ನಟ-ರಾಜಕಾರಣಿ ವಿಜಯ್ ಸುತ್ತ ನೆರೆದಿರುವ ಬೌನ್ಸರ್ ಗಳು 
ದೇಶ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು; ವಿಡಿಯೋದಲ್ಲಿ ಏನಿದೆ?

ನಟನನ್ನು ಹತ್ತಿರದಿಂದ ನೋಡಲು ಪ್ರಯತ್ನಿಸಿದಾಗ ವಿಜಯ್ ಬೌನ್ಸರ್‌ಗಳು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರುದಾರ ಶರತ್ ಕುಮಾರ್ ಆರೋಪಿಸಿದ್ದಾರೆ.

ಮಧುರೈ: ತಮಿಳುನಾಡಿನ ಮಧುರೈನಲ್ಲಿ ನಡೆದ ಪಕ್ಷದ ಕಾರ್ಯಕ್ರಮವೊಂದರಲ್ಲಿ ಬೌನ್ಸರ್ ಗಳು ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ಹಾಗೂ ನಟ ವಿಜಯ್ ವಿರುದ್ಧ ಪ್ರಕರಣ ದಾಖಲಾಗಿದೆ.

ನಟನನ್ನು ಹತ್ತಿರದಿಂದ ನೋಡಲು ಪ್ರಯತ್ನಿಸಿದಾಗ ವಿಜಯ್ ಬೌನ್ಸರ್‌ಗಳು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರುದಾರ ಶರತ್ ಕುಮಾರ್ ಆರೋಪಿಸಿದ್ದಾರೆ. 2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭೆ ಚುನಾವಣೆಗೆ ಮುನ್ನ ಮಧುರೈನಲ್ಲಿ ವಿಜಯ್ ಅವರ ರಾಜಕೀಯ ರ‍್ಯಾಲಿಯಲ್ಲಿ ಈ ಘಟನೆ ನಡೆದಿದೆ.

ಸುದ್ದಿ ಸಂಸ್ಥೆ ಎಎನ್‌ಐ ಹಂಚಿಕೊಂಡ ಆಗಸ್ಟ್ 21 ರ ರ‍್ಯಾಲಿಯ ವೀಡಿಯೊದಲ್ಲಿ, ಟಿವಿಕೆ ಮುಖ್ಯಸ್ಥ ವಿಜಯ್ ರ‍್ಯಾಂಪ್ ವಾಕ್ ಮಾಡುವುದನ್ನು ಕಾಣಬಹುದು, ಆದರೆ ಬದಿಗಳಲ್ಲಿ ನೆರೆದಿದ್ದ ಲಕ್ಷಾಂತರ ಜನರು ವಿಜಯ್ ಅವರತ್ತ ಕೈ ಬೀಸಿ, ಘೋಷಣೆ ಕೂಗಿ ಹುರಿದುಂಬಿಸುತ್ತಾರೆ.

ಏಳು ನಿಮಿಷಗಳ ಅವಧಿಯ ವೀಡಿಯೊದ ಪ್ರಾರಂಭದಲ್ಲಿ, ಕನಿಷ್ಠ ಏಳು ಅಡಿ ಎತ್ತರದ ರ‍್ಯಾಂಪ್ ನಿಂದ ಒಬ್ಬ ವ್ಯಕ್ತಿಯನ್ನು ಎಸೆಯುವುದನ್ನು ಕಾಣಬಹುದು. ವಿಜಯ್ ನಡೆಯುತ್ತಿದ್ದಂತೆ ಅವರಿಗೆ ಶಾಲು ನೀಡಲು ಹಲವಾರು ಅಭಿಮಾನಿಗಳು ನುಗ್ಗುತ್ತಾರೆ. ಇದೇ ರೀತಿ ನುಗ್ಗಲು ಯತ್ನಿಸಿದ ವ್ಯಕ್ತಿಯನ್ನು ಬೌನ್ಸರ್‌ಗಳು ಹಿಡಿದು ಎಸೆದಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.

ಈ ಸಂಬಂಧ ಅವರು ಮಂಗಳವಾರ ಪೆರಂಬಲೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವಿಜಯ್ ಮತ್ತು ಅವರ ಬೌನ್ಸರ್‌ಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 189 (2), 296 (ಬಿ) ಮತ್ತು 115 (ಐ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದು ಕಾನೂನುಬಾಹಿರವಾಗಿ ಸೇರುವುದು ಮತ್ತು ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆಗೆ ಗುರಿಯಾಗುವ ಅಪರಾಧಕ್ಕೆ ಕುಮ್ಮಕ್ಕು ನೀಡುವುದನ್ನು ಒಳಗೊಂಡಿರುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT