ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿ ಮೇಘಸ್ಫೋಟದ ನಂತರ ಪೀಡಿತ ಪ್ರದೇಶದಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ 
ದೇಶ

ಜಮ್ಮು-ಕಾಶ್ಮೀರದಲ್ಲಿ ಮೇಘಸ್ಫೋಟ, ಭೂಕುಸಿತ: ಐವರು ಮಕ್ಕಳು ಸೇರಿ 11 ಮಂದಿ ಸಾವು; Video

ರಂಬನ್ ಜಿಲ್ಲೆಯ ರಾಜ್‌ಗಢ ತಹಸಿಲ್‌ನಲ್ಲಿ ಇಂದು ಮುಂಜಾನೆ ಸಂಭವಿಸಿದ ಮೇಘಸ್ಫೋಟದಿಂದ ಭೂಕುಸಿತ ಮತ್ತು ಹಠಾತ್ ಪ್ರವಾಹ ಉಂಟಾಗಿದೆ . ಇದರಿಂದಾಗಿ ಹಲವಾರು ಮನೆಗಳು ಸಹ ಹಾನಿಗೊಳಗಾಗಿವೆ.

ಶ್ರೀನಗರ: ಜಮ್ಮು- ಕಾಶ್ಮೀರದ ರಂಬನ್ ಜಿಲ್ಲೆಯಲ್ಲಿ ಭಾರೀ ಮಳೆಯಿಂದ ಉಂಟಾದ ಮೇಘಸ್ಫೋಟದಲ್ಲಿ ಮೂವರು ಮೃತಪಟ್ಟು ಇಬ್ಬರು ಕಾಣೆಯಾಗಿದ್ದಾರೆ. ಪ್ರತ್ಯೇಕ ಘಟನೆಯಲ್ಲಿ, ನೆರೆಯ ರಿಯಾಸಿ ಜಿಲ್ಲೆಯ ಹಳ್ಳಿಯೊಂದರಲ್ಲಿ ಭೂಕುಸಿತ ಸಂಭವಿಸಿ ಒಂದೇ ಕುಟುಂಬದ ಏಳು ಜನರು ಮೃತಪಟ್ಟಿದ್ದಾರೆ.

ರಂಬನ್ ಜಿಲ್ಲೆಯ ರಾಜ್‌ಗಢ ತಹಸಿಲ್‌ನಲ್ಲಿ ಇಂದು ಮುಂಜಾನೆ ಸಂಭವಿಸಿದ ಮೇಘಸ್ಫೋಟದಿಂದ ಭೂಕುಸಿತ ಮತ್ತು ಹಠಾತ್ ಪ್ರವಾಹ ಉಂಟಾಗಿದೆ . ಇದರಿಂದಾಗಿ ಹಲವಾರು ಮನೆಗಳು ಸಹ ಹಾನಿಗೊಳಗಾಗಿವೆ.

ಅಧಿಕಾರಿಗಳು ಈ ಪ್ರದೇಶದಲ್ಲಿ ರಕ್ಷಣಾ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಇಬ್ಬರನ್ನು ರಕ್ಷಿಸಲು ಎಸ್ ಡಿಆರ್ ಎಫ್, ಪೊಲೀಸ್, ಸ್ಥಳೀಯ ನಾಗರಿಕ ಸರ್ಕಾರಿ ಸಂಸ್ಥೆಗಳು ಮತ್ತು ನಿವಾಸಿಗಳ ತಂಡಗಳು ಒಟ್ಟಾಗಿ ಕೆಲಸ ಮಾಡುತ್ತಿವೆ.

ರಂಬನ್ ಜಿಲ್ಲೆ ಸೇರಿದಂತೆ ಜಮ್ಮು ಪ್ರದೇಶದಲ್ಲಿ ಭಾರೀ ಮಳೆ, ಮೇಘಸ್ಫೋಟ, ಭೂಕುಸಿತ ಮತ್ತು ಹಠಾತ್ ಪ್ರವಾಹ ಸಂಭವಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ರಂಬನ್ ಮತ್ತು ಪ್ರದೇಶದ ಇತರ ಭಾಗಗಳಲ್ಲಿ ರಾತ್ರಿಯಿಡೀ ಭಾರೀ ಮಳೆಯಾಗಿದೆ.

ರಿಯಾಸಿ ಜಿಲ್ಲೆಯ ಮಹೋರ್ ಪ್ರದೇಶದ ಬದರ್ ಗ್ರಾಮದಲ್ಲಿ ಭಾರೀ ಮಳೆಯಿಂದ ಭಾರೀ ಭೂಕುಸಿತ ಉಂಟಾಗಿದೆ. ಭೂಕುಸಿತದಿಂದ ಒಂದು ಮನೆ ನೆಲಸಮವಾಗಿದ್ದು, ದಂಪತಿ ಮತ್ತು ಅವರ ಐವರು ಮಕ್ಕಳು ಸೇರಿದಂತೆ ಒಳಗೆ ಇದ್ದ ಏಳು ಜನರು ಮೃತಪಟ್ಟಿದ್ದಾರೆ.

ರಕ್ಷಣಾ ಕಾರ್ಯಾಚರಣೆಗಳು ಮುಂದುವರೆದಿದ್ದು, ಎಸ್‌ಡಿಆರ್‌ಎಫ್, ಪೊಲೀಸರು, ನಾಗರಿಕ ಸಂಸ್ಥೆಗಳು ಮತ್ತು ಸ್ಥಳೀಯರು ಅವಶೇಷಗಳಲ್ಲಿ ಸಿಲುಕಿರುವವರನ್ನು ತಲುಪಲು ಕಾರ್ಯನಿರತರಾಗಿದ್ದಾರೆ.

ಕಳೆದ ಹದಿನೈದು ದಿನಗಳಲ್ಲಿ ಜಮ್ಮು-ಕಾಶ್ಮೀರದಲ್ಲಿ ಹಲವಾರು ಮೇಘಸ್ಫೋಟ ಘಟನೆಗಳು ಸಂಭವಿಸಿದ್ದು, ಸಾಕಷ್ಟು ಜೀವ ಹಾನಿಯಾಗಿದೆ. ಆಗಸ್ಟ್ 14 ರಂದು, ಮಾತಾ ಮಚೈಲ್ ದೇವಸ್ಥಾನಕ್ಕೆ ಹೋಗುವ ಮಾರ್ಗದಲ್ಲಿ, ಪರ್ವತಮಯ ಕಿಶ್ತ್ವಾರ್ ಜಿಲ್ಲೆಯ ದೂರದ ಚೆಸೋಟಿ ಗ್ರಾಮದಲ್ಲಿ ಮೇಘಸ್ಫೋಟದಿಂದ ಭೂಕುಸಿತ ಮತ್ತು ಹಠಾತ್ ಪ್ರವಾಹ ಉಂಟಾಗಿ 68 ಜನರು ಮೃತಪಟ್ಟಿದ್ದರು. ಮೂವತ್ತೆರಡು ಜನರು ಕಾಣೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

ಆಗಸ್ಟ್ 26 ರಂದು, ವೈಷ್ಣೋದೇವಿ ದೇಗುಲಕ್ಕೆ ಹೋಗುವ ಮಾರ್ಗದಲ್ಲಿ ಭಾರಿ ಮೇಘಸ್ಫೋಟದಿಂದ ಉಂಟಾದ ಭೂಕುಸಿತದಿಂದ 34 ಜನರು ಮೃತಪಟ್ಟಿದ್ದರು, ಅದರಲ್ಲಿ ಹೆಚ್ಚಿನವರು ಯಾತ್ರಿಕರು, 23 ಜನರು ಗಾಯಗೊಂಡರು. ಸ್ಥಳದಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳು ಇನ್ನೂ ಮುಂದುವರೆದಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

RSS ಚಟುವಟಿಕೆಗಳಿಗೆ ಕಡಿವಾಣ: BJP ಆದೇಶವನ್ನೇ ಅಸ್ತ್ರವಾಗಿ ಬಳಸಿದ Congress; ಸಚಿವ ಸಂಪುಟದಲ್ಲಿ​​ ಮಹತ್ವದ ತೀರ್ಮಾನ!

ನಾಚಿಕೆಗೇಡು: ವಿದ್ಯಾರ್ಥಿನಿಯರು ಬಟ್ಟೆ ಬದಲಿಸುವಾಗ ಮೊಬೈಲ್‌ನಲ್ಲಿ Video ಸೆರೆಯಿಡಿದ 3 ABVP ಕಾರ್ಯಕರ್ತರು, CCTV ವಿಡಿಯೋ ವೈರಲ್!

ನಮ್ಮ ಆದ್ಯತೆಗಳಿಗೆ ತಕ್ಕಂತೆ ವ್ಯವಹಾರ: ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಭಾರತದ ತಿರುಗೇಟು!

RSS ಚುಟುವಟಿಕೆ ನಿರ್ಬಂಧಕ್ಕೆ ಪತ್ರ: ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಹಾಕಿದ್ದ ವ್ಯಕ್ತಿ ಮಹಾರಾಷ್ಟ್ರದಲ್ಲಿ ಬಂಧನ

Bihar SIR 'ನಿಖರ'; ರಾಜಕೀಯ ಪಕ್ಷಗಳು 'ಕಳಂಕಿಸಲು' ಬಯಸುತ್ತಿವೆ: ಸುಪ್ರೀಂ ಕೋರ್ಟ್‌ಗೆ ESI

SCROLL FOR NEXT