ಮೈತ್ರಿಕೂಟದ ನಾಯಕರೊಂದಿಗೆ ತೇಜಸ್ವಿ ಯಾದವ್ 
ದೇಶ

INDIA ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಮೀಸಲಾತಿ ಕೋಟಾ 85% ಗೆ ಏರಿಕೆ!: Tejashwi Yadav

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಸಂವಿಧಾನವನ್ನು ದುರ್ಬಲಗೊಳಿಸುತ್ತಿದೆ. ಜನರು ತಮ್ಮ ಹಕ್ಕುಗಳನ್ನು ಕಾಪಾಡಲು ಒಂದಾಗಬೇಕು.

ಪಾಟ್ನಾ: ಕಾಂಗ್ರೆಸ್ ನೇತೃತ್ವದ INDIA ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಮೀಸಲಾತಿ ಕೋಟಾವನ್ನು ಶೇ.85ಕ್ಕೆ ಏರಿಕೆ ಮಾಡುವುದಾಗಿ ಆರ್ ಜೆಡಿ ನಾಯಕ ತೇಜಸ್ವಿ ಯಾದವ್ (Tejashwi Yadav) ಹೇಳಿದ್ದಾರೆ.

ಬಿಹಾರದ ಮೋತಿಹಾರಿಯಲ್ಲಿ ನಡೆಯುತ್ತಿರುವ ಮತದಾರರ ಅಧಿಕಾರ ಯಾತ್ರೆಯ ಅಂಗವಾಗಿ ಸಂವಿಧಾನ ಸುರಕ್ಷಾ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದ ತೇಜಸ್ವಿಯಾದವ್, 'ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಸಂವಿಧಾನವನ್ನು ದುರ್ಬಲಗೊಳಿಸುತ್ತಿದೆ. ಜನರು ತಮ್ಮ ಹಕ್ಕುಗಳನ್ನು ಕಾಪಾಡಲು ಒಂದಾಗಬೇಕು ಎಂದು ಹೇಳಿದರು.

ಈಗ ಮತ ಕಳ್ಳತನ.. ಮುಂದೆ ಸರ್ಕಾರದ ಕ್ರಮಗಳು ಕ್ರಮೇಣ ನಾಗರಿಕರ ಹಕ್ಕುಗಳನ್ನು ಕಸಿದುಕೊಳ್ಳಬಹುದು.

ಮೊದಲು, ಅವರು ನಿಮ್ಮ ಮತವನ್ನು, ನಂತರ ನಿಮ್ಮ ಪಡಿತರವನ್ನು, ನಂತರ ನಿಮ್ಮ ಪಿಂಚಣಿಯನ್ನು ಮತ್ತು ಅಂತಿಮವಾಗಿ ನಿಮ್ಮ ಆಸ್ತಿಗಳನ್ನು ಕಸಿದುಕೊಳ್ಳುತ್ತಾರೆ. ಪ್ರಜಾಪ್ರಭುತ್ವವನ್ನು ಸರ್ವಾಧಿಕಾರದಿಂದ ಬದಲಾಯಿಸಲಾಗುತ್ತದೆ ಎಂದರು.

ಮೀಸಲಾತಿ ಕೋಟಾ 85%ಕ್ಕೆ ಏರಿಕೆ

ಇದೇ ವೇಳೆ ಮೀಸಲಾತಿ ಸೌಲಭ್ಯಗಳನ್ನು ಹೆಚ್ಚಿಸುವ ತಮ್ಮ ಪಕ್ಷದ ಭರವಸೆಯನ್ನು ಪುನರುಚ್ಛರಿಸಿದ ತೇಜಸ್ವಿ ಯಾದವ್, 'ಕಾಂಗ್ರೆಸ್ ನೇತೃತ್ವದ INDIA ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಮೀಸಲಾತಿ ಕೋಟಾವನ್ನು ಶೇ.85ಕ್ಕೆ ಏರಿಕೆ ಮಾಡುತ್ತೇವೆ ಎಂದರು. ಅಂತೆಯೇ ಜನರ ಹಕ್ಕುಗಳ ಅಡಿಪಾಯ ಸಂವಿಧಾನ ಎಂದು ಕರೆದ ತೇಜಶ್ವಿ, ಪ್ರಜಾಪ್ರಭುತ್ವವನ್ನು ರಕ್ಷಿಸಲು ಬಯಸಿದರೆ ಅಧಿಕಾರದಲ್ಲಿರುವವರನ್ನು ತೆಗೆದುಹಾಕುವಂತೆ ನಾಗರಿಕರನ್ನು ಒತ್ತಾಯಿಸಿದರು.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಟೀಕಿಸಿದ ಅವರು, "ಚಾಚಾ ಸಿಲುಕಿಕೊಂಡಿದ್ದಾರೆ... ಅವರು ಮೊದಲಿನಂತೆಯೇ ಇಲ್ಲ... ಅವರು ಇನ್ನು ಮುಂದೆ ಮುಖ್ಯಮಂತ್ರಿಯಾಗುವುದಿಲ್ಲ" ಎಂದು ಟೀಕಿಸಿದರು.

ನನ್ನದೂ ಲಾಲೂಜಿ ರಕ್ತ

ಇದೇ ವೇಳೆ, 'ಇವರು ನನ್ನ ದೇಹದಲ್ಲೂ ಹರಿಯುತ್ತಿರುವುದು ಲಾಲೂ ಪ್ರಸಾದ್ ಯಾದವ್ ಅವರ ರಕ್ತ ಎಂಬುದನ್ನು ಮರೆತಿದ್ದಾರೆ. ಲಾಲೂ ಜಿ ಸಕ್ರಿಯವಾಗಿಲ್ಲದಿದ್ದರೂ ಅವರ ಪರವಾಗಿ ನಾನು ಹೋರಾಡುತ್ತೇನೆ. ಲಾಲೂ ಪ್ರಸಾದ್ ಯಾದವ್ ತಗ್ಗಿರಬಹುದು. ಅವರ ಮಕ್ಕಳಾದ ನಾವು ಎದ್ದಿದ್ದೇವೆ. ನಾವು ಹೋರಾಟಗಾರರು... ಸಹೋದರರೇ ಎಲ್ಲರೂ ಒಂದಾಗಿ. ಇಲ್ಲದಿದ್ದರೆ, ಅವರು ನಿಮ್ಮ ಅಸ್ತಿತ್ವವನ್ನು ಕೊನೆಗೊಳಿಸುತ್ತಾರೆ ಎಂದು ಕಿಡಿಕಾರಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?