ಜಾಸ್ಮಿನ್ ಜಾಫರ್ 
ದೇಶ

Guruvayur ದೇವಸ್ಥಾನದ ಕೊಳದಲ್ಲಿ ಪಾದ ತೊಳೆದ ಜಾಸ್ಮಿನ್ ಜಾಫರ್: ಮಂಗಳವಾರ 'ಶುದ್ಧೀಕರಣ'; ಭಕ್ತರ ಪ್ರವೇಶಕ್ಕೆ ನಿರ್ಬಂಧ!

ಹಿಂದೂಯೇತರ ಮಹಿಳೆಯೊಬ್ಬರು ಕೊಳದ ಆವರಣ ಪ್ರವೇಶಿಸಿ ವಿಡಿಯೋ ಮಾಡಿ ದೇವಾಲಯದ ಸಂಪ್ರದಾಯಗಳನ್ನು ಮುರಿದಿದ್ದಾರೆ. ಹೀಗಾಗಿ ಆಗಸ್ಟ್ 26 ರಂದು ಶುದ್ಧೀಕರಣ ಕಾರ್ಯ ನಡೆಸಲಾಗುವುದು.

ತಿರುವನಂತಪುರ: ಮುಸ್ಲಿಂ ಮಹಿಳೆಯೊಬ್ಬರು ಪ್ರವೇಶಿಸಿದ್ದಕ್ಕೆ ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಗುರವಾಯೂರು ಶ್ರೀ ಕೃಷ್ಣ ದೇಗುಲದ ಕೊಳದಲ್ಲಿ ಮಂಗಳವಾರ 'ಶುದ್ದೀಕರಣ' ಕಾರ್ಯ ನಡೆಸಲು ತೀರ್ಮಾನಿಸಲಾಗಿದೆ.

ಇದೇ ಕಾರಣ: ಸಾಮಾಜಿಕ ಮಾಧ್ಯಮ ಇನ್ ಫ್ಲುಯೆನ್ಸರ್ ಜಾಸ್ಮಿನ್ ಜಾಫರ್ ದೇವಸ್ಥಾನದ ಕೊಳದಲ್ಲಿ ತಮ್ಮ ಪಾದಗಳನ್ನು ತೊಳೆಯುತ್ತಿರುವ ದೃಶ್ಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ವಿಡಿಯೋಗೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಅವರು ಪೋಸ್ಟ್ ಡಿಲೀಟ್ ಮಾಡಿ, ಕ್ಷಮೆಯಾಚಿಸಿದ್ದರು.

ಈ ಬೆಳವಣಿಗೆ ಬೆನ್ನಲ್ಲೇ ಶುದ್ದೀಕರಣ ಕಾರ್ಯದ ಬಗ್ಗೆ ದೇವಸ್ಥಾನದ ಆಡಳಿತ ಮಂಡಳಿ ನಿರ್ಧರಿಸಿದೆ.

ಈ ಸಂಬಂಧ ಪ್ರಕಟಣೆ ಹೊರಡಿಸಿದ್ದು, ಹಿಂದೂಯೇತರ ಮಹಿಳೆಯೊಬ್ಬರು ಕೊಳದ ಆವರಣ ಪ್ರವೇಶಿಸಿ ವಿಡಿಯೋ ಮಾಡಿ ದೇವಾಲಯದ ಸಂಪ್ರದಾಯಗಳನ್ನು ಮುರಿದಿದ್ದಾರೆ. ಹೀಗಾಗಿ ಆಗಸ್ಟ್ 26 ರಂದು ಶುದ್ಧೀಕರಣ ಕಾರ್ಯ ನಡೆಸಲಾಗುವುದು. ಅಂದು ಬೆಳಿಗ್ಗೆ 5 ರಿಂದ ಮಧ್ಯಾಹ್ನದವರೆಗೂ ದೇವಾಲಯಕ್ಕೆ ಭಕ್ತರ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ತಿಳಿಸಿದೆ.

ದೇವಾಲಯದ ಆವರಣದಲ್ಲಿ ರೀಲ್ಸ್ ಮಾಡುವುದಕ್ಕೆ ನಿರ್ಬಂಧವಿದ್ದರೂ ಅದನ್ನು ಉಲ್ಲಂಘಿಸಲಾಗಿದೆ ಎಂದು ದೇವಸ್ಥಾನದ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದಾರೆ. ನ್ಯಾಯಾಲಯ ನಿರ್ದೇಶನದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

SCROLL FOR NEXT