ಫಿಜಿಯ ಪ್ರಧಾನಿ ರಬುಕಾ ಅವರೊಂದಿಗೆ ಪ್ರಧಾನಿ ಮೋದಿ 
ದೇಶ

ಭಾರತ-ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

ಈ ಯೋಜನೆಯು ಜಾಗತಿಕ ದಕ್ಷಿಣ ಮತ್ತು ವಿಶಾಲವಾದ ಇಂಡೋ-ಪೆಸಿಫಿಕ್‌ ಪ್ರದೇಶದಲ್ಲಿ ಭಾರತದ ಪ್ರಬಲ ಕಾರ್ಯತಂತ್ರದ ಹೆಜ್ಜೆಯನ್ನು ಗುರುತಿಸುತ್ತದೆ. ಇಲ್ಲಿ ಪ್ರಾಬಲ್ಯ ಸಾಧಿಸಲು ಚೀನಾ ಹವಣಿಸುತ್ತಿದೆ.

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಫಿಜಿ ಪ್ರಧಾನಿ ಸಿಟಿವೇನಿ ಲಿಗಮಮಡ ರಬುಕಾ ನಡುವಿನ ವ್ಯಾಪಕ ಮಾತುಕತೆಗಳ ನಂತರ ಭಾರತ ಮತ್ತು ಫಿಜಿ ಸೋಮವಾರ ರಕ್ಷಣಾ ಸಹಕಾರ ವಿಸ್ತರಿಸಲು ವ್ಯಾಪಕವಾದ ಕಾರ್ಯ ಯೋಜನೆಯನ್ನು ಅಂತಿಮಗೊಳಿಸಿವೆ.

ಈ ಯೋಜನೆಯು ಜಾಗತಿಕ ದಕ್ಷಿಣ ಮತ್ತು ವಿಶಾಲವಾದ ಇಂಡೋ-ಪೆಸಿಫಿಕ್‌ ಪ್ರದೇಶದಲ್ಲಿ ಭಾರತದ ಪ್ರಬಲ ಕಾರ್ಯತಂತ್ರದ ಹೆಜ್ಜೆಯನ್ನು ಗುರುತಿಸುತ್ತದೆ. ಇಲ್ಲಿ ಪ್ರಾಬಲ್ಯ ಸಾಧಿಸಲು ಚೀನಾ ಹವಣಿಸುತ್ತಿದೆ.

ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ರಕ್ಷಣಾ ಮತ್ತು ಭದ್ರತಾ ವಲಯದಲ್ಲಿ ಪರಸ್ಪರ ಸಹಕಾರವನ್ನು ಬಲಪಡಿಸಲು ನಿರ್ಧರಿಸಿದ್ದೇವೆ. ಇದಕ್ಕಾಗಿ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಲಾಗಿದೆ. ಫಿಜಿಯ ಕಡಲ ಭದ್ರತಾ ಸಾಮರ್ಥ್ಯಗಳನ್ನು ಹೆಚ್ಚಿಸಲು ಭಾರತವು ತರಬೇತಿ ಮತ್ತು ಸಲಕರಣೆಗಳನ್ನು ಒದಗಿಸುತ್ತದೆ ಎಂದು ತಿಳಿಸಿದರು.

ಫಿಜಿ ಪ್ರಧಾನಿಯಾದ ಇದೇ ಮೊದಲ ಬಾರಿಗೆ ಭಾನುವಾರ ದೆಹಲಿಗೆ ಆಗಮಿಸಿದ ರಬುಕಾ ಅವರ ಸಮ್ಮುಖದಲ್ಲಿ ರಕ್ಷಣೆ, ವಿಪತ್ತು ನಿರ್ವಹಣೆ, ಶಿಕ್ಷಣ ಮತ್ತು ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಏಳು ಒಪ್ಪಂದಗಳಿಗೆ ಫಿಜಿ ಮತ್ತು ಭಾರತ ಸಹಿ ಹಾಕಿದವು.

ಮುಕ್ತ ಮತ್ತು ಸುರಕ್ಷಿತ ಇಂಡೋ-ಪೆಸಿಫಿಕ್ ವಲಯದ ಖಾತ್ರಿಯಲ್ಲಿ ಫಿಜಿಯನ್ನು ಪ್ರಮುಖ ಪಾಲುದಾರ ರಾಷ್ಟ್ರವಾಗಿ ಭಾರತ ನೋಡುತ್ತಿದೆ.

ಭಾರತ ಮತ್ತು ಫಿಜಿ ಸಾಗರಗಳ ನಡುವೆ ಇರಬಹುದು, ಆದರೆ ನಮ್ಮ ಆಕಾಂಕ್ಷೆಗಳು ಒಂದೇ ದೋಣಿಯಲ್ಲಿ ಸಾಗುತ್ತವೆ" ಎಂದು ಮೋದಿ ಹೇಳುವ ಮೂಲಕ ಪರಸ್ಪರ ಮೌಲ್ಯಗಳು ಮತ್ತು ಕಾರ್ಯತಂತ್ರವನ್ನು ಒತ್ತಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

SCROLL FOR NEXT