ಮಲ್ಲಿಕಾರ್ಜುನ ಖರ್ಗೆ 
ದೇಶ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಅಬ್ಕಿ ಬಾರ್, ಟ್ರಂಪ್ ಸರ್ಕಾರ್ ಭಾರತದ ಮೇಲೆ ಶೇ.50ರಷ್ಟು ಸುಂಕವನ್ನು ವಿಧಿಸಿದೆ. ಈ ಸುಂಕದ ಮೊದಲ ಆಘಾತವಾಗಿ ನಾವು 10 ವಲಯಗಳಲ್ಲಿ ಅಂದಾಜು 2.17 ಲಕ್ಷ ಕೋಟಿ ನಷ್ಟ ಅನುಭವಿಸುತ್ತೇವೆ.

ನವದಹಲಿ: ಭಾರತದ ರಫ್ತಿನ ಮೇಲೆ ಶೇ.50 ರಷ್ಟು ಸುಂಕ ವಿಧಿಸಿರುವ ಅಮೆರಿಕಾ ಕ್ರಮಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ದೇಶವನ್ನು ರಕ್ಷಿಸುವಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಫಲರಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರಧಾನಿ ಮೋದಿ ನಗು, ಅಪ್ಪುಗೆ ಮತ್ತು ಸೆಲ್ಫಿಗಳ ಬದಲು ಪರಿಣಾಮಕಾರಿ ವಿದೇಶಾಂಗ ನೀತಿಗಳತ್ತ ಗಮನಹರಿಸಿ ಎಂದು ಖರ್ಗೆ ಸಲಹೆ ನೀಡಿದ್ದಾರೆ.

ಇಂದಿನಿಂದ ‘ಅಬ್ಕಿ ಬಾರ್, ಟ್ರಂಪ್ ಸರ್ಕಾರ್ ಭಾರತದ ಮೇಲೆ ಶೇ.50ರಷ್ಟು ಸುಂಕವನ್ನು ವಿಧಿಸಿದೆ. ಈ ಸುಂಕದ ಮೊದಲ ಆಘಾತವಾಗಿ ನಾವು 10 ವಲಯಗಳಲ್ಲಿ ಅಂದಾಜು 2.17 ಲಕ್ಷ ಕೋಟಿ ನಷ್ಟ ಅನುಭವಿಸುತ್ತೇವೆ ಎಂದು ಹೇಳಿದ್ದಾರೆ.

ಇದೇ ವೇಲೆ ಅಮೆರಿಕದೊಂದಿಗಿನ ದ್ವಿಪಕ್ಷೀಯ ವ್ಯಾಪಾರ ಮಾತುಕತೆಗಳ ನಡುವೆ ರೈತರ ಹಿತಾಸಕ್ತಿಗಳನ್ನು ಕಾಪಾಡುವ ಬಗ್ಗೆ ಮೋದಿ ನೀಡಿದ್ದ ಭರವಸೆಗಳನ್ನು ಉಲ್ಲೇಖಿಸಿರುವ ಖರ್ಗೆಯವರು, ಸುಂಕಗಳಿಂದ ಹೆಚ್ಚು ದುಷ್ಪರಿಣಾಮ ಬೀರುತ್ತಿರುವುದು ರೈತರ ಮೇಲೆ. ಅವರ ಹಿತಾಸಕ್ತಿ ಕಾಪಾಡುವ ಮಾತನಾಡಿದ್ದ ಮೋದಿ ಭರವಸೆ ವಿಫಲವಾಗಿದೆ ಎಂದು ತಿಳಿಸಿದ್ದಾರೆ.

ಅಮೆರಿಕಾ ಸುಂಕಾಸ್ತ್ರದಿಂದ ಜವಳಿ ವಲಯವು ಅತ್ಯಂತ ಕಠಿಣ ಪರಿಣಾಮ ಎದುರಿಸುತ್ತಿದ್ದು, ಅಂದಾಜು 5,00,000 ಉದ್ಯೋಗಿಗಳ ಅತಂತ್ರರಾಗಿದ್ದಾರೆ. ಇದಷ್ಟೆ ಅಲ್ಲದೇ ರತ್ನ ಮತ್ತು ಆಭರಣದಂತಹ ಉದ್ಯಮಕ್ಕೂ ಹೊಡೆತ ಬಿದ್ದಿದೆ. ಶೇ.50ರಷ್ಟು ಸುಂಕ ನೀತಿ ಇದೇ ನೀರಿ ಮುಂದುವರೆದರೆ ರತ್ನಗಳು ಮತ್ತು ಆಭರಣ ವಲಯದಲ್ಲಿ 1,50,000 ರಿಂದ 2,00,000 ಉದ್ಯಮಗಳು ಅಪಾಯಕ್ಕೆ ಸಿಲುಕಲಿವೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮೋದಿ ಜೊತೆ ಮಾತನಾಡಿದ್ದೇನೆ, ಭಾರತ ರಷ್ಯಾದಿಂದ ತೈಲ ಖರೀದಿಯನ್ನು ಕಡಿಮೆ ಮಾಡಿದೆ: Donald Trump

ಶ್ವೇತಭವನದಲ್ಲಿ ಅನಿವಾಸಿ ಭಾರತೀಯರೊಂದಿಗೆ ದೀಪಾವಳಿ ಆಚರಣೆ: ಪ್ರಧಾನಿ ಮೋದಿ ‘ಮಹಾನ್ ವ್ಯಕ್ತಿ, ಉತ್ತಮ ಸ್ನೇಹಿತ’ ಎಂದು ಕೊಂಡಾಡಿದ ಡೊನಾಲ್ಡ್ ಟ್ರಂಪ್

Karnataka Weather-ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದಲೇ ವರ್ಷಧಾರೆ, ಅ.29ರವರೆಗೆ ಮಳೆ ಸೂಚನೆ, 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಹಾಸನಾಂಬೆ ದರ್ಶನ ಇಂದು ಕೊನೆ: 8 ಕಿ.ಮೀ ವರೆಗೆ ಧರ್ಮ ದರ್ಶನ ಸಾಲು

ಮರಳು ಮಾಫಿಯಾ: ಸಿಎಂಗೆ ರಾಯರೆಡ್ಡಿ ಪತ್ರ ಬೆನ್ನಲ್ಲೇ ಕೌಂಟರ್ ಕೊಟ್ಟ ಅಧಿಕಾರಿಗಳು, ಪತ್ರ ಸಮರ ಆರಂಭ

SCROLL FOR NEXT