ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ 
ದೇಶ

ರಾಹುಲ್ ಗಾಂಧಿ 'ಸರಣಿ ಸುಳ್ಳುಗಾರ': 'ಮತ ಕಳ್ಳತನ' ಆರೋಪದ ಬಗ್ಗೆ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್

ಬಿಜೆಪಿ ಮತಗಳನ್ನು "ಕದ್ದಿದೆ" ಎಂಬ ರಾಹುಲ್ ಗಾಂಧಿಯವರ ಆರೋಪಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಫಡ್ನವೀಸ್, ಸುಳ್ಳು ಮಾಹಿತಿಗೆ ಎಂದಿಗೂ ಯಾವುದೇ ಆಧಾರವಿರುವುದಿಲ್ಲ. ಸುಳ್ಳಿನ ಮೇಲೆ ಕಟ್ಟಲಾದ ಕೋಟೆ ಕುಸಿಯುತ್ತದೆ ಎಂದರು.

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸೋಮವಾರ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು 'ಸರಣಿ ಸುಳ್ಳುಗಾರ' ಎಂದು ಕರೆದಿದ್ದು, ಬಿಜೆಪಿ ವಿರುದ್ಧದ 'ಮತ ಕಳ್ಳತನ' ಆರೋಪಗಳನ್ನು ತಿರಸ್ಕರಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ರಾಹುಲ್ ಗಾಂಧಿ ಒಬ್ಬ ಸರಣಿ ಸುಳ್ಳುಗಾರ ಎಂದು ನಾನು ಮೊದಲೇ ಹೇಳಿದ್ದೇನೆ. ಅವರು ನಿರಂತರವಾಗಿ ಸುಳ್ಳುಗಳನ್ನು ಹರಡುತ್ತಿದ್ದಾರೆ. ಮಹಾರಾಷ್ಟ್ರದ ಕೆಲವು ನಾಯಕರು ಕೂಡ ರಾಹುಲ್ ಗಾಂಧಿ ಸತ್ಯವನ್ನು ಮಾತನಾಡುತ್ತಿದ್ದಾರೆಂದು ಇದ್ದಕ್ಕಿದ್ದಂತೆ ಅರಿತುಕೊಂಡಿರುವುದನ್ನು ನೋಡಿ ನನಗೆ ನೋವುಂಟಾಗಿದೆ' ಎಂದು ಅವರು ಹೇಳಿದರು.

ಬಿಜೆಪಿ ಮತಗಳನ್ನು "ಕದ್ದಿದೆ" ಎಂಬ ರಾಹುಲ್ ಗಾಂಧಿಯವರ ಆರೋಪಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಫಡ್ನವೀಸ್, ಸುಳ್ಳು ಮಾಹಿತಿಗೆ ಎಂದಿಗೂ ಯಾವುದೇ ಆಧಾರವಿರುವುದಿಲ್ಲ. ಸುಳ್ಳಿನ ಮೇಲೆ ಕಟ್ಟಲಾದ ಕೋಟೆ ಕುಸಿಯುತ್ತದೆ. ಚುನಾವಣೆಗಳನ್ನು ಗೆಲ್ಲಲು, ರಾಜಕಾರಣಿಗಳು ಸಾರ್ವಜನಿಕರೊಂದಿಗೆ ಸಂಪರ್ಕ ಸಾಧಿಸಬೇಕು ಮತ್ತು ಅವರ ವಿಶ್ವಾಸವನ್ನು ಗಳಿಸಬೇಕು. ಸುಳ್ಳು ಹೇಳಿಕೆಗಳನ್ನು ಮಾತ್ರ ಅವಲಂಬಿಸಿದರೆ, ಅವರು ಸಾರ್ವಜನಿಕರನ್ನು ಮೂರ್ಖರನ್ನಾಗಿ ಮಾಡಲು ಸಾಧ್ಯವಿಲ್ಲ. ಬದಲಿಗೆ ಅವರು ತಮ್ಮನ್ನು ತಾವೇ ಮೂರ್ಖರನ್ನಾಗಿ ಮಾಡಿಕೊಳ್ಳುತ್ತಿದ್ದಾರೆ' ಎಂದು ಹೇಳಿದರು.

ಕರ್ನಾಟಕ, ಮಹಾರಾಷ್ಟ್ರ ಮತ್ತು ಹರಿಯಾಣದಲ್ಲಿ ಮತಗಳನ್ನು ಕದಿಯಲಾಗಿದೆ ಮತ್ತು ಮುಂಬರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಬಿಹಾರದಲ್ಲಿ ಜನರ ಮತಗಳನ್ನು ಕದಿಯಲು ಕೇಂದ್ರದ ಆಡಳಿತಾರೂಢ ಬಿಜೆಪಿ ಚುನಾವಣಾ ಆಯೋಗದ ಜೊತೆಗೂಡಿ ಪ್ರಯತ್ನಿಸುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ) ಸೇರಿದಂತೆ ಇತರ ಕೆಲವು ವಿರೋಧ ಪಕ್ಷಗಳು "ಮತ ಕಳ್ಳತನ"ದ ವಿಷಯವನ್ನು ಎತ್ತಿದ್ದು, ನಕಲಿ ಮತದಾರರನ್ನು ಕಂಡುಹಿಡಿಯಲು ಮತದಾರರ ಪಟ್ಟಿಯನ್ನು ಪರಿಶೀಲಿಸುವಂತೆ ತಮ್ಮ ಪಕ್ಷದ ಕಾರ್ಯಕರ್ತರನ್ನು ಕೇಳಿಕೊಂಡಿವೆ.

ಮಹಾರಾಷ್ಟ್ರ ನವನಿರ್ಮಾಣ ಸೇನಾ ಮುಖ್ಯಸ್ಥ ರಾಜ್ ಠಾಕ್ರೆ ಕೂಡ 2016 ರಿಂದ ನಾನು "ಮತ ಕಳ್ಳತನ"ದ ಬಗ್ಗೆ ಮಾತನಾಡುತ್ತಿದ್ದೇನೆ. ರಾಹುಲ್ ಗಾಂಧಿ ಮತ್ತು ಬಿಜೆಪಿ ನಾಯಕ ಅನುರಾಗ್ ಠಾಕೂರ್ ಇಬ್ಬರೂ ಮತದಾರರ ಪಟ್ಟಿ ವಂಚನೆಯ ಆರೋಪ ಮಾಡಿದಾಗ ಚುನಾವಣಾ ಆಯೋಗ ತನಿಖೆ ನಡೆಸಬೇಕಿತ್ತು ಎಂದು ಹೇಳಿದ್ದಾರೆ.

ಮತ ಕಳ್ಳತನ ಆರೋಪ ಮಾಡುತ್ತಿರುವ ನಾಯಕರು ತಮ್ಮ ಸೋಲಿನ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳುವ ಬದಲು ಚುನಾವಣೆಯಲ್ಲಿನ ಸೋಲಿಗೆ ಸಾಂತ್ವನ ಹೇಳಿಕೊಳ್ಳಲು ಹಾಗೆ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಫಡ್ನವೀಸ್ ಭಾನುವಾರ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

'ಮನ್ರೇಗಾ ಬಚಾವೋ' ಸಂಗ್ರಾಮ: ಕಾಂಗ್ರೆಸ್ ಪಕ್ಷದಿಂದ ದೇಶಾದ್ಯಂತ 45 ದಿನಗಳ ಹೋರಾಟ ಆರಂಭ!

ಮಹಾರಾಷ್ಟ್ರದಲ್ಲಿ ಸಿಎಂ, ಡಿಸಿಎಂ ಮುಸುಕಿನ ಗುದ್ದಾಟ: ಅಜಿತ್ ಪವಾರ್ ವಿರುದ್ಧ ಫಡ್ನವೀಸ್ ಕಿಡಿ!

ಭಾಷಾ ಮಸೂದೆ ವಿರೋಧಿಸಿ ಸಿದ್ದರಾಮಯ್ಯ ಪತ್ರ: ಕೇರಳ ಸಿಎಂ ಸ್ಪಷ್ಟೀಕರಣ; ಪಿಣರಾಯಿ ವಿಜಯನ್ ಹೇಳಿದ್ದೇನು?

SCROLL FOR NEXT