ಮಲ್ಲಿಕಾರ್ಜುನ ಖರ್ಗೆ 
ದೇಶ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಅಬ್ಕಿ ಬಾರ್, ಟ್ರಂಪ್ ಸರ್ಕಾರ್ ಭಾರತದ ಮೇಲೆ ಶೇ.50ರಷ್ಟು ಸುಂಕವನ್ನು ವಿಧಿಸಿದೆ. ಈ ಸುಂಕದ ಮೊದಲ ಆಘಾತವಾಗಿ ನಾವು 10 ವಲಯಗಳಲ್ಲಿ ಅಂದಾಜು 2.17 ಲಕ್ಷ ಕೋಟಿ ನಷ್ಟ ಅನುಭವಿಸುತ್ತೇವೆ.

ನವದಹಲಿ: ಭಾರತದ ರಫ್ತಿನ ಮೇಲೆ ಶೇ.50 ರಷ್ಟು ಸುಂಕ ವಿಧಿಸಿರುವ ಅಮೆರಿಕಾ ಕ್ರಮಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ದೇಶವನ್ನು ರಕ್ಷಿಸುವಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಫಲರಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರಧಾನಿ ಮೋದಿ ನಗು, ಅಪ್ಪುಗೆ ಮತ್ತು ಸೆಲ್ಫಿಗಳ ಬದಲು ಪರಿಣಾಮಕಾರಿ ವಿದೇಶಾಂಗ ನೀತಿಗಳತ್ತ ಗಮನಹರಿಸಿ ಎಂದು ಖರ್ಗೆ ಸಲಹೆ ನೀಡಿದ್ದಾರೆ.

ಇಂದಿನಿಂದ ‘ಅಬ್ಕಿ ಬಾರ್, ಟ್ರಂಪ್ ಸರ್ಕಾರ್ ಭಾರತದ ಮೇಲೆ ಶೇ.50ರಷ್ಟು ಸುಂಕವನ್ನು ವಿಧಿಸಿದೆ. ಈ ಸುಂಕದ ಮೊದಲ ಆಘಾತವಾಗಿ ನಾವು 10 ವಲಯಗಳಲ್ಲಿ ಅಂದಾಜು 2.17 ಲಕ್ಷ ಕೋಟಿ ನಷ್ಟ ಅನುಭವಿಸುತ್ತೇವೆ ಎಂದು ಹೇಳಿದ್ದಾರೆ.

ಇದೇ ವೇಲೆ ಅಮೆರಿಕದೊಂದಿಗಿನ ದ್ವಿಪಕ್ಷೀಯ ವ್ಯಾಪಾರ ಮಾತುಕತೆಗಳ ನಡುವೆ ರೈತರ ಹಿತಾಸಕ್ತಿಗಳನ್ನು ಕಾಪಾಡುವ ಬಗ್ಗೆ ಮೋದಿ ನೀಡಿದ್ದ ಭರವಸೆಗಳನ್ನು ಉಲ್ಲೇಖಿಸಿರುವ ಖರ್ಗೆಯವರು, ಸುಂಕಗಳಿಂದ ಹೆಚ್ಚು ದುಷ್ಪರಿಣಾಮ ಬೀರುತ್ತಿರುವುದು ರೈತರ ಮೇಲೆ. ಅವರ ಹಿತಾಸಕ್ತಿ ಕಾಪಾಡುವ ಮಾತನಾಡಿದ್ದ ಮೋದಿ ಭರವಸೆ ವಿಫಲವಾಗಿದೆ ಎಂದು ತಿಳಿಸಿದ್ದಾರೆ.

ಅಮೆರಿಕಾ ಸುಂಕಾಸ್ತ್ರದಿಂದ ಜವಳಿ ವಲಯವು ಅತ್ಯಂತ ಕಠಿಣ ಪರಿಣಾಮ ಎದುರಿಸುತ್ತಿದ್ದು, ಅಂದಾಜು 5,00,000 ಉದ್ಯೋಗಿಗಳ ಅತಂತ್ರರಾಗಿದ್ದಾರೆ. ಇದಷ್ಟೆ ಅಲ್ಲದೇ ರತ್ನ ಮತ್ತು ಆಭರಣದಂತಹ ಉದ್ಯಮಕ್ಕೂ ಹೊಡೆತ ಬಿದ್ದಿದೆ. ಶೇ.50ರಷ್ಟು ಸುಂಕ ನೀತಿ ಇದೇ ನೀರಿ ಮುಂದುವರೆದರೆ ರತ್ನಗಳು ಮತ್ತು ಆಭರಣ ವಲಯದಲ್ಲಿ 1,50,000 ರಿಂದ 2,00,000 ಉದ್ಯಮಗಳು ಅಪಾಯಕ್ಕೆ ಸಿಲುಕಲಿವೆ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಹಸಸಿಂಹ, ಏಜೆಂಟ್ ಅಮರ್ ಚಿತ್ರ ಖ್ಯಾತಿಯ ನಿರ್ದೇಶಕ ಜೋ ಸೈಮನ್ ಹೃದಯಾಘಾತದಿಂದ ನಿಧನ

ಹೊಸ PMO ಕಚೇರಿ 'ಸೇವಾ ತೀರ್ಥ' ಕಟ್ಟಡಕ್ಕೆ ಪ್ರಧಾನಿ ಮೋದಿ ಸ್ಥಳಾಂತರ: ಮೊದಲ ದಿನವೇ ಹಲವು ಪ್ರಮುಖ ನಿರ್ಧಾರ!

ಪ್ರೇಮಿಗಳ ದಿನಾಚರಣೆಗೆ ಕ್ಷಣಗಣನೆ: ಹಾರ್ದಿಕ್ ಪಾಂಡ್ಯಗೆ ಮಹಿಕಾ ಕೊಟ್ಟ 'ಸ್ಪೆಷಲ್ ಗಿಫ್ಟ್' ಏನು ಗೊತ್ತಾ? Video

ವಿಜಯ್ ಗೆ ಜನರಿಗೆ ಸಹಾಯ ಮಾಡುವ ಉದ್ದೇಶ ಇಲ್ಲ: ಸಿಂಪಲ್ ಆಗಿ ಸಿಎಂ ಆಗುವ ಬಯಕೆ- ಡಿಎಂಕೆ ತಿರುಗೇಟು

5,000 ಕೊಟ್ಟರೂ ತಗೋಳಿ, ಆದರೆ ಅವರಿಗೆ ಶಿಳ್ಳೆ ಹೊಡೆದು ಹೇಳಿ': DMK ವಿರುದ್ಧ TVK ಮುಖ್ಯಸ್ಥ ವಿಜಯ್ ವಾಗ್ದಾಳಿ

SCROLL FOR NEXT