ಮನೋಜ್ ಜರಂಗೆ 
ದೇಶ

ಪೂರ್ವಾನುಮತಿ ಇಲ್ಲದೆ ಜರಂಗೆ ಪ್ರತಿಭಟನೆ ನಡೆಸುವಂತಿಲ್ಲ: ಬಾಂಬೆ ಹೈಕೋರ್ಟ್

ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಮತ್ತು ನ್ಯಾಯಮೂರ್ತಿ ಸಂದೀಪ್ ಮಾರ್ನೆ ಅವರ ಪೀಠ, ಪ್ರಜಾಪ್ರಭುತ್ವ ಮತ್ತು ಭಿನ್ನಾಭಿಪ್ರಾಯಗಳು ಒಟ್ಟಿಗೆ ಇದ್ದರೂ, ನಿಗದಿತ ಸ್ಥಳಗಳಲ್ಲಿ ಮಾತ್ರ ಪ್ರತಿಭಟನೆ ನಡೆಸಬೇಕು ಎಂದು ಹೇಳಿದೆ.

ಮುಂಬೈ: ಮರಾಠ ಮೀಸಲಾತಿ ಹೋರಾಟಗಾರ ಮನೋಜ್ ಜರಂಗೆ ಅವರು ಅಧಿಕಾರಿಗಳಿಂದ ಪೂರ್ವಾನುಮತಿ ಪಡೆಯದೆ ಪ್ರತಿಭಟನೆ ನಡೆಸುವಂತಿಲ್ಲ ಮತ್ತು ಸಾರ್ವಜನಿಕ ಸ್ಥಳಗಳನ್ನು ಅನಿರ್ದಿಷ್ಟವಧಿಗೆ ಆಕ್ರಮಿಸಿಕೊಳ್ಳುವಂತಿಲ್ಲ ಎಂದು ಮಂಗಳವಾರ ಬಾಂಬೆ ಹೈಕೋರ್ಟ್ ಹೇಳಿದೆ.

ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಮತ್ತು ನ್ಯಾಯಮೂರ್ತಿ ಸಂದೀಪ್ ಮಾರ್ನೆ ಅವರ ಪೀಠ, ಪ್ರಜಾಪ್ರಭುತ್ವ ಮತ್ತು ಭಿನ್ನಾಭಿಪ್ರಾಯಗಳು ಒಟ್ಟಿಗೆ ಇದ್ದರೂ, ನಿಗದಿತ ಸ್ಥಳಗಳಲ್ಲಿ ಮಾತ್ರ ಪ್ರತಿಭಟನೆ ನಡೆಸಬೇಕು ಎಂದು ಹೇಳಿದೆ.

ಮುಂಬೈನಲ್ಲಿ ವೇಗದ ಜೀವನಕ್ಕೆ ತೊಂದರೆಯಾಗದಂತೆ ಶಾಂತಿಯುತ ಪ್ರತಿಭಟನೆ ನಡೆಸಲು ಪ್ರತಿವಾದಿ(ಜರಂಗೆ)ಗೆ ನವಿ ಮುಂಬೈನ ಖಾರ್ಘರ್‌ನಲ್ಲಿ ಪರ್ಯಾಯ ಸ್ಥಳ ನೀಡಬೇಕೆ ಎಂಬುದರ ಕುರಿತು ಸರ್ಕಾರ ನಿರ್ಧಾರ ತೆಗೆದುಕೊಳ್ಳಬಹುದು ಎಂದು ಪೀಠ ಹೇಳಿದೆ.

ಇತರೆ ಹಿಂದುಳಿದ ವರ್ಗಗಳ(ಒಬಿಸಿ) ಗುಂಪಿನ ಅಡಿಯಲ್ಲಿ ಮರಾಠಾ ಸಮುದಾಯಕ್ಕೆ ಶೇಕಡಾ 10 ರಷ್ಟು ಮೀಸಲಾತಿ ನೀಡಲು ಜರಂಗೆ ಮಹಾರಾಷ್ಟ್ರ ಸರ್ಕಾರಕ್ಕೆ ಮಂಗಳವಾರದವರೆಗೆ ಅಂತಿಮ ಗಡುವು ನೀಡಿದ್ದು, ಅದು ವಿಫಲವಾದರೆ ಮರಾಠಾ ಬೆಂಬಲಿಗರೊಂದಿಗೆ ಮುಂಬೈವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಆಗಸ್ಟ್ 29 ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಹೇಳಿದ್ದಾರೆ.

ಗಣೇಶ ಹಬ್ಬದ ಸಂದರ್ಭದಲ್ಲಿ ಮುಂಬೈನಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಉಲ್ಲೇಖಿಸಿದ ಕೋರ್ಟ್, ಸಾರ್ವಜನಿಕ ಸಭೆಗಳು ಮತ್ತು ಪ್ರತಿಭಟನೆಗಳಿಗೆ ಹೊಸ ನಿಯಮಗಳ ಅಡಿಯಲ್ಲಿ ಅನುಮತಿ ಪಡೆದ ನಂತರ ಶಾಂತಿಯುತ ಪ್ರತಿಭಟನೆ ಕೈಗೊಳ್ಳಬಹುದು ಎಂದು ನ್ಯಾಯಾಲಯ ಹೇಳಿದೆ.

ಪ್ರತಿವಾದಿಗಳು(ಜರಂಗೆ ಮತ್ತು ಅವರ ಸಹಚರರು) ಸಂಬಂಧಪಟ್ಟ ಅಧಿಕಾರಿಗಳಿಂದ ಅನುಮತಿ ಕೋರಿ ಅರ್ಜಿ ಸಲ್ಲಿಸಲು ಸ್ವತಂತ್ರರಾಗಿದ್ದು, ನಂತರ ಕಾನೂನಿನ ನಿಬಂಧನೆಗಳ ಪ್ರಕಾರ ಸರ್ಕಾರ ಅದನ್ನು ನಿರ್ಧರಿಸಲು ಮುಕ್ತವಾಗಿರುತ್ತದೆ ಎಂದು ಪೀಠವು ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT