆಡಳಿತ ನಡೆಸುವುದು ಸೂಕ್ತವೇ ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ರಾಹುಲ್ ಗಾಂಧಿಯನ್ನು ಪ್ರಧಾನಿ ಮಾಡುವುದೇ ಅವರ ಏಕೈಕ ಅಜೆಂಡ ಆಗಿದೆ. ಅದೇ ರೀತಿ ಸ್ಟಾಲಿನ್ ಅವರ ಏಕೈಕ ಅಜೆಂಡಾ ಅವರ ಪುತ್ರ ಉದಯನಿಧಿಯನ್ನು ಮುಖ್ಯಮಂತ್ರಿ ಮಾಡುವುದಾಗಿದೆ. ಎನ್‌ಡಿಎ ವಿಜಯಶಾಲಿಯಾಗುವುದರಿಂದ ಇವೆರಡೂ ಫಲ ನೀಡುವುದಿಲ್ಲ ಎಂದು ಶಾ ಪ್ರತಿಪಾದಿಸಿದರು.

ಡಿಎಂಕೆ ದೇಶದಲ್ಲೇ ಅತ್ಯಂತ ಭ್ರಷ್ಟ ಸರ್ಕಾರವಾಗಿದ್ದು, ತಮಿಳುನಾಡಿನಲ್ಲಿ 2026 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ, ಎಐಎಡಿಎಂಕೆ ಮತ್ತು ಎನ್‌ಡಿಎ ಮೈತ್ರಿಕೂಟ ಗೆದ್ದು ಸರ್ಕಾರ ರಚಿಸಲಿದೆ ಎಂದು ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಖ್ಯಮಂತ್ರಿ ಬದಲಾವಣೆ: ದೆಹಲಿಯಲ್ಲಿ ಕಾಂಗ್ರೆಸ್‌ ಮ್ಯಾರಥಾನ್‌ ಮೀಟಿಂಗ್ ಬಳಿಕ ಕೆ.ಸಿ ವೇಣುಗೋಪಾಲ್ ಹೇಳಿದ್ದೇನು? Video

IPL 2026, qualifier 1: ಟಾಸ್ ಗೆದ್ದ GT ಬೌಲಿಂಗ್ ಆಯ್ಕೆ, ಕುತೂಹಲಕ್ಕೆ ಬ್ರೇಕ್, ವೆಂಕಟೇಶ್ ಅಯ್ಯರ್ ಗೆ ಸ್ಟಿಕ್ ಆದ RCB!

Bengaluru Rains: ಗುಡುಗು, ಸಿಡಿಲು ಸಹಿತ ಭಾರೀ ಮಳೆ; ಹಳಿ ಮೇಲೆ ಮರ ಬಿದ್ದು, ಮೆಟ್ರೋ ಸಂಚಾರ ವ್ಯತ್ಯಯ!

ಫೈನಲ್ ಫೈಟ್: ಸಿದ್ದರಾಮಯ್ಯ ಮನವೊಲಿಕೆಗೆ ರಾಹುಲ್ ಗಾಂಧಿ ಯತ್ನ; ಯತೀಂದ್ರಗೆ DCM ಸ್ಥಾನ, ರಾಜ್ಯಸಭೆ ಆಫರ್?

ಪಟ್ಟಕ್ಕಾಗಿ ಫೈನಲ್ ಫೈಟ್: ಮೂರು ಷರತ್ತುಗಳನ್ನು ಹೈಕಮಾಂಡ್ ಮುಂದಿಟ್ಟ ಡಿಕೆಶಿ; CM ಹುದ್ದೆಗಾಗಿ ಬಿಗಿಪಟ್ಟು!

SCROLL FOR NEXT