ದೇವೇಂದ್ರ ಫಡ್ನವಿಸ್-ಶರದ್ ಪವಾರ್ online desk
ದೇಶ

Vice President polls: NDA ಅಭ್ಯರ್ಥಿಯನ್ನು ಬೆಂಬಲಿಸಲು ಶರದ್ ಪವಾರ್ ಗೆ ಫಡ್ನವಿಸ್ ಮನವಿ; NCP ನಾಯಕನ ಪ್ರತಿಕ್ರಿಯೆ ಏನು?

ದೇವೇಂದ್ರ ಫಡ್ನವಿಸ್ ಜೊತೆ ಮಾತನಾಡಿರುವ ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್, ವಿರೋಧ ಪಕ್ಷದ ಅಭ್ಯರ್ಥಿ ಬಿ. ಸುದರ್ಶನ್ ರೆಡ್ಡಿ ಈಗಾಗಲೇ ನಾಮಪತ್ರ ಸಲ್ಲಿಸಿದ್ದಾರೆ.

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಎನ್‌ಡಿಎಯ ಉಪರಾಷ್ಟ್ರಪತಿ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ ಬೆಂಬಲ ನೀಡುವಂತೆ ಎನ್ ಸಿ ಪಿ ನಾಯಕ ಶರದ್ ಪವಾರ್ ಗೆ ಕರೆ ಮಾಡಿದ್ದು ಈಗ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ದೇವೇಂದ್ರ ಫಡ್ನವಿಸ್ ಜೊತೆ ಮಾತನಾಡಿರುವ ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್, ವಿರೋಧ ಪಕ್ಷದ ಅಭ್ಯರ್ಥಿ ಬಿ. ಸುದರ್ಶನ್ ರೆಡ್ಡಿ ಈಗಾಗಲೇ ನಾಮಪತ್ರ ಸಲ್ಲಿಸಿದ್ದಾರೆ. ಎನ್‌ಡಿಎಗಿಂತ ನಮಗೆ ಕಡಿಮೆ ಸಂಖ್ಯಾಬಲವಿದ್ದರೂ, ನಮಗೆ ಯಾವುದೇ ಚಿಂತೆ ಇಲ್ಲ, ಆದರೆ ಎನ್ ಡಿಎ ಅಭ್ಯರ್ಥಿಯನ್ನು ಬೆಂಬಲಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

ವಿರೋಧ ಪಕ್ಷ ಸರ್ವಾನುಮತದಿಂದ ರೆಡ್ಡಿ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ನಿರ್ಧರಿಸಿದೆ ಎಂದು ಪವಾರ್ ಹೇಳಿದರು. ವಿರೋಧ ಪಕ್ಷದ ಎಲ್ಲಾ ಮತಗಳು ರೆಡ್ಡಿಗೆ ಹೋಗುತ್ತವೆ. ಇಂಡಿ ಮೈತ್ರಿಕೂಟ ತನ್ನ ಬಲವನ್ನು ತಿಳಿದಿದೆ. ನಾವು ಯಾವುದೇ ಆಶ್ಚರ್ಯಗಳನ್ನು ನಿರೀಕ್ಷಿಸುತ್ತಿಲ್ಲ ಎಂದು ಅವರು ಹೇಳಿದರು. ದೇಶದ ಎರಡನೇ ಅತ್ಯುನ್ನತ ಸಾಂವಿಧಾನಿಕ ಹುದ್ದೆ (ಉಪರಾಷ್ಟ್ರಪತಿ ಹುದ್ದೆ) ಗೆ ಚುನಾವಣೆ ಸೆಪ್ಟೆಂಬರ್ 9 ರಂದು ನಡೆಯಲಿದೆ.

"ಎನ್‌ಡಿಎ ಅಭ್ಯರ್ಥಿ ನಮ್ಮ ಸಿದ್ಧಾಂತಕ್ಕೆ ಹೊಂದಿಕೆಯಾಗುವುದಿಲ್ಲ. ಅವರು ಜಾರ್ಖಂಡ್ ರಾಜ್ಯಪಾಲರಾಗಿದ್ದಾಗ, ಸಿಎಂ ಹೇಮಂತ್ ಸೊರೆನ್ ವಿರುದ್ಧ ಪ್ರಕರಣ ದಾಖಲಿಸಲಾಯಿತು. ಸೊರೆನ್ ರಾಜ್ಯಪಾಲರನ್ನು ಭೇಟಿ ಮಾಡಲು ಹೋದಾಗ ಅವರನ್ನು ರಾಜಭವನದಲ್ಲಿ ಬಂಧಿಸಲಾಯಿತು. ಇದು ಅಧಿಕಾರದ ದುರುಪಯೋಗದ ಸ್ಪಷ್ಟ ಉದಾಹರಣೆಯಾಗಿದೆ ಮತ್ತು ಅಂತಹ ಅಭ್ಯರ್ಥಿಗೆ ಬೆಂಬಲವನ್ನು ನಿರೀಕ್ಷಿಸುವುದು ಸೂಕ್ತವಲ್ಲ. ಆದ್ದರಿಂದ, ಮುಖ್ಯಮಂತ್ರಿಯ ಕೋರಿಕೆಯನ್ನು ಸ್ವೀಕರಿಸಲು ನನ್ನ ಅಸಮರ್ಥತೆಯನ್ನು ವ್ಯಕ್ತಪಡಿಸಿದ್ದೇನೆ" ಎಂದು ಪವಾರ್ ಹೇಳಿದ್ದಾರೆ.

ಫಡ್ನವೀಸ್ ಗುರುವಾರ ರಾಧಾಕೃಷ್ಣನ್‌ಗೆ ಪವಾರ್ ಮತ್ತು ಶಿವಸೇನೆ (ಯುಬಿಟಿ) ಅಧ್ಯಕ್ಷ ಉದ್ಧವ್ ಠಾಕ್ರೆ ಅವರ ಬೆಂಬಲವನ್ನು ಕೋರಿದರು. ಫಡ್ನವೀಸ್ ಜೊತೆಗೆ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೂಡ ಠಾಕ್ರೆ ಅವರಿಗೆ ಕರೆ ಮಾಡಿ, ಎನ್‌ಡಿಎ ಆಯ್ಕೆಗೆ ಬೆಂಬಲ ನೀಡುವಂತೆ ಒತ್ತಾಯಿಸಿದರು ಎಂದು ಸೇನಾ (ಯುಬಿಟಿ) ನಾಯಕ ಸಂಜಯ್ ರಾವತ್ ಹೇಳಿದ್ದಾರೆ.

ಎನ್‌ಸಿಪಿ (ಎಸ್‌ಪಿ) ಮತ್ತು ಶಿವಸೇನೆ (ಯುಬಿಟಿ) ಕಾಂಗ್ರೆಸ್ ಜೊತೆಗೆ ಮಹಾರಾಷ್ಟ್ರದಲ್ಲಿ ವಿರೋಧ ಪಕ್ಷದ ಮಹಾ ವಿಕಾಸ್ ಅಘಾಡಿ (ಎಂವಿಎ)ಯ ಭಾಗವಾಗಿದೆ. ಈ ಮೂರು ಪಕ್ಷಗಳು ರಾಷ್ಟ್ರೀಯ ಮಟ್ಟದಲ್ಲಿ ವಿರೋಧ ಪಕ್ಷದ ಇಂಡೀ ಬಣದ ಮಿತ್ರಪಕ್ಷಗಳಾಗಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT