ಭದ್ರತಾ ಸಿಬ್ಬಂದಿ ಸಾಂದರ್ಭಿಕ ಚಿತ್ರ 
ದೇಶ

Encounter: ಮಹಾರಾಷ್ಟ್ರ-ಛತ್ತೀಸ್‌ಗಢ ಗಡಿಯಲ್ಲಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ನಕ್ಸಲೀಯರ ಹತ್ಯೆ!

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ರಮೇಶ್ ನೇತೃತ್ವದ ತಂಡ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಂತೆ ನಕ್ಸಲೀಯರು ಗುಂಡಿನ ದಾಳಿ ನಡೆಸಿದ್ದಾರೆ. ಭದ್ರತಾ ಸಿಬ್ಬಂದಿ ಪ್ರತಿದಾಳಿ ನಡೆಸಿದ್ದಾರೆ.

ಗಡ್ಚಿರೋಲಿ: ಪೂರ್ವ ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಬುಧವಾರ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಮಹಿಳೆಯರು ಸೇರಿದಂತೆ ಕನಿಷ್ಠ ನಾಲ್ವರು ನಕ್ಸಲೀಯರನ್ನು ಹೊಡೆದುರುಳಿಸಲಾಗಿದೆ. ಛತ್ತೀಸ್‌ಗಢದ ಗಡ್ಚಿರೋಲಿ ಮತ್ತು ನಾರಾಯಣಪುರ ಜಿಲ್ಲೆಯ ಗಡಿಯಲ್ಲಿ ಈ ಘಟನೆ ನಡೆದಿದೆ ಎಂದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೋಪರ್ಶಿ ಅರಣ್ಯ ಪ್ರದೇಶದಲ್ಲಿ ನಕ್ಸಲೀಯರು ಇರುವ ಬಗ್ಗೆ ಆಗಸ್ಟ್ 25 ರಂದು ಪೊಲೀಸರಿಗೆ ವಿಶ್ವಾಸಾರ್ಹ ಮಾಹಿತಿ ದೊರೆತ ನಂತರ ನಕ್ಸಲ್ ವಿರೋಧಿ ಕಮಾಂಡೋ ಪಡೆ ಮತ್ತು ಸಿಆರ್‌ಪಿಎಫ್‌ನ ಕ್ಷೀಪ್ರ ಕಾರ್ಯಪಡೆಯ ಎರಡು ತುಕಡಿಗಳನ್ನು ಪ್ರದೇಶಕ್ಕೆ ಅಲ್ಲಿಗೆ ಕಳುಹಿಸಲಾಗಿತ್ತು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ರಮೇಶ್ ನೇತೃತ್ವದ ತಂಡ ಇಂದು ಬೆಳಗ್ಗೆ ಅರಣ್ಯ ಪ್ರದೇಶ ತಲುಪಿದ್ದು, ಶೋಧ ಕಾರ್ಯಾಚರಣೆ ನಡೆಸುತ್ತಿದ್ದಂತೆ ನಕ್ಸಲೀಯರು ಗುಂಡಿನ ದಾಳಿ ನಡೆಸಿದ್ದಾರೆ. ಭದ್ರತಾ ಸಿಬ್ಬಂದಿ ಪ್ರತಿದಾಳಿ ನಡೆಸಿದ್ದಾರೆ.

ಸುಮಾರು ಎಂಟು ಗಂಟೆಗಳ ಕಾಲ ಗುಂಡಿನ ಚಕಮಕಿ ನಡೆದಿದ್ದು, ಮೂವರು ಮಹಿಳೆಯರು ಮತ್ತು ಒಬ್ಬ ಪುರುಷನ ಮೃತದೇಹಗಳನ್ನು ಮತ್ತು ಒಂದು ಎಸ್‌ಎಲ್‌ಆರ್ ರೈಫಲ್, ಎರಡು ಐಎನ್‌ಎಸ್‌ಎಎಸ್ ರೈಫಲ್‌ಗಳು ಮತ್ತು ಒಂದು 303 ರೈಫಲ್ ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉಳಿದ ನಕ್ಸಲರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಅವರು ಹೇಳಿಕೆಯಲ್ಲಿ ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel

ಜೈ ಜವಾನ್, ಜೈ ಕಿಸಾನ್: ಐತಿಹಾಸಿಕ ಶತಕದ ಬಳಿಕ ಹೊಸ ಟ್ಯಾಟೂ ರಿವೀಲ್ ಮಾಡಿದ Dhruv Jurel