ಬಾಗು ಖಾನ್ 
ದೇಶ

Jammu Kashmir: ಮಾನವ GPS ಎಂದೇ ಕುಖ್ಯಾತನಾಗಿದ್ದ ಉಗ್ರ ಬಾಗು ಖಾನ್ ಎನ್‌ಕೌಂಟರ್‌ಗೆ ಬಲಿ!

ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುರೆಜ್ ಸೆಕ್ಟರ್‌ನ ನಿಯಂತ್ರಣ ರೇಖೆಯ (ಎಲ್‌ಒಸಿ) ಬಳಿ 'ಮಾನವ GPS' ಎಂದೇ ಕುಖ್ಯಾತನಾಗಿದ್ದ ಭಯೋತ್ಪಾದಕ ಬಾಗು ಖಾನ್‌ನನ್ನು ಭದ್ರತಾ ಪಡೆಗಳು ಹತ್ಯೆಗೈದಿದೆ.

ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುರೆಜ್ ಸೆಕ್ಟರ್‌ನ ನಿಯಂತ್ರಣ ರೇಖೆಯ (ಎಲ್‌ಒಸಿ) ಬಳಿ 'ಮಾನವ GPS' ಎಂದೇ ಕುಖ್ಯಾತನಾಗಿದ್ದ ಭಯೋತ್ಪಾದಕ ಬಾಗು ಖಾನ್‌ನನ್ನು ಭದ್ರತಾ ಪಡೆಗಳು ಹತ್ಯೆಗೈದಿದೆ. ಬಾಗು ಖಾನ್ ನನ್ನು 'ಸಮಂದರ್ ಚಾಚಾ' ಎಂದೂ ಕರೆಯಲಾಗುತ್ತಿತ್ತು. ಅಧಿಕಾರಿಗಳು ಆತನ ಗುರುತಿನ ಚೀಟಿಯನ್ನು ಸಹ ಪತ್ತೆಹಚ್ಚಿದ್ದಾರೆ.

ಮೂಲಗಳ ಪ್ರಕಾರ, ಬಾಗು ಖಾನ್ 1995 ರಿಂದ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ವಾಸಿಸುತ್ತಿದ್ದನು. ಆತ 25 ವರ್ಷಗಳಿಂದ ಭಯೋತ್ಪಾದಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದನು. ಅತಿ ಹಳೆಯ ಒಳನುಸುಳುವಿಕೆ ಸಹಾಯಕರಲ್ಲಿ ಒಬ್ಬರಾಗಿದ್ದನು. ಆತ 100ಕ್ಕೂ ಹೆಚ್ಚು ಒಳನುಸುಳುವಿಕೆ ಘಟನೆಗಳಲ್ಲಿ ಭಾಗಿಯಾಗಿದ್ದನು. ಜಮ್ಮು ಮತ್ತು ಕಾಶ್ಮೀರದಲ್ಲಿ ಒಳನುಸುಳುವಿಕೆಯ ಎಲ್ಲಾ ಮಾರ್ಗಗಳ ಬಗ್ಗೆ ಬಾಗು ಖಾನ್‌ಗೆ ತಿಳಿದಿತ್ತು. ಸಿಕ್ಕಿಬೀಳುವುದನ್ನು ತಪ್ಪಿಸುವ ಮಾರ್ಗಗಳನ್ನು ಸಹ ತಿಳಿದಿತ್ತು. ಅದಕ್ಕಾಗಿಯೇ ಆತನನ್ನು 'ಮಾನವ ಜಿಪಿಎಸ್' ಎಂದು ಹೆಸರಿಸಲಾಯಿತು. ಭದ್ರತಾ ಸಂಸ್ಥೆಗಳ ಪಟ್ಟಿಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್‌ನ ಮೋಸ್ಟ್ ವಾಂಟೆಡ್ ಭಯೋತ್ಪಾದಕನಾಗಿದ್ದನು.

ಆಗಸ್ಟ್ 28ರಂದು ಗುರೆಜ್ ಸೆಕ್ಟರ್‌ನಲ್ಲಿ ಒಳನುಸುಳುವಿಕೆ ಪ್ರಯತ್ನದ ಸಂದರ್ಭದಲ್ಲಿ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಾಗು ಖಾನ್ ಜೊತೆ ಎನ್‌ಕೌಂಟರ್ ನಡೆಸಿದರು. ಇದರಲ್ಲಿ ಬಾಗು ಖಾನ್ ಮತ್ತು ಆತನ ಒಬ್ಬ ಸಹಚರನನ್ನು ಹತ್ಯೆ ಮಾಡಲಾಗಿದೆ. ಇನ್ನೊಬ್ಬ ಭಯೋತ್ಪಾದಕನನ್ನು ಗುರುತಿಸಲಾಗಿಲ್ಲ. ಆದಾಗ್ಯೂ, ಇಬ್ಬರ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ.

ಶೋಧ ಕಾರ್ಯಾಚರಣೆಯ ಸಮಯದಲ್ಲಿ ಭಯೋತ್ಪಾದಕರು ಗುಂಡು ಹಾರಿಸಿದ್ದರು. ಭಯೋತ್ಪಾದಕರ ಒಳನುಸುಳುವಿಕೆಯ ಬಗ್ಗೆ ಗುಪ್ತಚರ ಮಾಹಿತಿ ಸಿಕ್ಕಿತ್ತು ಎಂದು ಭಾರತೀಯ ಸೇನೆಯು ಎಕ್ಸ್‌ನಲ್ಲಿ ತಿಳಿಸಿತ್ತು. ಇದರ ಆಧಾರದ ಮೇಲೆ, ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಈ ಸಮಯದಲ್ಲಿ, ಭಯೋತ್ಪಾದಕರು ವಿವೇಚನಾರಹಿತವಾಗಿ ಗುಂಡು ಹಾರಿಸಲು ಪ್ರಾರಂಭಿಸಿದರು. ಪ್ರತೀಕಾರವಾಗಿ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಯಿತು.

ಏಪ್ರಿಲ್ 22ರಂದು ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಜಮ್ಮು ಮತ್ತು ಕಾಶ್ಮೀರದಲ್ಲಿ 7 ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಇದುವರೆಗೆ 23 ಭಯೋತ್ಪಾದಕರನ್ನು ಕೊಲ್ಲಲಾಗಿದೆ. ಇಂದು ಕೊಲ್ಲಲ್ಪಟ್ಟ ಇಬ್ಬರು ಭಯೋತ್ಪಾದಕರ ಗುರುತು ತಿಳಿದಿಲ್ಲ. ಇತರ 21 ಭಯೋತ್ಪಾದಕರಲ್ಲಿ ಹನ್ನೆರಡು ಮಂದಿ ಪಾಕಿಸ್ತಾನಿ ನಾಗರಿಕರು, ಇನ್ನು ಒಂಬತ್ತು ಮಂದಿ ಸ್ಥಳೀಯರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IndiGo Crisis|ಒಂದೇ ದಿನ 400 ವಿಮಾನಗಳ ಹಾರಾಟ ರದ್ದು, ಸುಪ್ರೀಂ ಕೋರ್ಟ್ ತಲುಪಿದ ಪ್ರಕರಣ

3rd ODI: ಬರೊಬ್ಬರಿ 2 ವರ್ಷ, ಸತತ 20 ಪಂದ್ಯ.. ಕೊನೆಗೂ ಟಾಸ್ ಗೆದ್ದ ಭಾರತ, ಕುಖ್ಯಾತ ದಾಖಲೆಗೆ ಕೆಎಲ್ ರಾಹುಲ್ ಬ್ರೇಕ್..!

IndiGo crisis|ವಿಮಾನ ಸೇವೆ ವ್ಯತ್ಯಯ ತನಿಖೆಗೆ DGCAಯಿಂದ ಉನ್ನತ ಮಟ್ಟದ ಸಮಿತಿ ರಚನೆ, ಪ್ರಯಾಣಿಕರಲ್ಲಿ ಕ್ಷಮೆ ಕೇಳಿದ ಇಂಡಿಗೋ

ಪುಟಿನ್ ಭೋಜನಕೂಟ ಭಾಗಿಯಾಗಿದ್ದಕ್ಕೆ ಶಶಿ ತರೂರ್ ವಿರುದ್ಧ ಕಾಂಗ್ರೆಸ್ ಕೆಂಗಣ್ಣು; ಪಕ್ಷ ತೊರೆಯುತ್ತಾರಾ ಮಾಜಿ ರಾಜತಂತ್ರಜ್ಞ?

ಮದುವೆ ಶಾಪಿಂಗ್‌: 50 ಸಾವಿರ ಹಣದ ಕಂತೆ ಬೀಳಿಸಿಕೊಂಡು ಹೋದ ಮಹಿಳೆ, ಸಿನೀಮೀಯ ರೀತಿ ಎತ್ತಿಕೊಂಡು ಬೈಕರ್ ಪರಾರಿ, Video Viral

SCROLL FOR NEXT