'ಮತದಾರ ಅಧಿಕಾರ ಯಾತ್ರೆ'ಯಲ್ಲಿ ರಾಹುಲ್ ಗಾಂಧಿ ಹಾಗೂ ಸಿಎಂ ಸಿದ್ದರಾಮಯ್ಯ 
ದೇಶ

ಬಿಹಾರದಲ್ಲಿ ಆರಂಭವಾದ 'Voter Adhikar Yatra' ದೇಶಾದ್ಯಂತ ವಿಸ್ತರಿಸಲಿದೆ: ರಾಹುಲ್ ಗಾಂಧಿ

ಬಿಜೆಪಿ, ಆರ್‌ಎಸ್‌ಎಸ್ ಮತ್ತು ಚುನಾವಣಾ ಆಯೋಗವು "ದೇಶದಲ್ಲಿ 'ಮತ ಚೋರಿ'(ಮತಗಳನ್ನು ಕದಿಯುವುದು)ಯಲ್ಲಿ ತೊಡಗಿವೆ" ಎಂದು ಅವರು ಆರೋಪಿಸಿದರು.

ಪಾಟ್ನಾ: ದಲಿತರು, ಅಲ್ಪಸಂಖ್ಯಾತರು ಮತ್ತು ಮಹಿಳೆಯರಿಗೆ ಮತದಾನದ ಹಕ್ಕಿದೆ ಎಂದು ಪ್ರತಿಪಾದಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಬಿಹಾರದಲ್ಲಿ ನಡೆಯುತ್ತಿರುವ 'ಮತದಾರ ಅಧಿಕಾರ ಯಾತ್ರೆ' ಮತಗಳ ಕಳ್ಳತನದ ವಿರುದ್ಧ ದೇಶಾದ್ಯಂತ ಒಂದು ಚಳುವಳಿಯಾಗಲಿದೆ ಎಂದು ಶನಿವಾರ ಹೇಳಿದ್ದಾರೆ.

ಇಂದು ಭೋಜ್‌ಪುರದ ಜಿಲ್ಲಾ ಕೇಂದ್ರವಾದ ಅರಾದಲ್ಲಿ ನಡೆದ ಕಾಂಗ್ರೆಸ್ ಯಾತ್ರೆ ವೇಳೆ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಎಸ್ಐಆರ್ "ಸಂವಿಧಾನ ಮತ್ತು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲಿನ ದಾಳಿ" ಎಂದು ಆರೋಪಿಸಿದರು.

"ಬಿಹಾರದಿಂದ ಪ್ರಾರಂಭವಾದ 'ಮತದಾರ ಅಧಿಕಾರ ಯಾತ್ರೆ' ಜನರ ಮತಗಳ್ಳತನದ ವಿರುದ್ಧ ದೇಶಾದ್ಯಂತ ಒಂದು ಚಳುವಳಿಯಾಗಲಿದೆ" ಎಂದು ಅವರು ಹೇಳಿದರು.

ಬಿಜೆಪಿ, ಆರ್‌ಎಸ್‌ಎಸ್ ಮತ್ತು ಚುನಾವಣಾ ಆಯೋಗವು "ದೇಶದಲ್ಲಿ 'ಮತ ಚೋರಿ'(ಮತಗಳನ್ನು ಕದಿಯುವುದು)ಯಲ್ಲಿ ತೊಡಗಿವೆ" ಎಂದು ಅವರು ಆರೋಪಿಸಿದರು.

"ಎನ್‌ಡಿಎ ಸರ್ಕಾರ ಮಹಾರಾಷ್ಟ್ರ ಮತ್ತು ದೇಶದ ಇತರ ಭಾಗಗಳಲ್ಲಿ ಮತಗಳನ್ನು ಕದಿಯುವಲ್ಲಿ ಯಶಸ್ವಿಯಾಗಿದೆ. ಆದರೆ ಬಿಹಾರದಲ್ಲಿ ಬಿಜೆಪಿ ಮತ್ತು ಚುನಾವಣಾ ಆಯೋಗ ಒಂದೇ ಒಂದು ಮತವನ್ನು ಕದಿಯಲು ನಾವು ಬಿಡುವುದಿಲ್ಲ" ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬೆದರಿಕೆ ನಡುವೆ 'ಆರ್ ಎಸ್ ಎಸ್' ಕುರಿತು ಸಿಎಂಗೆ ಮತ್ತೊಂದು ಪತ್ರ ಬರೆದ ಪ್ರಿಯಾಂಕ್ ಖರ್ಗೆ! ಇದರಲ್ಲಿ ಏನಿದೆ?

ಮುಳುಗುತ್ತಿದೆ ದೊಡ್ಡಣ್ಣನ ಸಾಮ್ರಾಜ್ಯ! (ಹಣಕ್ಲಾಸು)

Oscar ರೇಸ್ ಗೆ 'ಮಹಾವತಾರ್ ನರಸಿಂಹ' ಚಿತ್ರ!, ಹೊಂಬಾಳೆ ಫಿಲ್ಮ್ಸ್ ಮಾಸ್ಟರ್ ಪ್ಲಾನ್?

'4ನೇ ಪತ್ನಿಯ ಜೀವನ ನಿರ್ವಹಣೆಗೆ 30 ಸಾವಿರ ರೂ. ಮಾಸಿಕ ಪರಿಹಾರ ನೀಡಬೇಕು.. ಇಲ್ಲ.. ': ಎಸ್ ಪಿ ಮುಖಂಡನಿಗೆ ಕೋರ್ಟ್ ಎಚ್ಚರಿಕೆ

ಮಕ್ಕಳ ಜೀವ ತೆಗೆದ ಕೆಮ್ಮಿನ ಸಿರಪ್ ಬಳಿಕ ಭೀತಿ ಹುಟ್ಟಿಸುತ್ತಿವೆ 'ಆ್ಯಂಟಿಬಯಾಟಿಕ್'ಗಳು

SCROLL FOR NEXT