ಸಿಎಂ ಸಿದ್ದರಾಮಯ್ಯ, ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಅರುಣಾಚಲ ಪ್ರದೇಶದ ಸಿಎಂ ಪೆಮಾ ಖಂಡು online desk
ದೇಶ

ದೇಶಾದ್ಯಂತ ಸಿಎಂ ಗಳ ಆಸ್ತಿ ಮೌಲ್ಯದ ವರದಿ ಬಿಡುಗಡೆ: ಈಗ ಅತ್ಯಂತ ಶ್ರೀಮಂತ ಸಿಎಂ ಯಾರು ಗೊತ್ತೆ?

ಮೂರನೇ ಸ್ಥಾನದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಇದ್ದು ಒಟ್ಟು ಆಸ್ತಿ ಮೌಲ್ಯ 51 ಕೋಟಿ ರೂಪಾಯಿಗಳನ್ನು ಹೊಂದಿದ್ದಾರೆ.

ನವದೆಹಲಿ: ದೇಶದ ಅತ್ಯಂತ ಶ್ರೀಮಂತ ಸಿಎಂ ಗಳ ಪಟ್ಟಿ ಆ.22 ರಂದು ಬಿಡುಗಡೆಯಾಗಿದ್ದು, ಇದರ ವಿಶ್ಲೇಷಣೆಯ ಪ್ರಕಾರ, ವ್ಯಾಪಕ ವ್ಯತ್ಯಾಸಗಳೊಂದಿಗೆ ಮಣಿಪುರವನ್ನು ಹೊರತುಪಡಿಸಿ ಭಾರತದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ 30 ಮುಖ್ಯಮಂತ್ರಿಗಳ ಸರಾಸರಿ ಆಸ್ತಿ 54.42 ಕೋಟಿ ರೂ.ಗಳಷ್ಟಿದೆ ಎಂದು ತಿಳಿದುಬಂದಿದೆ.

30 ಸಿಎಂಗಳ ಒಟ್ಟು ಆಸ್ತಿ 1,632 ಕೋಟಿ ರೂ.ಪಾಯಿಗಳಷ್ಟಿದ್ದು, 30 ಸಿಎಂಗಳಲ್ಲಿ ಇಬ್ಬರು (7%) ಕೋಟ್ಯಾಧಿಪತಿಗಳು, ಆಂಧ್ರಪ್ರದೇಶದ ನಾರಾ ಚಂದ್ರಬಾಬು ನಾಯ್ಡು, ಒಟ್ಟು ಆಸ್ತಿ 931 ಕೋಟಿ ರೂಪಾಯಿ ಮೌಲ್ಯದ ಆಸ್ತಿಗಳನ್ನು ಹೊಂದಿದ್ದರೆ, ಅರುಣಾಚಲ ಪ್ರದೇಶದ ಪೆಮಾ ಖಂಡು, 332 ಕೋಟಿ ರೂ.ಗಳಿಗೂ ಹೆಚ್ಚು ಆಸ್ತಿ ಹೊಂದಿದ್ದಾರೆ.

ಮೂರನೇ ಸ್ಥಾನದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಇದ್ದು ಒಟ್ಟು ಆಸ್ತಿ ಮೌಲ್ಯ 51 ಕೋಟಿ ರೂಪಾಯಿಗಳನ್ನು ಹೊಂದಿದ್ದಾರೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 15.38 ಲಕ್ಷ ರೂ. ಗೂ ಹೆಚ್ಚು, ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ 55.24 ಲಕ್ಷ ರೂ. ಗೂ ಹೆಚ್ಚು ಮತ್ತು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ 1.18 ಕೋಟಿ ರೂಪಾಯಿಗಳನ್ನು ಹೊಂದಿದ್ದು ಅತಿ ಕಡಿಮೆ ಆಸ್ತಿ ಹೊಂದಿರುವ ಮುಖ್ಯಮಂತ್ರಿಗಳಾಗಿದ್ದಾರೆ.

ರಾಜಸ್ಥಾನದ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ (1.46 ಕೋಟಿ ರೂ.), ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ (1.54 ಕೋಟಿ ರೂ.), ಬಿಹಾರದ ನಿತೀಶ್ ಕುಮಾರ್ (1.64 ಕೋಟಿ ರೂ.), ಪಂಜಾಬ್‌ನ ಭಗವಂತ್ ಮಾನ್ (1.97 ಕೋಟಿ ರೂ.), ಒಡಿಶಾದ ಮೋಹನ್ ಚರಣ್ ಮಾಝಿ (1.97 ಕೋಟಿ ರೂ.) ಮತ್ತು ಛತ್ತೀಸ್‌ಗಢದ ವಿಷ್ಣು ದೇವ್ ಸಾಯಿ (3.80 ಕೋಟಿ ರೂ.) ಕಡಿಮೆ ಆಸ್ತಿ ಹೊಂದಿರುವ ಇತರ ಸಿಎಂ ಗಳಾಗಿದ್ದಾರೆ.

ದೇಶಾದ್ಯಂತ ರಾಜ್ಯ ವಿಧಾನಸಭೆಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 30 ಪ್ರಸ್ತುತ ಮುಖ್ಯಮಂತ್ರಿಗಳ ಸ್ವಯಂ ಪ್ರಮಾಣವಚನ ಸ್ವೀಕಾರ ಪ್ರಮಾಣಪತ್ರಗಳನ್ನು ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ವಿಶ್ಲೇಷಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೊನೆಗೂ ಯುದ್ಧ ಅಂತ್ಯಗೊಳಿಸಲು ಇರಾನ್ ಮುಂದು! ಆದ್ರೆ ಅಮೆರಿಕ, ಇಸ್ರೇಲ್ ಗೆ ಹಾಕಿದ ಷರತ್ತುಗಳೇನು?

ಇರಾಕ್ ಕರಾವಳಿಯಲ್ಲಿ ತೈಲ ಟ್ಯಾಂಕರ್ ಮೇಲೆ ಆತ್ಮಾಹುತಿ ದಾಳಿ: ಭಾರತೀಯ ಪ್ರಜೆ ಸಾವು

Death folder: ಅನಿವಾಸಿ ಭಾರತೀಯರು ಗಮನ ಹರಿಸಬೇಕಾದ ಅಂಶಗಳಿವು... (ಹಣಕ್ಲಾಸು)

20 ವರ್ಷಗಳಿಂದ ಆತನನ್ನು ಕೊಲ್ಲಲು ಬಯಸಿದ್ದೆ: ಫಾರೂಕ್ ಅಬ್ದುಲ್ಲಾ ಮೇಲೆ ದಾಳಿ ನಡೆಸಿದ ಶೂಟರ್ ಹೇಳಿಕೆ!

ಮೊಟ್ಟೆ ಪ್ರಿಯರಿಗೆ ಗುಡ್‌ ನ್ಯೂಸ್‌; ಬೆಲೆಯಲ್ಲಿ ಭಾರೀ ಇಳಿಕೆ, ಗ್ರಾಹಕರು ಸಂತಸ

SCROLL FOR NEXT