ಮದುವೆ (ಸಂಗ್ರಹ ಚಿತ್ರ) 
ದೇಶ

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಹರಿಯಾಣದ ಸಫಿಡಾನ್ ಕ್ಷೇತ್ರದ ಬಿಜೆಪಿ ಶಾಸಕ ರಾಮ್ ಕುಮಾರ್ ಗೌತಮ್ ಮಂಗಳವಾರ ಮದುವೆಗೆ ಮುನ್ನ ಪೋಷಕರ ಅನುಮತಿ ಕಡ್ಡಾಯಗೊಳಿಸುವ ಕಾನೂನು ಜಾರಿಗೆ ತರಬೇಕು ಎಂದು ಕರೆ ನೀಡಿದ್ದಾರೆ.

ಚಂಡೀಗಢ: ಪ್ರೀತಿ ನೆಪನೀಡಿ ತಂದೆತಾಯಿಗೆ ಹೇಳದೇ ಓಡಿ ಹೋಗಿ ಮದುವೆಯಾಗುವ ಮಕ್ಕಳ ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಬೇಕು ಎಂದು ಹರ್ಯಾಣ ಬಿಜೆಪಿ ಶಾಸಕರೊಬ್ಬರು ಆಗ್ರಹಿಸಿದ್ದಾರೆ.

ಹರಿಯಾಣದ ಸಫಿಡಾನ್ ಕ್ಷೇತ್ರದ ಬಿಜೆಪಿ ಶಾಸಕ ರಾಮ್ ಕುಮಾರ್ ಗೌತಮ್ ಮಂಗಳವಾರ ಮದುವೆಗೆ ಮುನ್ನ ಪೋಷಕರ ಅನುಮತಿ ಕಡ್ಡಾಯಗೊಳಿಸುವ ಕಾನೂನು ಜಾರಿಗೆ ತರಬೇಕು ಎಂದು ಕರೆ ನೀಡಿದ್ದಾರೆ. 'ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಇದು ಅಗತ್ಯವಾಗಿದೆ ಎಂದು ಹೇಳಿದರು.

ಹರಿಯಾಣ ವಿಧಾನಸಭೆಯ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಶಾಸಕ ರಾಮ್ ಕುಮಾರ್ ಗೌತಮ್, 'ಹುಡುಗರು ಮತ್ತು ಹುಡುಗಿಯರು ಓಡಿಹೋಗುತ್ತಾರೆ. ಪೋಷಕರು ನಂತರ ಆತ್ಮಹತ್ಯೆ ಮಾಡಿಕೊಳ್ಳುವಂತೆ ಒತ್ತಾಯಿಸುವ ಪ್ರಕರಣಗಳಿವೆ. ಸರ್ಕಾರಕ್ಕೆ ನನ್ನ ವಿನಂತಿಯೆಂದರೆ ಮದುವೆಗೆ ಮುನ್ನ ಹುಡುಗರು ಮತ್ತು ಹುಡುಗಿಯರು ಪೋಷಕರ ಅನುಮತಿ ಕಡ್ಡಾಯವಾಗಿರುವ ಕಾನೂನನ್ನು ಮಾಡಬೇಕು" ಎಂದು ಹೇಳಿದರು.

ಇದೇ ವೇಳೆ ಭೂ ಸಂಗ್ರಹಣಾ ದರಗಳ ವಿಷಯವನ್ನು ಸಹ ಅವರು ಎತ್ತಿದರು. ಕೆಲವು ಸ್ಥಳಗಳಲ್ಲಿ ಈ ದರಗಳು ಮತ್ತು ಮಾರುಕಟ್ಟೆ ದರಗಳ ನಡುವೆ ದೊಡ್ಡ ಅಂತರವಿದೆ. ಎಲ್ಲಿ ದೊಡ್ಡ ಅಂತರವಿದೆಯೋ, ಅದನ್ನು ಸರಿಪಡಿಸಬೇಕು, ಅದು ಭ್ರಷ್ಟಾಚಾರವನ್ನು ತಡೆಯಲು ಸಹಾಯ ಮಾಡುತ್ತದೆ" ಎಂದು ಆಡಳಿತಾರೂಢ ಬಿಜೆಪಿ ಶಾಸಕ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

SCROLL FOR NEXT