ಅಮೆರಿಕ ಖಜಾನೆ ಮುಖ್ಯಸ್ಥ ಸ್ಕಾಟ್ ಬೆಸೆಂಟ್ 
ದೇಶ

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಭಾರತೀಯ ರಫ್ತುಗಳ ಮೇಲಿನ ಸುಂಕದ ಪರಿಣಾಮ ಭಯಪಡುವಷ್ಟು ತೀವ್ರವಾಗಿದೆ ಅನ್ನಿಸುತ್ತಿಲ್ಲ.

ನವದೆಹಲಿ: ರಷ್ಯಾದಿಂದ ತೈಲ ಮತ್ತು ರಕ್ಷಣಾ ಉಪಕರಣಗಳ ಖರೀದಿ ಹಿನ್ನೆಲೆಯಲ್ಲಿ ಭಾರತದ ಮೇಲೆ ಶೇ.25 ರಷ್ಟು ಹೆಚ್ಚುವರಿ ಸುಂಕದೊಂದಿಗೆ ಒಟ್ಟಾರೇ ಶೇ.50 ರಷ್ಟು ಅಮೆರಿಕದ ಸುಂಕ ಇಂದಿನಿಂದ ಜಾರಿಗೆ ಬಂದಿರುವಂತೆಯೇ ಉಭಯ ದೇಶಗಳ ನಡುವಿನ ಸುಂಕದ ಸಂಘರ್ಷ ಮತ್ತಷ್ಟು ತಾರಕಕ್ಕೇರಿದೆ.

ಈ ಮಧ್ಯೆ US ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್, ಆಶಾವಾದದ ಮಾತುಗಳನ್ನಾಡಿದ್ದು, ದ್ವಿಪಕ್ಷೀಯ ಸಂಬಂಧಗಳ ಬಲವರ್ಧನೆ ಬಗ್ಗೆ ವಿಶ್ವಾಸ ಹೊಂದಿರುವುದಾಗಿ ಹೇಳಿದ್ದಾರೆ.

ಫಾಕ್ಸ್ ಬ್ಯುಸಿನೆಸ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಬೆಸೆಂಟ್, ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವವಾಗಿದೆ, ಯುಎಸ್ ವಿಶ್ವದ ಅತಿದೊಡ್ಡ ಆರ್ಥಿಕತೆಯಾಗಿದೆ. ಕೊನೆಯಲ್ಲಿ ನಾವು ಒಟ್ಟಿಗೆ ಸೇರಿ ಚರ್ಚಿಸುತ್ತೇವೆ ಎಂದಿದ್ದಾರೆ.

ಆದಾಗ್ಯೂ ಭಾರತದ ಜೊತೆಗೆ ಇನ್ನೂ ವ್ಯಾಪಾರ ಒಪ್ಪಂದವೇರ್ಪಡೆ ವಿಳಂಬವಾಗಿರುವುದನ್ನು ಒಪ್ಪಿಕೊಂಡಿದ್ದಾರೆ. ನಮ್ಮಲ್ಲಿ ಇನ್ನೂ ಒಪ್ಪಂದ ಆಗಿಲ್ಲ. ಮೇ ಅಥವಾ ಜೂನ್ ವೇಳೆಗೆ ನಾವು ಒಪ್ಪಂದ ಪೂರ್ಣಗೊಳ್ಳಿಸುವ ನಿರೀಕ್ಷೆಯಲ್ಲಿದ್ದೆ. ಆದರೆ ಅದು ಸಾಧ್ಯವಾಗಿಲ್ಲ. ರಷ್ಯಾದ ಕಚ್ಚಾ ತೈಲ ಖರೀದಿಯ ಸಮಸ್ಯೆಯೂ ಇದೆ. ಅದರಿಂದ ಅವರು ಲಾಭ ಗಳಿಸುತ್ತಿದ್ದಾರೆ ಎಂದು ಅವರು ಹೇಳಿದರು.

ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಉನ್ನತ ಮಟ್ಟದಲ್ಲಿ ಬಲವಾದ ಬಾಂಧವ್ಯ ಹೊಂದಿದ್ದರೂ, ಇದು ಸಂಕೀರ್ಣವಾದ ಸಂಬಂಧವಾಗಿದೆ. ಕೇವಲ ರಷ್ಯಾದ ತೈಲದ ಬಗ್ಗೆ ಮಾತ್ರವಲ್ಲ ಎಂದು ಬೆಸೆಂಟ್ ಹೇಳಿದರು.

ಸುಂಕ ಸಮಸ್ಯೆ ಬಗೆಹರಿಸಲು ಪ್ರಯತ್ನ ಮುಂದುವರಿಕೆ:

"ಭಾರತ ಮತ್ತು ಅಮೆರಿಕ ನಡುವೆ ಸಂವಹನ ಮಾರ್ಗಗಳು ಮುಕ್ತವಾಗಿದ್ದು, ಪ್ರಸ್ತುತ ಸುಂಕದ ಸಮಸ್ಯೆ ಪರಿಹರಿಸಲು ಪ್ರಯತ್ನಗಳು ಮುಂದುವರಿಯುತ್ತವೆ ಎಂದು ಸರ್ಕಾರಿ ಮೂಲಗಳು ಬುಧವಾರ ತಿಳಿಸಿವೆ.

ಭಾರತೀಯ ರಫ್ತುಗಳ ಮೇಲಿನ ಸುಂಕದ ಪರಿಣಾಮ ಭಯಪಡುವಷ್ಟು ತೀವ್ರವಾಗಿದೆ ಅನ್ನಿಸುತ್ತಿಲ್ಲ. ಸಮಸ್ಯೆಯನ್ನು ಪರಿಹರಿಸಲು ಭಾರತ ಮತ್ತು ಅಮೆರಿಕ ನಡುವೆ ಮಾತುಕತೆಗಳು ನಡೆಯುತ್ತಿವೆ. ಭಾರತ ಮತ್ತು ಯುಎಸ್ ನಡುವಿನ ದೀರ್ಘಾವಧಿಯ ಸಂಬಂಧದಲ್ಲಿ ಇದು ತಾತ್ಕಾಲಿಕ ಹಂತವಾಗಿದೆ ಎಂದು ಮೂಲಗಳು ಹೇಳಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

Theaterisation: 'ಥಿಯೇಟರ್ ಕಮಾಂಡ್‌' ರಚನೆ; ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

SCROLL FOR NEXT