ಭಾರತ ಪ್ರವೇಶಿಸಿರುವ ಮೂವರು ಉಗ್ರರು. 
ದೇಶ

ನೇಪಾಳ ಗಡಿ ಮೂಲಕ ಮೂವರು LET ಉಗ್ರರು ಭಾರತ ಪ್ರವೇಶ: ಬಿಹಾರದಲ್ಲಿ ಹೈ ಅಲರ್ಟ್

ಮೂವರು ಉಗ್ರರು ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜೈಶ್-ಇ-ಮೊಹಮ್ಮದ್ (ಜೆಇಎಂ) ಗೆ ಸೇರಿದವರು ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಪಾಟ್ನಾ: ನಿಷೇಧಿತ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆ ಮೂವರು ಉಗ್ರರು ನೇಪಾಳ ಗಡಿಯ ಮೂಲಕ ಭಾರತ ಪ್ರವೇಶಿಸಿದ್ದು, ಮುಂಬರೂವ ಬಿಹಾರ ವಿಧಾನಸಭೆ ಚುನಾವಣೆ ವೇಳೆ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದಾರಂದು ತಿಳಿದುಬಂದಿದೆ.

ಗುಪ್ತಚರ ಮಾಹಿತಿ ಹಿನ್ನೆಲೆಯಲ್ಲಿ ಬಿಹಾರ ಪೊಲೀಸ್ ಪ್ರಧಾನ ಕಚೇರಿಯು ಗುರುವಾರ ಬಿಹಾರ ರಾಜ್ಯದಲ್ಲಿ ಹೈ ಅಲರ್ಟ್ ಘೋಷಿಸಿದೆ.

ಉಗ್ರರು ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜೈಶ್-ಇ-ಮೊಹಮ್ಮದ್ (ಜೆಇಎಂ) ಗೆ ಸೇರಿದವರು ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಉಗ್ರರನ್ನು ರಾವಲ್ಪಿಂಡಿ ನಿವಾಸಿ ಹಸ್ನಾನಿನ್ ಅಲಿ, ಉಮರ್ಕೋಟ್‌ನ ಆದಿಲ್ ಹುಸೇನ್ ಮತ್ತು ಭವಾಲ್ಪುರದ ಮೊಹಮ್ಮದ್ ಉಸ್ಮಾನ್ ಎಂದು ಗುರುತಿಸಲಾಗಿದೆ. ಈ ಮೂವರು ಆಗಸ್ಟ್ ಎರಡನೇ ವಾರದಲ್ಲಿ ನೇಪಾಳದ ಕಠ್ಮಂಡುವಿಗೆ ಆಗಮಿಸಿ, ಗಡಿ ಮೂಲಕ ಕಳೆದ ವಾರ ಬಿಹಾರ ತಲುಪಿದ್ದಾರೆ. ಇವರಿಗೆ ಸ್ಥಳೀಯ ನೇಪಾಳಿ ನಿವಾಸಿಯೊಬ್ಬರು ನೆರವು ನೀಡಿದ್ದಾರೆಂದು ಮೂಲಗಳು ಮಾಹಿತಿ ನೀಡಿವೆ.

ಯಾವುದೇ ಅನುಮಾನಾಸ್ಪದ ವ್ಯಕ್ತಿಗಳು ಅಥವಾ ಚಟುವಟಿಕೆಗಳ ಬಗ್ಗೆ ಸಾರ್ವಜನಿಕರು ಜಾಗರೂಕರಾಗಿರಿ ಮತ್ತು ತಕ್ಷಣ ಪೊಲೀಸರಿಗೆ ತಿಳಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಚುನಾವಣೆ ಹತ್ತಿರ ಬರುತ್ತಿದ್ದು, ಶಂಕಿತ ಉಗ್ರರ ವಿರುದ್ಧ ತೀವ್ರ ಶೋಧ ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ. ಭದ್ರತೆ ಹೆಚ್ಚಿಸಲಾಗಿದ್ದು, ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸುಪ್ರೀಂ ಕೋರ್ಟ್ ತೀರ್ಪಿಗೆ ಡೋಂಟ್ ಕೇರ್: ಶೇ.10ರಷ್ಟು ಜಾಗತಿಕ ಸುಂಕ ಘೋಷಿಸಿದ Donald Trump, ಭಾರತ ಒಪ್ಪಂದ ವಿಷಯ ಪ್ರಸ್ತಾಪ-Video

ನೂತನ ಪಾಲಿಕೆಗಳಿಗೆ 6,500 ಸಿಬ್ಬಂದಿಗಳ ನೇಮಕ: ಆರ್ಥಿಕ ಹೊರೆ ಎಂದ ಸರ್ಕಾರ, ಮರು ಪರಿಶೀಲನೆಗೆ GBA ಮುಂದು..!

ಬಾಗಲಕೋಟೆಯ ಜಮಖಂಡಿ ಬಳಿ ಭೀಕರ ಅಪಘಾತ: ಮಗು ಸೇರಿ ನಾಲ್ವರು ಸ್ಥಳದಲ್ಲೇ ಸಾವು

ಈಜಿಪುರ ಫ್ಲೈಓವರ್ ಕಾಮಗಾರಿ ವಿಳಂಬ: ಗುತ್ತಿಗೆದಾರರ ವಿರುದ್ಧ GBA ಕಿಡಿ, ಜುಲೈ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಖಡಕ್ ಸೂಚನೆ

ಬೆಂಗಳೂರು ಅನಧಿಕೃತ ಪಿಜಿಗಳ ವಿರುದ್ಧ ಕ್ರಮಕ್ಕೆ GBA ಮುಂದು: ಜಂಟಿ ತಪಾಸಣಾ ತಂಡ ರಚನೆ, 15 ದಿನಗಳಲ್ಲಿ ವರದಿ ಸಲ್ಲಿಸುವಂತೆ ಸೂಚನೆ

SCROLL FOR NEXT