ಜಾಸ್ಮಿನ್ ಜಾಫರ್ 
ದೇಶ

Guruvayur ದೇವಸ್ಥಾನದ ಕೊಳದಲ್ಲಿ ಪಾದ ತೊಳೆದ ಜಾಸ್ಮಿನ್ ಜಾಫರ್: ಮಂಗಳವಾರ 'ಶುದ್ಧೀಕರಣ'; ಭಕ್ತರ ಪ್ರವೇಶಕ್ಕೆ ನಿರ್ಬಂಧ!

ಹಿಂದೂಯೇತರ ಮಹಿಳೆಯೊಬ್ಬರು ಕೊಳದ ಆವರಣ ಪ್ರವೇಶಿಸಿ ವಿಡಿಯೋ ಮಾಡಿ ದೇವಾಲಯದ ಸಂಪ್ರದಾಯಗಳನ್ನು ಮುರಿದಿದ್ದಾರೆ. ಹೀಗಾಗಿ ಆಗಸ್ಟ್ 26 ರಂದು ಶುದ್ಧೀಕರಣ ಕಾರ್ಯ ನಡೆಸಲಾಗುವುದು.

ತಿರುವನಂತಪುರ: ಮುಸ್ಲಿಂ ಮಹಿಳೆಯೊಬ್ಬರು ಪ್ರವೇಶಿಸಿದ್ದಕ್ಕೆ ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಗುರವಾಯೂರು ಶ್ರೀ ಕೃಷ್ಣ ದೇಗುಲದ ಕೊಳದಲ್ಲಿ ಮಂಗಳವಾರ 'ಶುದ್ದೀಕರಣ' ಕಾರ್ಯ ನಡೆಸಲು ತೀರ್ಮಾನಿಸಲಾಗಿದೆ.

ಇದೇ ಕಾರಣ: ಸಾಮಾಜಿಕ ಮಾಧ್ಯಮ ಇನ್ ಫ್ಲುಯೆನ್ಸರ್ ಜಾಸ್ಮಿನ್ ಜಾಫರ್ ದೇವಸ್ಥಾನದ ಕೊಳದಲ್ಲಿ ತಮ್ಮ ಪಾದಗಳನ್ನು ತೊಳೆಯುತ್ತಿರುವ ದೃಶ್ಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ವಿಡಿಯೋಗೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಅವರು ಪೋಸ್ಟ್ ಡಿಲೀಟ್ ಮಾಡಿ, ಕ್ಷಮೆಯಾಚಿಸಿದ್ದರು.

ಈ ಬೆಳವಣಿಗೆ ಬೆನ್ನಲ್ಲೇ ಶುದ್ದೀಕರಣ ಕಾರ್ಯದ ಬಗ್ಗೆ ದೇವಸ್ಥಾನದ ಆಡಳಿತ ಮಂಡಳಿ ನಿರ್ಧರಿಸಿದೆ.

ಈ ಸಂಬಂಧ ಪ್ರಕಟಣೆ ಹೊರಡಿಸಿದ್ದು, ಹಿಂದೂಯೇತರ ಮಹಿಳೆಯೊಬ್ಬರು ಕೊಳದ ಆವರಣ ಪ್ರವೇಶಿಸಿ ವಿಡಿಯೋ ಮಾಡಿ ದೇವಾಲಯದ ಸಂಪ್ರದಾಯಗಳನ್ನು ಮುರಿದಿದ್ದಾರೆ. ಹೀಗಾಗಿ ಆಗಸ್ಟ್ 26 ರಂದು ಶುದ್ಧೀಕರಣ ಕಾರ್ಯ ನಡೆಸಲಾಗುವುದು. ಅಂದು ಬೆಳಿಗ್ಗೆ 5 ರಿಂದ ಮಧ್ಯಾಹ್ನದವರೆಗೂ ದೇವಾಲಯಕ್ಕೆ ಭಕ್ತರ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ತಿಳಿಸಿದೆ.

ದೇವಾಲಯದ ಆವರಣದಲ್ಲಿ ರೀಲ್ಸ್ ಮಾಡುವುದಕ್ಕೆ ನಿರ್ಬಂಧವಿದ್ದರೂ ಅದನ್ನು ಉಲ್ಲಂಘಿಸಲಾಗಿದೆ ಎಂದು ದೇವಸ್ಥಾನದ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದಾರೆ. ನ್ಯಾಯಾಲಯ ನಿರ್ದೇಶನದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT