ಟ್ಯಾಂಕರ್ ಗೆ ಬೆಂಕಿ  
ದೇಶ

ಪಂಜಾಬ್‌ನಲ್ಲಿ ಎಲ್‌ಪಿಜಿ ಟ್ಯಾಂಕರ್ ಗೆ ಬೆಂಕಿ: ನಾಲ್ವರು ಸಜೀವ ದಹನ, ಸಾವಿನ ಸಂಖ್ಯೆ ಏಳಕ್ಕೆ ಏರಿಕೆ

ಟ್ಯಾಂಕರ್ ರಾಮ್ ನಗರ್ ಧೇಹಾ ಲಿಂಕ್ ರಸ್ತೆಯ ಕಡೆಗೆ ತಿರುಗುತ್ತಿದ್ದಾಗ ತರಕಾರಿ ತುಂಬಿದ ಪಿಕಪ್ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಎರಡೂ ವಾಹನಗಳು ಬೆಂಕಿಗೆ ಆಹುತಿಯಾದವು.

ಹೋಶಿಯಾಪುರ: ಎಲ್‌ಪಿಜಿ ಟ್ಯಾಂಕರ್ ಬೆಂಕಿ ಅವಘಡದಲ್ಲಿ ಸುಟ್ಟ ಗಾಯಗಳಿಂದ ಇನ್ನೂ ನಾಲ್ವರು ಜನರು ಮೃತಪಟ್ಟು ಸಾವಿನ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ.

ಹೋಶಿಯಾಪುರ ಜಿಲ್ಲಾಧಿಕಾರಿ ಆಶಿಕಾ ಜೈನ್, ಮಂಡಿಯಾಲ ನಿವಾಸಿಗಳಾದ ಮಂಜಿತ್ ಸಿಂಗ್ (60ವ), ವಿಜಯ್ (17ವ), ಜಸ್ವಿಂದರ್ ಕೌರ್ (65ವ) ಮತ್ತು ಆರಾಧನಾ ವರ್ಮಾ (30ವ) ಕಳೆದ ರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಶೇ. 90 ಕ್ಕೂ ಹೆಚ್ಚು ಸುಟ್ಟ ಗಾಯಗಳಿಂದ ಬಳಲುತ್ತಿದ್ದ ನಾಲ್ವರು ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಸಿವಿಲ್ ಸರ್ಜನ್ ಡಾ. ಪವನ್ ಕುಮಾರ್ ತಿಳಿಸಿದ್ದಾರೆ. ಶುಕ್ರವಾರ, ರಾತ್ರಿ 10 ಗಂಟೆ ಸುಮಾರಿಗೆ ಹೋಶಿಯಾಪುರ-ಜಲಂಧರ್ ರಸ್ತೆಯ ಮಂಡಿಯಾಲ ಅಡ್ಡಾ ಬಳಿ ಪಿಕಪ್ ವಾಹನಕ್ಕೆ ಡಿಕ್ಕಿ ಹೊಡೆದ ನಂತರ ಎಲ್‌ಪಿಜಿ ಟ್ಯಾಂಕರ್‌ಗೆ ಬೆಂಕಿ ಹೊತ್ತಿಕೊಂಡಿತು.

ಬೆಂಕಿ ವೇಗವಾಗಿ ಹರಡಿತು, ಸುಮಾರು 15 ಅಂಗಡಿಗಳು ಮತ್ತು ಸುತ್ತಮುತ್ತಲಿನ ಕನಿಷ್ಠ ನಾಲ್ಕು ಮನೆಗಳನ್ನು ಆವರಿಸಿತು ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ತಕ್ಷಣ ಇಬ್ಬರು ಮೃತಪಟ್ಟು, 21 ಮಂದಿ ಗಾಯಗೊಂಡರು.

ನಿನ್ನೆ ಶನಿವಾರ ಮತ್ತೊಬ್ಬರು ಸುಟ್ಟ ಗಾಯಗಳಿಗೆ ಬಲಿಯಾದರು.

ಟ್ಯಾಂಕರ್ ರಾಮ್ ನಗರ್ ಧೇಹಾ ಲಿಂಕ್ ರಸ್ತೆಯ ಕಡೆಗೆ ತಿರುಗುತ್ತಿದ್ದಾಗ ತರಕಾರಿ ತುಂಬಿದ ಪಿಕಪ್ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಎರಡೂ ವಾಹನಗಳು ಬೆಂಕಿಗೆ ಆಹುತಿಯಾದವು.

ಘಟನೆಯ ನಂತರ, ಒಬ್ಬ ವ್ಯಕ್ತಿಯನ್ನು ಹೋಶಿಯಾರ್‌ಪುರದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಇನ್ನೊಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟರು, ಮೂರನೆಯವರು ಅಮೃತಸರದ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಕರೆದೊಯ್ಯುವ ಮಾರ್ಗಮಧ್ಯೆ ನಿಧನರಾದರು ಎಂದು ಡಾ. ಪವನ್ ಕುಮಾರ್ ಹೇಳಿದರು.

ಮಂಡಿಯಾಲ ಮತ್ತು ಪಕ್ಕದ ಹಳ್ಳಿಗಳ ನೂರಾರು ನಿವಾಸಿಗಳು ಹೋಶಿಯಾರ್‌ಪುರ-ಜಲಂಧರ್ ರಸ್ತೆಯಲ್ಲಿ ಮೂರು ಗಂಟೆಗಳಿಗೂ ಹೆಚ್ಚು ಕಾಲ ಸಂಚಾರ ತಡೆದು ಘಟನೆಗೆ ಕಾರಣರಾದವರ ವಿರುದ್ಧ ಪರಿಹಾರ ಮತ್ತು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಪಂಜಾಬ್ ಸರ್ಕಾರದ ಫರಿಷ್ಟಾ ಯೋಜನೆಯಡಿಯಲ್ಲಿ ಗಾಯಾಳುಗಳಿಗೆ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಉಪ ಆಯುಕ್ತ ಜೈನ್ ಪ್ರತಿಭಟನಾಕಾರರಿಗೆ ಭರವಸೆ ನೀಡಿದರು.

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮೃತರ ಸಂಬಂಧಿಕರಿಗೆ ತಲಾ 2 ಲಕ್ಷ ರೂ. ಮತ್ತು ಗಾಯಾಳುಗಳಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ನೀಡುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'INS Vikrant ಪಾಕಿಗಳ ನಿದ್ರೆಗೆಡಿಸಿತ್ತು.. ಬ್ರಹ್ಮೋಸ್, ಆಕಾಶ್‌ ಕ್ಷಿಪಣಿಗಳಿಗೆ ಜಗತ್ತಿನಾದ್ಯಂತ ಬೇಡಿಕೆ ಬಂದಿದೆ': ಆಪರೇಷನ್ ಸಿಂದೂರ ಕುರಿತು ಪ್ರಧಾನಿ ಮೋದಿ

Bihar Polls: ನಾಮಪತ್ರ ಸಲ್ಲಿಕೆಗೆ ಕಡೆಯ ದಿನ, ಆರ್ ಜೆಡಿಯ 143 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ!

'96 ಲಕ್ಷ ನಕಲಿ ಮತದಾರರ ಸೇರ್ಪಡೆ': ಚುನಾವಣಾ ಆಯೋಗದ ವಿರುದ್ಧ ರಾಜ್ ಠಾಕ್ರೆ ಕಿಡಿ

'ಸಂಬಳ ನೀಡದೇ ಕಿರುಕುಳ': ಡೆತ್‌ ನೋಟ್‌ ಬರೆದು ಬೆಂಗಳೂರಿನಲ್ಲಿ ಓಲಾ ಎಂಜಿನಿಯರ್ ಆತ್ಮಹತ್ಯೆ, ಭವೀಶ್ ಅಗರ್ವಾಲ್ ವಿರುದ್ಧ ಪ್ರಕರಣ!

BBK 12: ರಘು V/S ಅಶ್ವಿನಿ ಗೌಡ, ಏಯ್... ಏಯ್... ಡೊಡ್ಮನೆಯಲ್ಲಿ ಏಕ ವಚನ ಪ್ರಯೋಗ! ವೀಕ್ಷಕರು ಏನಂತಾರೆ?

SCROLL FOR NEXT