ರಮಾಬಾಯಿ ಅಪಾರ್ಟ್ ಮೆಂಟ್ 
ದೇಶ

ಮಹಾರಾಷ್ಟ್ರದಲ್ಲಿ ಅನಧಿಕೃತ ಕಟ್ಟಡ ಕುಸಿತ: ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಮಗು ಸೇರಿ 17 ಮಂದಿ ಸಾವು; Video

ಎನ್​ಡಿಆರ್​ಎಫ್​ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ಗೋಡೆ ಕೆಳಗೆ ಸಿಲುಕಿಕೊಂಡ ಇಬ್ಬರನ್ನು ರಕ್ಷಿಸಿದ್ದು, ಒಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಮುಂಬೈ: ಮಹಾರಾಷ್ಟ್ರದ ಪಾಲ್ವಾರ್​ ಜಿಲ್ಲೆಯ ವಿರಾರ್​ ಪ್ರದೇಶದಲ್ಲಿರುವ ರಮಾಬಾಯಿ ಅಪಾರ್ಟ್ ಮೆಂಟ್ ಕಟ್ಟಡ ಕುಸಿದು ಬಿದ್ದ ಪರಿಣಾಮ ಸಾವನ್ನಪ್ಪಿದವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.

ಹಲವರು ಅವಶೇಷಗಳಡಿ ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಎನ್​ಡಿಆರ್​ಎಫ್​ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ಗೋಡೆ ಕೆಳಗೆ ಸಿಲುಕಿಕೊಂಡ ಇಬ್ಬರನ್ನು ರಕ್ಷಿಸಿದ್ದು, ಒಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ನಾಲ್ಕನೇ ಮಹಡಿಯಲ್ಲಿ ಒಂದು ವರ್ಷದ ಬಾಲಕಿಯ ಹುಟ್ಟುಹಬ್ಬದ ಪಾರ್ಟಿ ನಡೆಯುತ್ತಿದ್ದಾಗ, ಕಟ್ಟಡದ ಒಂದು ಭಾಗದಲ್ಲಿದ್ದ 12 ಫ್ಲಾಟ್‌ಗಳು ಕುಸಿದು ಬಿದ್ದಿದ್ದು, ನಿವಾಸಿಗಳು ಮತ್ತು ಅತಿಥಿಗಳು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಘಟನೆ ಸಂಭವಿಸಿದಾಗ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದ ಹುಡುಗಿಯೂ ಮೃತಳಾಗಿದ್ದಾಳೆ.

ಏಕಾಏಕಿ ಕಟ್ಟಡ ಕುಸಿತದಿಂದಾಗಿ, ಹಲವಾರು ಕುಟುಂಬಗಳು ನಿರಾಶ್ರಿತರಾಗಿದ್ದಾರೆ, ಅವರೆಲ್ಲರನ್ನೂ ಚಂದನ್ಸರ್ ಸಮಾಜಮಂದಿರಕ್ಕೆ ಸ್ಥಳಾಂತರಿಸಲಾಗಿದೆ ಮತ್ತು ಆಹಾರ, ನೀರು ಮತ್ತು ವೈದ್ಯಕೀಯ ನೆರವು ಒದಗಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನೂ ಹಲವರ ಶವವನ್ನು ಹೊರ ತೆಗೆಯಲಾಗುತ್ತಿದೆ. ಅಪಘಾತದ ಸ್ಥಳದಲ್ಲಿ ಒಟ್ಟು 50 ಫ್ಲಾಟ್‌ಗಳಿದ್ದು, ಕುಸಿದ ಭಾಗದಲ್ಲಿ 12 ಅಪಾರ್ಟ್‌ಮೆಂಟ್‌ಗಳಿವೆ. ಪಕ್ಕದ ವಸತಿ ಕಟ್ಟಡಗಳಲ್ಲಿನ ಹತ್ತಿರದ ನಿವಾಸಿಗಳನ್ನು ಮುನ್ನೆಚ್ಚರಿಕೆಯಾಗಿ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿವಿಎಂಸಿ ದೂರು ದಾಖಲಿಸಿದ ನಂತರ ಪೊಲೀಸರು ಬಿಲ್ಡರ್ ನಿತಲ್ ಗೋಪಿನಾಥ್ ಸಾನೆ ಅವರನ್ನು ಬಂಧಿಸಿದ್ದಾರೆ. ಭೂಮಾಲೀಕರ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತಕ್ಕೆ ಭೇಟಿ ನೀಡುವಂತೆ ತಾರಿಕ್ ರೆಹಮಾನ್‌ಗೆ ಪ್ರಧಾನಿ ಮೋದಿ ಆಹ್ವಾನ!

AI ಇಂಪ್ಯಾಕ್ಟ್ ಶೃಂಗಸಭೆ ಟಾರ್ಗೆಟ್: ವಿದೇಶಿಗರಿಂದ ದಾಳಿ ಸಾಧ್ಯತೆ, ಗುಪ್ತಚರ ವರದಿ ಬೆನ್ನಲ್ಲೇ G20 ಗ್ರೇಡ್ ಸೈಬರ್ ಭದ್ರತಾ ವ್ಯವಸ್ಥೆ!

T20 World Cup 2026: ಸ್ಕಾಟ್ಲೆಂಡ್ ವಿರುದ್ಧ ನೇಪಾಳಕ್ಕೆ 7 ವಿಕೆಟ್ ಗಳ ಭರ್ಜರಿ ಜಯ!

ಭಾರತದಲ್ಲಿ ವಯಸ್ಸಿನ ಆಧಾರದ ಮೇಲೆ 'ಸಾಮಾಜಿಕ ಜಾಲತಾಣ ನಿಷೇಧ' ಕುರಿತು ಚರ್ಚೆ: ಅಶ್ವಿನಿ ವೈಷ್ಣವ್

'ಕರಾವಳಿ' ಹೂಡಿಕೆ ವಿವಾದ: ಪ್ರಿಯಾಂಕ್ ಖರ್ಗೆ ಸಹಜವಾಗಿ ಹೇಳಿದ್ದಾರೆ, ಆದರೆ ದಕ್ಷಿಣ ಕನ್ನಡ ಬದಲಾಗುತ್ತಿದೆ; ಪರಮೇಶ್ವರ್

SCROLL FOR NEXT