ಮೈತ್ರಿಕೂಟದ ನಾಯಕರೊಂದಿಗೆ ತೇಜಸ್ವಿ ಯಾದವ್ 
ದೇಶ

INDIA ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಮೀಸಲಾತಿ ಕೋಟಾ 85% ಗೆ ಏರಿಕೆ!: Tejashwi Yadav

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಸಂವಿಧಾನವನ್ನು ದುರ್ಬಲಗೊಳಿಸುತ್ತಿದೆ. ಜನರು ತಮ್ಮ ಹಕ್ಕುಗಳನ್ನು ಕಾಪಾಡಲು ಒಂದಾಗಬೇಕು.

ಪಾಟ್ನಾ: ಕಾಂಗ್ರೆಸ್ ನೇತೃತ್ವದ INDIA ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಮೀಸಲಾತಿ ಕೋಟಾವನ್ನು ಶೇ.85ಕ್ಕೆ ಏರಿಕೆ ಮಾಡುವುದಾಗಿ ಆರ್ ಜೆಡಿ ನಾಯಕ ತೇಜಸ್ವಿ ಯಾದವ್ (Tejashwi Yadav) ಹೇಳಿದ್ದಾರೆ.

ಬಿಹಾರದ ಮೋತಿಹಾರಿಯಲ್ಲಿ ನಡೆಯುತ್ತಿರುವ ಮತದಾರರ ಅಧಿಕಾರ ಯಾತ್ರೆಯ ಅಂಗವಾಗಿ ಸಂವಿಧಾನ ಸುರಕ್ಷಾ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದ ತೇಜಸ್ವಿಯಾದವ್, 'ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಸಂವಿಧಾನವನ್ನು ದುರ್ಬಲಗೊಳಿಸುತ್ತಿದೆ. ಜನರು ತಮ್ಮ ಹಕ್ಕುಗಳನ್ನು ಕಾಪಾಡಲು ಒಂದಾಗಬೇಕು ಎಂದು ಹೇಳಿದರು.

ಈಗ ಮತ ಕಳ್ಳತನ.. ಮುಂದೆ ಸರ್ಕಾರದ ಕ್ರಮಗಳು ಕ್ರಮೇಣ ನಾಗರಿಕರ ಹಕ್ಕುಗಳನ್ನು ಕಸಿದುಕೊಳ್ಳಬಹುದು.

ಮೊದಲು, ಅವರು ನಿಮ್ಮ ಮತವನ್ನು, ನಂತರ ನಿಮ್ಮ ಪಡಿತರವನ್ನು, ನಂತರ ನಿಮ್ಮ ಪಿಂಚಣಿಯನ್ನು ಮತ್ತು ಅಂತಿಮವಾಗಿ ನಿಮ್ಮ ಆಸ್ತಿಗಳನ್ನು ಕಸಿದುಕೊಳ್ಳುತ್ತಾರೆ. ಪ್ರಜಾಪ್ರಭುತ್ವವನ್ನು ಸರ್ವಾಧಿಕಾರದಿಂದ ಬದಲಾಯಿಸಲಾಗುತ್ತದೆ ಎಂದರು.

ಮೀಸಲಾತಿ ಕೋಟಾ 85%ಕ್ಕೆ ಏರಿಕೆ

ಇದೇ ವೇಳೆ ಮೀಸಲಾತಿ ಸೌಲಭ್ಯಗಳನ್ನು ಹೆಚ್ಚಿಸುವ ತಮ್ಮ ಪಕ್ಷದ ಭರವಸೆಯನ್ನು ಪುನರುಚ್ಛರಿಸಿದ ತೇಜಸ್ವಿ ಯಾದವ್, 'ಕಾಂಗ್ರೆಸ್ ನೇತೃತ್ವದ INDIA ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಮೀಸಲಾತಿ ಕೋಟಾವನ್ನು ಶೇ.85ಕ್ಕೆ ಏರಿಕೆ ಮಾಡುತ್ತೇವೆ ಎಂದರು. ಅಂತೆಯೇ ಜನರ ಹಕ್ಕುಗಳ ಅಡಿಪಾಯ ಸಂವಿಧಾನ ಎಂದು ಕರೆದ ತೇಜಶ್ವಿ, ಪ್ರಜಾಪ್ರಭುತ್ವವನ್ನು ರಕ್ಷಿಸಲು ಬಯಸಿದರೆ ಅಧಿಕಾರದಲ್ಲಿರುವವರನ್ನು ತೆಗೆದುಹಾಕುವಂತೆ ನಾಗರಿಕರನ್ನು ಒತ್ತಾಯಿಸಿದರು.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಟೀಕಿಸಿದ ಅವರು, "ಚಾಚಾ ಸಿಲುಕಿಕೊಂಡಿದ್ದಾರೆ... ಅವರು ಮೊದಲಿನಂತೆಯೇ ಇಲ್ಲ... ಅವರು ಇನ್ನು ಮುಂದೆ ಮುಖ್ಯಮಂತ್ರಿಯಾಗುವುದಿಲ್ಲ" ಎಂದು ಟೀಕಿಸಿದರು.

ನನ್ನದೂ ಲಾಲೂಜಿ ರಕ್ತ

ಇದೇ ವೇಳೆ, 'ಇವರು ನನ್ನ ದೇಹದಲ್ಲೂ ಹರಿಯುತ್ತಿರುವುದು ಲಾಲೂ ಪ್ರಸಾದ್ ಯಾದವ್ ಅವರ ರಕ್ತ ಎಂಬುದನ್ನು ಮರೆತಿದ್ದಾರೆ. ಲಾಲೂ ಜಿ ಸಕ್ರಿಯವಾಗಿಲ್ಲದಿದ್ದರೂ ಅವರ ಪರವಾಗಿ ನಾನು ಹೋರಾಡುತ್ತೇನೆ. ಲಾಲೂ ಪ್ರಸಾದ್ ಯಾದವ್ ತಗ್ಗಿರಬಹುದು. ಅವರ ಮಕ್ಕಳಾದ ನಾವು ಎದ್ದಿದ್ದೇವೆ. ನಾವು ಹೋರಾಟಗಾರರು... ಸಹೋದರರೇ ಎಲ್ಲರೂ ಒಂದಾಗಿ. ಇಲ್ಲದಿದ್ದರೆ, ಅವರು ನಿಮ್ಮ ಅಸ್ತಿತ್ವವನ್ನು ಕೊನೆಗೊಳಿಸುತ್ತಾರೆ ಎಂದು ಕಿಡಿಕಾರಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT