ಏರ್ ಮಾರ್ಷಲ್ ನರ್ಮದೇಶ್ವರ ತಿವಾರಿ 
ದೇಶ

Operation Sindoor: ಪಾಕ್ ಮೇಲೆ ಐಎಎಫ್ 50ಕ್ಕಿಂತ ಕಡಿಮೆ ಶಸ್ತ್ರಾಸ್ತ್ರ ಹಾರಿಸಿದೆ; ಅಷ್ಟಕ್ಕೇ ಎದುರಾಳಿ ತತ್ತರ; ಏರ್ ಮಾರ್ಷಲ್ ತಿವಾರಿ

ಪಾಕಿಸ್ತಾನ ಸೇನಾ ಸಾಮರ್ಥ್ಯವನ್ನು ಬಹಿರಂಗಪಡಿಸುವುದು ಮತ್ತು "ಸರಿಯಾದ ಸಂದೇಶ"ವನ್ನು ಕಳುಹಿಸುವುದು ಈ ದಾಳಿಯ ಹಿಂದಿನ ಉದ್ದೇಶವಾಗಿತ್ತು ಎಂದು IAF ಹಿರಿಯ ಅಧಿಕಾರಿ ತಿಳಿಸಿದ್ದಾರೆ.

ನವದೆಹಲಿ: ಆಪರೇಷನ್ ಸಿಂಧೂರ್ ವೇಳೆ ಪಾಕಿಸ್ತಾನದ ಮಿಲಿಟರಿ ಟಾರ್ಗೆಟ್ ಮೇಲೆ ಭಾರತೀಯ ವಾಯುಪಡೆಯು 50ಕ್ಕಿಂತ ಕಡಿಮೆ ಶಸ್ತ್ರಾಸ್ತ್ರಗಳನ್ನು ಹಾರಿಸಿದ್ದರಿಂದ, ಮೇ 10 ರ ವೇಳೆಗೆ ಇಸ್ಲಾಮಾಬಾದ್ ಯುದ್ಧವನ್ನು ಕೊನೆಗೊಳಿಸುವಂತೆ ವಿನಂತಿಸಬೇಕಾಯಿತು ಎಂದು ವಾಯುಪಡೆ ಉಪ ಮುಖ್ಯಸ್ಥ ಏರ್ ಮಾರ್ಷಲ್ ನರ್ಮದೇಶ್ವರ ತಿವಾರಿ ಅವರು ಶನಿವಾರ ಹೇಳಿದ್ದಾರೆ.

ಮೇ 9 ಮತ್ತು 10 ರ ಮಧ್ಯರಾತ್ರಿ ಪಾಕಿಸ್ತಾನದ ದಾಳಿಯ ನಂತರ ಐಎಎಫ್ ಪಾಕಿಸ್ತಾನ ಮಿಲಿಟರಿಯ ಮೇಲೆ "ಸಂಪೂರ್ಣ ಪ್ರಾಬಲ್ಯ" ಸಾಧಿಸಿತು ಎಂದು ಏರ್ ಮಾರ್ಷಲ್ ತಿವಾರಿ ಅವರು ಕಾರ್ಯಾಚರಣೆಯನ್ನು ವಿವರಿಸಿದ್ದಾರೆ.

"50 ಕ್ಕಿಂತ ಕಡಿಮೆ ಶಸ್ತ್ರಾಸ್ತ್ರಗಳಲ್ಲಿ, ನಾವು ಸಂಪೂರ್ಣ ಪ್ರಾಬಲ್ಯ ಸಾಧಿಸಲು ಸಾಧ್ಯವಾಯಿತು ಎಂಬುದು ನಮಗೆ ಅತ್ಯಂತ ಮಹತ್ವದ್ದಾಗಿದ್ದು, ಇದನ್ನು ನಾನು ನಿಮಗೆ ಹೇಳಲೇಬೇಕು. ಇದು ಹಿಂದೆಂದೂ ಈ ರೀತಿ ಆಗಿಲ್ಲ" ಎಂದು ಎನ್‌ಡಿಟಿವಿ ರಕ್ಷಣಾ ಶೃಂಗಸಭೆಯಲ್ಲಿ ತಿವಾರಿ ಹೇಳಿದ್ದಾರೆ.

"ನಾವು ಪಾಕಿಸ್ತಾನದಿಂದ ಪ್ರತಿಕ್ರಿಯೆಯನ್ನು ನಿರೀಕ್ಷಿಸಿದ್ದೆವು ಮತ್ತು ನಾವು ಮಿಲಿಟರಿ ಗುರಿಗಳ ಮೇಲೆ ಮಾತ್ರ ದಾಳಿ ಮಾಡಿದ್ದೇವೆ. ಆದರೆ ಮೇ 9-10 ರ ರಾತ್ರಿ ಮುಖ್ಯ ದಾಳಿ ನಡೆದಾಗ, ನಾವು ಸರಿಯಾದ ಸಂದೇಶವನ್ನು ಕಳುಹಿಸಬೇಕು ಎಂದು ನಿರ್ಧರಿಸಿದ ಸಮಯ ಅದು. ನಾವು ಅವರ ಮೇಲೆ ಪ್ಯಾನಲ್-ಫ್ರಂಟ್ ದಾಳಿ ಮಾಡಿದ್ದೇವೆ" ಎಂದು ಅವರು ತಿಳಿಸಿದ್ದಾರೆ.

"ನಾವು ಪ್ರತಿಯೊಂದು ಶಸ್ತ್ರಾಸ್ತ್ರವನ್ನೂ ಗಣನೆಗೆ ತೆಗೆದುಕೊಂಡಿದ್ದೇವೆ. 1971ರ ಯುದ್ಧದ ಸಮಯದಲ್ಲಿಯೂ ಸಹ ಮಾಡಲಾರದಂತಹ ದಾಳಿಯನ್ನು ನಾವು ಮಾಡಿದ್ದೇವೆ. ನಾವು ಅವರ ಸಾಮರ್ಥ್ಯಕ್ಕೆ ದೊಡ್ಡ ಹಾನಿ ಮಾಡಿದ್ದೇವೆ. IAF ತನ್ನ ದಾಳಿಗಳನ್ನು ಕೇವಲ ಮಿಲಿಟರಿ ಟಾರ್ಗೆಟ್ ಗೆ ಸೀಮಿತಗೊಳಿಸಿದೆ ಎಂದು ಹೇಳಿದ್ದಾರೆ.

ಪಾಕಿಸ್ತಾನ ಸೇನಾ ಸಾಮರ್ಥ್ಯವನ್ನು ಬಹಿರಂಗಪಡಿಸುವುದು ಮತ್ತು "ಸರಿಯಾದ ಸಂದೇಶ"ವನ್ನು ಕಳುಹಿಸುವುದು ಈ ದಾಳಿಯ ಹಿಂದಿನ ಉದ್ದೇಶವಾಗಿತ್ತು ಎಂದು IAF ಹಿರಿಯ ಅಧಿಕಾರಿ ತಿಳಿಸಿದ್ದಾರೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತೀಯ ಸೇನೆ, ಪಾಕಿಸ್ತಾನ ನಿಯಂತ್ರಣದಲ್ಲಿರುವ ಪ್ರದೇಶಗಳಲ್ಲಿನ ಉಗ್ರರ ನೆಲೆಗಳನ್ನು ಗುರಿಯಾಗಿಸಿಕೊಂಡು ಮೇ 7 ರಂದು ಆಪರೇಷನ್ ಸಿಂಧೂರ್ ಪ್ರಾರಂಭಿಸಿತು.

ಈ ದಾಳಿಯು ಉಭಯ ದೇಶಗಳ ನಡುವೆ ನಾಲ್ಕು ದಿನಗಳ ಕಾಲ ತೀವ್ರ ಘರ್ಷಣೆಗೆ ಕಾರಣವಾಯಿತು. ನಂತರ ಮೇ 10 ರಂದು ಭಾರತ, ಪಾಕಿಸ್ತಾನ ಕದನ ವಿರಾಮ ಘೋಷಿಸಿದವು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತಕ್ಕೆ ಭೇಟಿ ನೀಡುವಂತೆ ತಾರಿಕ್ ರೆಹಮಾನ್‌ಗೆ ಪ್ರಧಾನಿ ಮೋದಿ ಆಹ್ವಾನ!

AI ಇಂಪ್ಯಾಕ್ಟ್ ಶೃಂಗಸಭೆ ಟಾರ್ಗೆಟ್: ವಿದೇಶಿಗರಿಂದ ದಾಳಿ ಸಾಧ್ಯತೆ, ಗುಪ್ತಚರ ವರದಿ ಬೆನ್ನಲ್ಲೇ G20 ಗ್ರೇಡ್ ಸೈಬರ್ ಭದ್ರತಾ ವ್ಯವಸ್ಥೆ!

T20 World Cup 2026: ಸ್ಕಾಟ್ಲೆಂಡ್ ವಿರುದ್ಧ ನೇಪಾಳಕ್ಕೆ 7 ವಿಕೆಟ್ ಗಳ ಭರ್ಜರಿ ಜಯ!

ಭಾರತದಲ್ಲಿ ವಯಸ್ಸಿನ ಆಧಾರದ ಮೇಲೆ 'ಸಾಮಾಜಿಕ ಜಾಲತಾಣ ನಿಷೇಧ' ಕುರಿತು ಚರ್ಚೆ: ಅಶ್ವಿನಿ ವೈಷ್ಣವ್

'ಕರಾವಳಿ' ಹೂಡಿಕೆ ವಿವಾದ: ಪ್ರಿಯಾಂಕ್ ಖರ್ಗೆ ಸಹಜವಾಗಿ ಹೇಳಿದ್ದಾರೆ, ಆದರೆ ದಕ್ಷಿಣ ಕನ್ನಡ ಬದಲಾಗುತ್ತಿದೆ; ಪರಮೇಶ್ವರ್

SCROLL FOR NEXT