ಮನೋಜ್ ಜರಂಗೆ 
ದೇಶ

ಪೂರ್ವಾನುಮತಿ ಇಲ್ಲದೆ ಜರಂಗೆ ಪ್ರತಿಭಟನೆ ನಡೆಸುವಂತಿಲ್ಲ: ಬಾಂಬೆ ಹೈಕೋರ್ಟ್

ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಮತ್ತು ನ್ಯಾಯಮೂರ್ತಿ ಸಂದೀಪ್ ಮಾರ್ನೆ ಅವರ ಪೀಠ, ಪ್ರಜಾಪ್ರಭುತ್ವ ಮತ್ತು ಭಿನ್ನಾಭಿಪ್ರಾಯಗಳು ಒಟ್ಟಿಗೆ ಇದ್ದರೂ, ನಿಗದಿತ ಸ್ಥಳಗಳಲ್ಲಿ ಮಾತ್ರ ಪ್ರತಿಭಟನೆ ನಡೆಸಬೇಕು ಎಂದು ಹೇಳಿದೆ.

ಮುಂಬೈ: ಮರಾಠ ಮೀಸಲಾತಿ ಹೋರಾಟಗಾರ ಮನೋಜ್ ಜರಂಗೆ ಅವರು ಅಧಿಕಾರಿಗಳಿಂದ ಪೂರ್ವಾನುಮತಿ ಪಡೆಯದೆ ಪ್ರತಿಭಟನೆ ನಡೆಸುವಂತಿಲ್ಲ ಮತ್ತು ಸಾರ್ವಜನಿಕ ಸ್ಥಳಗಳನ್ನು ಅನಿರ್ದಿಷ್ಟವಧಿಗೆ ಆಕ್ರಮಿಸಿಕೊಳ್ಳುವಂತಿಲ್ಲ ಎಂದು ಮಂಗಳವಾರ ಬಾಂಬೆ ಹೈಕೋರ್ಟ್ ಹೇಳಿದೆ.

ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಮತ್ತು ನ್ಯಾಯಮೂರ್ತಿ ಸಂದೀಪ್ ಮಾರ್ನೆ ಅವರ ಪೀಠ, ಪ್ರಜಾಪ್ರಭುತ್ವ ಮತ್ತು ಭಿನ್ನಾಭಿಪ್ರಾಯಗಳು ಒಟ್ಟಿಗೆ ಇದ್ದರೂ, ನಿಗದಿತ ಸ್ಥಳಗಳಲ್ಲಿ ಮಾತ್ರ ಪ್ರತಿಭಟನೆ ನಡೆಸಬೇಕು ಎಂದು ಹೇಳಿದೆ.

ಮುಂಬೈನಲ್ಲಿ ವೇಗದ ಜೀವನಕ್ಕೆ ತೊಂದರೆಯಾಗದಂತೆ ಶಾಂತಿಯುತ ಪ್ರತಿಭಟನೆ ನಡೆಸಲು ಪ್ರತಿವಾದಿ(ಜರಂಗೆ)ಗೆ ನವಿ ಮುಂಬೈನ ಖಾರ್ಘರ್‌ನಲ್ಲಿ ಪರ್ಯಾಯ ಸ್ಥಳ ನೀಡಬೇಕೆ ಎಂಬುದರ ಕುರಿತು ಸರ್ಕಾರ ನಿರ್ಧಾರ ತೆಗೆದುಕೊಳ್ಳಬಹುದು ಎಂದು ಪೀಠ ಹೇಳಿದೆ.

ಇತರೆ ಹಿಂದುಳಿದ ವರ್ಗಗಳ(ಒಬಿಸಿ) ಗುಂಪಿನ ಅಡಿಯಲ್ಲಿ ಮರಾಠಾ ಸಮುದಾಯಕ್ಕೆ ಶೇಕಡಾ 10 ರಷ್ಟು ಮೀಸಲಾತಿ ನೀಡಲು ಜರಂಗೆ ಮಹಾರಾಷ್ಟ್ರ ಸರ್ಕಾರಕ್ಕೆ ಮಂಗಳವಾರದವರೆಗೆ ಅಂತಿಮ ಗಡುವು ನೀಡಿದ್ದು, ಅದು ವಿಫಲವಾದರೆ ಮರಾಠಾ ಬೆಂಬಲಿಗರೊಂದಿಗೆ ಮುಂಬೈವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಆಗಸ್ಟ್ 29 ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಹೇಳಿದ್ದಾರೆ.

ಗಣೇಶ ಹಬ್ಬದ ಸಂದರ್ಭದಲ್ಲಿ ಮುಂಬೈನಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಉಲ್ಲೇಖಿಸಿದ ಕೋರ್ಟ್, ಸಾರ್ವಜನಿಕ ಸಭೆಗಳು ಮತ್ತು ಪ್ರತಿಭಟನೆಗಳಿಗೆ ಹೊಸ ನಿಯಮಗಳ ಅಡಿಯಲ್ಲಿ ಅನುಮತಿ ಪಡೆದ ನಂತರ ಶಾಂತಿಯುತ ಪ್ರತಿಭಟನೆ ಕೈಗೊಳ್ಳಬಹುದು ಎಂದು ನ್ಯಾಯಾಲಯ ಹೇಳಿದೆ.

ಪ್ರತಿವಾದಿಗಳು(ಜರಂಗೆ ಮತ್ತು ಅವರ ಸಹಚರರು) ಸಂಬಂಧಪಟ್ಟ ಅಧಿಕಾರಿಗಳಿಂದ ಅನುಮತಿ ಕೋರಿ ಅರ್ಜಿ ಸಲ್ಲಿಸಲು ಸ್ವತಂತ್ರರಾಗಿದ್ದು, ನಂತರ ಕಾನೂನಿನ ನಿಬಂಧನೆಗಳ ಪ್ರಕಾರ ಸರ್ಕಾರ ಅದನ್ನು ನಿರ್ಧರಿಸಲು ಮುಕ್ತವಾಗಿರುತ್ತದೆ ಎಂದು ಪೀಠವು ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್