ರಮಾಬಾಯಿ ಅಪಾರ್ಟ್ ಮೆಂಟ್ 
ದೇಶ

ಮಹಾರಾಷ್ಟ್ರದಲ್ಲಿ ಅನಧಿಕೃತ ಕಟ್ಟಡ ಕುಸಿತ: ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಮಗು ಸೇರಿ 17 ಮಂದಿ ಸಾವು; Video

ಎನ್​ಡಿಆರ್​ಎಫ್​ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ಗೋಡೆ ಕೆಳಗೆ ಸಿಲುಕಿಕೊಂಡ ಇಬ್ಬರನ್ನು ರಕ್ಷಿಸಿದ್ದು, ಒಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಮುಂಬೈ: ಮಹಾರಾಷ್ಟ್ರದ ಪಾಲ್ವಾರ್​ ಜಿಲ್ಲೆಯ ವಿರಾರ್​ ಪ್ರದೇಶದಲ್ಲಿರುವ ರಮಾಬಾಯಿ ಅಪಾರ್ಟ್ ಮೆಂಟ್ ಕಟ್ಟಡ ಕುಸಿದು ಬಿದ್ದ ಪರಿಣಾಮ ಸಾವನ್ನಪ್ಪಿದವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.

ಹಲವರು ಅವಶೇಷಗಳಡಿ ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಎನ್​ಡಿಆರ್​ಎಫ್​ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ಗೋಡೆ ಕೆಳಗೆ ಸಿಲುಕಿಕೊಂಡ ಇಬ್ಬರನ್ನು ರಕ್ಷಿಸಿದ್ದು, ಒಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ನಾಲ್ಕನೇ ಮಹಡಿಯಲ್ಲಿ ಒಂದು ವರ್ಷದ ಬಾಲಕಿಯ ಹುಟ್ಟುಹಬ್ಬದ ಪಾರ್ಟಿ ನಡೆಯುತ್ತಿದ್ದಾಗ, ಕಟ್ಟಡದ ಒಂದು ಭಾಗದಲ್ಲಿದ್ದ 12 ಫ್ಲಾಟ್‌ಗಳು ಕುಸಿದು ಬಿದ್ದಿದ್ದು, ನಿವಾಸಿಗಳು ಮತ್ತು ಅತಿಥಿಗಳು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಘಟನೆ ಸಂಭವಿಸಿದಾಗ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದ ಹುಡುಗಿಯೂ ಮೃತಳಾಗಿದ್ದಾಳೆ.

ಏಕಾಏಕಿ ಕಟ್ಟಡ ಕುಸಿತದಿಂದಾಗಿ, ಹಲವಾರು ಕುಟುಂಬಗಳು ನಿರಾಶ್ರಿತರಾಗಿದ್ದಾರೆ, ಅವರೆಲ್ಲರನ್ನೂ ಚಂದನ್ಸರ್ ಸಮಾಜಮಂದಿರಕ್ಕೆ ಸ್ಥಳಾಂತರಿಸಲಾಗಿದೆ ಮತ್ತು ಆಹಾರ, ನೀರು ಮತ್ತು ವೈದ್ಯಕೀಯ ನೆರವು ಒದಗಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನೂ ಹಲವರ ಶವವನ್ನು ಹೊರ ತೆಗೆಯಲಾಗುತ್ತಿದೆ. ಅಪಘಾತದ ಸ್ಥಳದಲ್ಲಿ ಒಟ್ಟು 50 ಫ್ಲಾಟ್‌ಗಳಿದ್ದು, ಕುಸಿದ ಭಾಗದಲ್ಲಿ 12 ಅಪಾರ್ಟ್‌ಮೆಂಟ್‌ಗಳಿವೆ. ಪಕ್ಕದ ವಸತಿ ಕಟ್ಟಡಗಳಲ್ಲಿನ ಹತ್ತಿರದ ನಿವಾಸಿಗಳನ್ನು ಮುನ್ನೆಚ್ಚರಿಕೆಯಾಗಿ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿವಿಎಂಸಿ ದೂರು ದಾಖಲಿಸಿದ ನಂತರ ಪೊಲೀಸರು ಬಿಲ್ಡರ್ ನಿತಲ್ ಗೋಪಿನಾಥ್ ಸಾನೆ ಅವರನ್ನು ಬಂಧಿಸಿದ್ದಾರೆ. ಭೂಮಾಲೀಕರ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

BJP, RSS ನಡುವೆ ಭಿನ್ನಾಭಿಪ್ರಾಯ ಇರಬಹುದು, ಆದರೆ ಸಂಘರ್ಷ ಇಲ್ಲ: ಮೋಹನ್ ಭಾಗವತ್

Nation survey: ಇಂದೇ ಲೋಕಸಭೆ ಚುನಾವಣೆ ನಡೆದರೆ NDA ಎಷ್ಟು ಸ್ಥಾನ ಗೆಲ್ಲುತ್ತೆ ಗೊತ್ತಾ?

SCO summit: ಟ್ರಂಪ್ ಗೆ ಸೆಡ್ಡು; ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

"ಭಾರತೀಯರು ಬಗ್ಗದೇ ಹೋದರೆ...": ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾನೇರ ಬೆದರಿಕೆ!

ಯಾವುದೇ ವ್ಯಕ್ತಿ 75 ವರ್ಷಗಳಿಗೆ ನಿವೃತ್ತಿಯಾಗಬೇಕು ಎಂದು ಎಂದಿಗೂ ಹೇಳಿಲ್ಲ: RSS ಮುಖ್ಯಸ್ಥ Mohan bhagwat ಸ್ಪಷ್ಟನೆ

SCROLL FOR NEXT