ಮನೋಜ್ ಜರಂಗೆ 
ದೇಶ

ಪೂರ್ವಾನುಮತಿ ಇಲ್ಲದೆ ಜರಂಗೆ ಪ್ರತಿಭಟನೆ ನಡೆಸುವಂತಿಲ್ಲ: ಬಾಂಬೆ ಹೈಕೋರ್ಟ್

ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಮತ್ತು ನ್ಯಾಯಮೂರ್ತಿ ಸಂದೀಪ್ ಮಾರ್ನೆ ಅವರ ಪೀಠ, ಪ್ರಜಾಪ್ರಭುತ್ವ ಮತ್ತು ಭಿನ್ನಾಭಿಪ್ರಾಯಗಳು ಒಟ್ಟಿಗೆ ಇದ್ದರೂ, ನಿಗದಿತ ಸ್ಥಳಗಳಲ್ಲಿ ಮಾತ್ರ ಪ್ರತಿಭಟನೆ ನಡೆಸಬೇಕು ಎಂದು ಹೇಳಿದೆ.

ಮುಂಬೈ: ಮರಾಠ ಮೀಸಲಾತಿ ಹೋರಾಟಗಾರ ಮನೋಜ್ ಜರಂಗೆ ಅವರು ಅಧಿಕಾರಿಗಳಿಂದ ಪೂರ್ವಾನುಮತಿ ಪಡೆಯದೆ ಪ್ರತಿಭಟನೆ ನಡೆಸುವಂತಿಲ್ಲ ಮತ್ತು ಸಾರ್ವಜನಿಕ ಸ್ಥಳಗಳನ್ನು ಅನಿರ್ದಿಷ್ಟವಧಿಗೆ ಆಕ್ರಮಿಸಿಕೊಳ್ಳುವಂತಿಲ್ಲ ಎಂದು ಮಂಗಳವಾರ ಬಾಂಬೆ ಹೈಕೋರ್ಟ್ ಹೇಳಿದೆ.

ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಮತ್ತು ನ್ಯಾಯಮೂರ್ತಿ ಸಂದೀಪ್ ಮಾರ್ನೆ ಅವರ ಪೀಠ, ಪ್ರಜಾಪ್ರಭುತ್ವ ಮತ್ತು ಭಿನ್ನಾಭಿಪ್ರಾಯಗಳು ಒಟ್ಟಿಗೆ ಇದ್ದರೂ, ನಿಗದಿತ ಸ್ಥಳಗಳಲ್ಲಿ ಮಾತ್ರ ಪ್ರತಿಭಟನೆ ನಡೆಸಬೇಕು ಎಂದು ಹೇಳಿದೆ.

ಮುಂಬೈನಲ್ಲಿ ವೇಗದ ಜೀವನಕ್ಕೆ ತೊಂದರೆಯಾಗದಂತೆ ಶಾಂತಿಯುತ ಪ್ರತಿಭಟನೆ ನಡೆಸಲು ಪ್ರತಿವಾದಿ(ಜರಂಗೆ)ಗೆ ನವಿ ಮುಂಬೈನ ಖಾರ್ಘರ್‌ನಲ್ಲಿ ಪರ್ಯಾಯ ಸ್ಥಳ ನೀಡಬೇಕೆ ಎಂಬುದರ ಕುರಿತು ಸರ್ಕಾರ ನಿರ್ಧಾರ ತೆಗೆದುಕೊಳ್ಳಬಹುದು ಎಂದು ಪೀಠ ಹೇಳಿದೆ.

ಇತರೆ ಹಿಂದುಳಿದ ವರ್ಗಗಳ(ಒಬಿಸಿ) ಗುಂಪಿನ ಅಡಿಯಲ್ಲಿ ಮರಾಠಾ ಸಮುದಾಯಕ್ಕೆ ಶೇಕಡಾ 10 ರಷ್ಟು ಮೀಸಲಾತಿ ನೀಡಲು ಜರಂಗೆ ಮಹಾರಾಷ್ಟ್ರ ಸರ್ಕಾರಕ್ಕೆ ಮಂಗಳವಾರದವರೆಗೆ ಅಂತಿಮ ಗಡುವು ನೀಡಿದ್ದು, ಅದು ವಿಫಲವಾದರೆ ಮರಾಠಾ ಬೆಂಬಲಿಗರೊಂದಿಗೆ ಮುಂಬೈವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಆಗಸ್ಟ್ 29 ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಹೇಳಿದ್ದಾರೆ.

ಗಣೇಶ ಹಬ್ಬದ ಸಂದರ್ಭದಲ್ಲಿ ಮುಂಬೈನಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಉಲ್ಲೇಖಿಸಿದ ಕೋರ್ಟ್, ಸಾರ್ವಜನಿಕ ಸಭೆಗಳು ಮತ್ತು ಪ್ರತಿಭಟನೆಗಳಿಗೆ ಹೊಸ ನಿಯಮಗಳ ಅಡಿಯಲ್ಲಿ ಅನುಮತಿ ಪಡೆದ ನಂತರ ಶಾಂತಿಯುತ ಪ್ರತಿಭಟನೆ ಕೈಗೊಳ್ಳಬಹುದು ಎಂದು ನ್ಯಾಯಾಲಯ ಹೇಳಿದೆ.

ಪ್ರತಿವಾದಿಗಳು(ಜರಂಗೆ ಮತ್ತು ಅವರ ಸಹಚರರು) ಸಂಬಂಧಪಟ್ಟ ಅಧಿಕಾರಿಗಳಿಂದ ಅನುಮತಿ ಕೋರಿ ಅರ್ಜಿ ಸಲ್ಲಿಸಲು ಸ್ವತಂತ್ರರಾಗಿದ್ದು, ನಂತರ ಕಾನೂನಿನ ನಿಬಂಧನೆಗಳ ಪ್ರಕಾರ ಸರ್ಕಾರ ಅದನ್ನು ನಿರ್ಧರಿಸಲು ಮುಕ್ತವಾಗಿರುತ್ತದೆ ಎಂದು ಪೀಠವು ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT