ಮಲ್ಲಿಕಾರ್ಜುನ ಖರ್ಗೆ 
ದೇಶ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಅಬ್ಕಿ ಬಾರ್, ಟ್ರಂಪ್ ಸರ್ಕಾರ್ ಭಾರತದ ಮೇಲೆ ಶೇ.50ರಷ್ಟು ಸುಂಕವನ್ನು ವಿಧಿಸಿದೆ. ಈ ಸುಂಕದ ಮೊದಲ ಆಘಾತವಾಗಿ ನಾವು 10 ವಲಯಗಳಲ್ಲಿ ಅಂದಾಜು 2.17 ಲಕ್ಷ ಕೋಟಿ ನಷ್ಟ ಅನುಭವಿಸುತ್ತೇವೆ.

ನವದಹಲಿ: ಭಾರತದ ರಫ್ತಿನ ಮೇಲೆ ಶೇ.50 ರಷ್ಟು ಸುಂಕ ವಿಧಿಸಿರುವ ಅಮೆರಿಕಾ ಕ್ರಮಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ದೇಶವನ್ನು ರಕ್ಷಿಸುವಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಫಲರಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರಧಾನಿ ಮೋದಿ ನಗು, ಅಪ್ಪುಗೆ ಮತ್ತು ಸೆಲ್ಫಿಗಳ ಬದಲು ಪರಿಣಾಮಕಾರಿ ವಿದೇಶಾಂಗ ನೀತಿಗಳತ್ತ ಗಮನಹರಿಸಿ ಎಂದು ಖರ್ಗೆ ಸಲಹೆ ನೀಡಿದ್ದಾರೆ.

ಇಂದಿನಿಂದ ‘ಅಬ್ಕಿ ಬಾರ್, ಟ್ರಂಪ್ ಸರ್ಕಾರ್ ಭಾರತದ ಮೇಲೆ ಶೇ.50ರಷ್ಟು ಸುಂಕವನ್ನು ವಿಧಿಸಿದೆ. ಈ ಸುಂಕದ ಮೊದಲ ಆಘಾತವಾಗಿ ನಾವು 10 ವಲಯಗಳಲ್ಲಿ ಅಂದಾಜು 2.17 ಲಕ್ಷ ಕೋಟಿ ನಷ್ಟ ಅನುಭವಿಸುತ್ತೇವೆ ಎಂದು ಹೇಳಿದ್ದಾರೆ.

ಇದೇ ವೇಲೆ ಅಮೆರಿಕದೊಂದಿಗಿನ ದ್ವಿಪಕ್ಷೀಯ ವ್ಯಾಪಾರ ಮಾತುಕತೆಗಳ ನಡುವೆ ರೈತರ ಹಿತಾಸಕ್ತಿಗಳನ್ನು ಕಾಪಾಡುವ ಬಗ್ಗೆ ಮೋದಿ ನೀಡಿದ್ದ ಭರವಸೆಗಳನ್ನು ಉಲ್ಲೇಖಿಸಿರುವ ಖರ್ಗೆಯವರು, ಸುಂಕಗಳಿಂದ ಹೆಚ್ಚು ದುಷ್ಪರಿಣಾಮ ಬೀರುತ್ತಿರುವುದು ರೈತರ ಮೇಲೆ. ಅವರ ಹಿತಾಸಕ್ತಿ ಕಾಪಾಡುವ ಮಾತನಾಡಿದ್ದ ಮೋದಿ ಭರವಸೆ ವಿಫಲವಾಗಿದೆ ಎಂದು ತಿಳಿಸಿದ್ದಾರೆ.

ಅಮೆರಿಕಾ ಸುಂಕಾಸ್ತ್ರದಿಂದ ಜವಳಿ ವಲಯವು ಅತ್ಯಂತ ಕಠಿಣ ಪರಿಣಾಮ ಎದುರಿಸುತ್ತಿದ್ದು, ಅಂದಾಜು 5,00,000 ಉದ್ಯೋಗಿಗಳ ಅತಂತ್ರರಾಗಿದ್ದಾರೆ. ಇದಷ್ಟೆ ಅಲ್ಲದೇ ರತ್ನ ಮತ್ತು ಆಭರಣದಂತಹ ಉದ್ಯಮಕ್ಕೂ ಹೊಡೆತ ಬಿದ್ದಿದೆ. ಶೇ.50ರಷ್ಟು ಸುಂಕ ನೀತಿ ಇದೇ ನೀರಿ ಮುಂದುವರೆದರೆ ರತ್ನಗಳು ಮತ್ತು ಆಭರಣ ವಲಯದಲ್ಲಿ 1,50,000 ರಿಂದ 2,00,000 ಉದ್ಯಮಗಳು ಅಪಾಯಕ್ಕೆ ಸಿಲುಕಲಿವೆ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಿಗೆ 2ನೇ ವಿಮಾನ ನಿಲ್ದಾಣ ಮರೀಚಿಕೆ: ಸಂಸತ್ತಿನಲ್ಲಿ ಕೇಂದ್ರ ಸರ್ಕಾರ ಹೇಳಿದ್ದೇನು?

ಇದೇ ಮೊದಲು: UP YouTuber ಮನೆ ಮೇಲೆ ED ದಾಳಿ: ಲಂಬೋರ್ಗಿನಿ, BMW Z4 ಐಷಾರಾಮಿ ಕಾರುಗಳನ್ನು ನೋಡಿ ಅಧಿಕಾರಿಗಳು ದಂಗು!

ನಾವು ಭಿಕ್ಷುಕರಲ್ಲ; ಕೇಂದ್ರ ಹಣ ನಿಲ್ಲಿಸಿದರೂ ಉದ್ಯೋಗ ಸೃಷ್ಟಿಸುತ್ತೇವೆ: ಉದ್ಯೋಗ ಖಾತ್ರಿ ಯೋಜನೆಗೆ ಗಾಂಧಿ ಹೆಸರು ಘೋಷಿಸಿದ ದೀದಿ!

Hijab ವಿವಾದ ಬೆನ್ನಲ್ಲೇ ಸಿಎಂ ವಿರುದ್ಧ ದೂರು ದಾಖಲು: ಬೆದರಿಕೆ ಹಿನ್ನಲೆ ನಿತೀಶ್ ಕುಮಾರ್‌ ಭದ್ರತೆ ಹೆಚ್ಚಳ!

SHANTI Bill: ಅಣು ಶಕ್ತಿಯ ಖಾಸಗೀಕರಣ, ಸುರಕ್ಷತೆ, ಹೊಣೆಗಾರಿಕೆ ಬಗ್ಗೆ ವಿಪಕ್ಷಗಳು ಕಳವಳ; 'ಬಡತನ ಕಡಿಮೆ' ಮಾಡುತ್ತದೆ ಎಂದ ಸುಧಾ ಮೂರ್ತಿ!

SCROLL FOR NEXT