ದೆಹಲಿ ಸಿಎಂ ಮೇಲೆ ಹಲ್ಲೆ ನಡೆಸಿದ ವ್ಯಕ್ತಿ ಬಂಧನ  
ದೇಶ

ದೆಹಲಿ ಸಿಎಂ ಮೇಲೆ ಹಲ್ಲೆ: ಇಬ್ಬರ ವಿರುದ್ಧ ಕ್ರಿಮಿನಲ್ ಪಿತೂರಿ ಕೇಸ್ ದಾಖಲು

ಈ ಹಲ್ಲೆ ಒಂದು ಪ್ರತ್ಯೇಕ ಕೃತ್ಯವಲ್ಲ, ಬದಲಾಗಿ ಯೋಜಿತ ಪಿತೂರಿಯ ಭಾಗವಾಗಿದೆ ಎಂದು ಸೂಚಿಸುವ ಪುರಾವೆಗಳನ್ನು ಕಂಡುಕೊಂಡ ನಂತರ ಹೊಸ ಆರೋಪವನ್ನು ಸೇರಿಸಲಾಗಿದೆ.

ನವದೆಹಲಿ: ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಮೇಲಿನ ಇತ್ತೀಚಿನ ದಾಳಿಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಸೋಮವಾರ ಇಬ್ಬರೂ ಆರೋಪಿಗಳ ವಿರುದ್ಧ ಕ್ರಿಮಿನಲ್ ಪಿತೂರಿ ಕೇಸ್ ದಾಖಲಿಸಿದ್ದಾರೆ.

ತನಿಖಾಧಿಕಾರಿಗಳು, ಈ ಹಲ್ಲೆ ಒಂದು ಪ್ರತ್ಯೇಕ ಕೃತ್ಯವಲ್ಲ, ಬದಲಾಗಿ ಯೋಜಿತ ಪಿತೂರಿಯ ಭಾಗವಾಗಿದೆ ಎಂದು ಸೂಚಿಸುವ ಪುರಾವೆಗಳನ್ನು ಕಂಡುಕೊಂಡ ನಂತರ ಹೊಸ ಆರೋಪವನ್ನು ಸೇರಿಸಲಾಗಿದೆ ಎಂದು ದೆಹಲಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈಗಾಗಲೇ ಬಂಧನದಲ್ಲಿರುವ ಆರೋಪಿಗಳಾದ ರಾಜೇಶ್‌ಭಾಯ್ ಖಿಮ್ಜಿ ಮತ್ತು ತಹ್ಸೀನ್ ಸೈಯದ್ ಇಬ್ಬರ ವಿರುದ್ಧವೂ ಹಲ್ಲೆ ಮತ್ತು ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಇದೀಗ ಭಾರತೀಯ ನ್ಯಾಯ ಸಂಹಿತಾ(ಬಿಎನ್‌ಎಸ್) ಸೆಕ್ಷನ್ 61 ರ ಅಡಿಯಲ್ಲಿ ಕ್ರಿಮಿನಲ್ ಪಿತೂರಿ ಆರೋಪವನ್ನೂ ಸೇರಿಸಲಾಗಿದೆ.

"ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗುತ್ತಿದೆ" ಎಂದು ಅಧಿಕಾರಿ ಹೇಳಿದ್ದಾರೆ.

ಆಗಸ್ಟ್ 20 ರಂದು ಬೆಳಗ್ಗೆ ಸಿವಿಲ್ ಲೈನ್ಸ್ ಪ್ರದೇಶದಲ್ಲಿರುವ ದೆಹಲಿ ಸಿಎಂ ಕ್ಯಾಂಪ್ ಕಚೇರಿಯಲ್ಲಿ 'ಜನ ಸಂವಾದ' ಕಾರ್ಯಕ್ರಮದ ಸಂದರ್ಭದಲ್ಲಿ ವ್ಯಕ್ತಿಯೊಬ್ಬ, ರೇಖಾ ಗುಪ್ತಾ ಅವರ ಹಲ್ಲೆ ನಡೆಸಿದ್ದರು. ಈ ಹಲ್ಲೆಯನ್ನು "ರೇಖಾ ಅವರನ್ನು ಕೊಲ್ಲಲು ಯೋಜಿತ ಪಿತೂರಿ"ಯ ಭಾಗ ಎಂದು ಅವರ ಕಚೇರಿ ಹೇಳಿದೆ. ಕೊಲೆ ಯತ್ನ ಆರೋಪಕ್ಕೆ ಸಂಬಂಧಿಸಿದಂತೆ ಗುಜರಾತ್‌ನ ರಾಜ್‌ಕೋಟ್‌ ನಿವಾಸಿ ಸಕರಿಯಾ ರಾಜೇಶ್‌ಭಾಯಿ ಖಿಮ್ಜಿಭಾಯಿ(41) ಎಂಬಾತನನ್ನು ಬಂಧಿಸಿ, ಎಫ್ಐಆರ್‌ ದಾಖಲಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

ಕಾರುಗಳ ಬೆಲೆಯಲ್ಲಿ ಆಗಲಿದೆ ಭಾರಿ ಇಳಿಕೆ: GST ಪರಿಷ್ಕರಣೆಗಾಗಿ ಕಾದು ಕುಳಿತ ಗ್ರಾಹಕರು!

IADWS: ಭಾರತೀಯ ಸೇನೆ ಬತ್ತಳಿಕೆಗೆ 'ಲೇಸರ್ ನಿರ್ದೇಶಿತ ಹೊಸ ಅಸ್ತ್ರ': ದಂಗಾದ ಚೀನಾ, ಹೇಳಿದ್ದು ಏನು?

ಗೌರಿ-ಗಣೇಶ ಹಬ್ಬ: ಪರಿಸರ ಕಾಳಜಿ ಮರೆಯದಿರೋಣ, ಜನತೆಗೆ ಸಿಎಂ ಸಿದ್ದರಾಮಯ್ಯ ಕರೆ! Video

SCROLL FOR NEXT