ಮಹುವಾ ಮೊಯಿತ್ರಾ 
ದೇಶ

'ಅಮಿತ್ ಶಾ ತಲೆ ಕತ್ತರಿಸಿ ಟೇಬಲ್ ಮೇಲೆ ಇಡಬೇಕು' ಎಂದಿದ್ದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ FIR

ಗಡಿ ಭದ್ರತೆಯ ಜವಾಬ್ದಾರಿಗಳಿಂದ ಕೇಂದ್ರ ಸರ್ಕಾರ ನುಣುಚಿಕೊಳ್ಳುತ್ತಿದೆ ಎಂದು ಟಿಎಂಸಿ ಸಂಸದೆ ಆರೋಪಿಸಿದರು.

ರಾಯ್‌ಪುರ: ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕಾಗಿ ಛತ್ತೀಸಗಢದ ರಾಯ್‌ಪುರದಲ್ಲಿ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಸ್ಥಳೀಯ ನಿವಾಸಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ, ಶನಿವಾರ ಮಾನಾ ಪೊಲೀಸ್ ಠಾಣೆಯಲ್ಲಿ ಮೊಯಿತ್ರಾ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 196 (ಧರ್ಮ, ಜನಾಂಗ, ಜನ್ಮಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷ ಉತ್ತೇಜಿಸುವುದು) ಮತ್ತು 197 (ರಾಷ್ಟ್ರೀಯ ಏಕೀಕರಣಕ್ಕೆ ಪೂರ್ವಾಗ್ರಹ ಪೀಡಿತವಾದ ಆರೋಪಗಳು, ಪ್ರತಿಪಾದನೆಗಳು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಾಂಗ್ಲಾದೇಶದಿಂದ ಒಳನುಸುಳುವಿಕೆಯನ್ನು ತಡೆಯಲು ವಿಫಲವಾದರೆ, 'ಮೊದಲು ಮಾಡಬೇಕಾದ ಕೆಲಸವೆಂದರೆ, ಅಮಿತ್ ಶಾ ಅವರ ತಲೆಯನ್ನು ಕತ್ತರಿಸಿ ಮೇಜಿನ ಮೇಲೆ ಇಡಬೇಕು' ಎಂದು ಮೊಯಿತ್ರಾ ಹೇಳುವ ಮೂಲಕ ವಿವಾದವನ್ನು ಹುಟ್ಟುಹಾಕಿದರು.

ಗುರುವಾರ ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಅವರು ಈ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.

ಗಡಿ ಭದ್ರತೆಯ ಜವಾಬ್ದಾರಿಗಳಿಂದ ಕೇಂದ್ರ ಸರ್ಕಾರ ನುಣುಚಿಕೊಳ್ಳುತ್ತಿದೆ ಎಂದು ಟಿಎಂಸಿ ಸಂಸದೆ ಆರೋಪಿಸಿದರು.

ಮೊಯಿತ್ರಾ ಅವರ ಹೇಳಿಕೆಗಳು ಆಕ್ಷೇಪಾರ್ಹ ಮತ್ತು ಸಂವಿಧಾನಬಾಹಿರ ಎಂದು ದೂರುದಾರ ಗೋಪಾಲ್ ಸಮಂತೋ ಆರೋಪಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

1971 ರಲ್ಲಿ ರಾಯ್‌ಪುರದ ಮಾನಾ ಕ್ಯಾಂಪ್ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯ ಬಾಂಗ್ಲಾದೇಶಿ ನಿರಾಶ್ರಿತರು ನೆಲೆಸಿದ್ದರು ಮತ್ತು ಮೊಯಿತ್ರಾ ಅವರ ಹೇಳಿಕೆಯು ಅವರಲ್ಲಿ ಭಯವನ್ನು ಉಂಟುಮಾಡಿದೆ. ಏಕೆಂದರೆ ಅಂತಹ ಹೇಳಿಕೆಗಳು ಇತರ ಸಮುದಾಯಗಳ ಆಕ್ರೋಶಕ್ಕೆ ಕಾರಣವಾಗಬಹುದು ಎಂದು ಅಧಿಕಾರಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Flood Relief: ಕರ್ನಾಟಕ, ಮಹಾರಾಷ್ಟ್ರಕ್ಕೆ ರೂ. 1,950 ಕೋಟಿ ಬಿಡುಗಡೆಗೆ ಕೇಂದ್ರದ ಅನುಮೋದನೆ!

ದೊಡ್ಡಬಳ್ಳಾಪುರ: "ಹೃದಯವಂತ ಆರ್.ಎಲ್.ಜಾಲಪ್ಪ ಜೀವನ‌ ಪಥ"; ಕೃತಿ ಲೋಕಾರ್ಪಣೆಗೊಳಿಸಿದ ಸಿಎಂ ಸಿದ್ದರಾಮಯ್ಯ!

ವಿಕೃತ ಮನಸ್ಥಿತಿ: ಪ್ರತಿಭಟನೆ ನಡೆಸುತ್ತಿದ್ದ ತನ್ನದೇ ಜನರ ಮೇಲೆ 'ಮಲ' ಸುರಿಸುವ AI ವಿಡಿಯೋ ಹರಿಬಿಟ್ಟ Donald Trump

ಮಂಗಳೂರು: Honeytrap ಯುವಕ ಆತ್ಮಹತ್ಯೆ; ಗೆಳತಿಯರು ಬಟ್ಟೆ ಬದಲಿಸುವ ವಿಡಿಯೋ ಸೆರೆಹಿಡಿದು ವೈರಲ್, ಯುವತಿ ಬಂಧನ!

Pune: ಐತಿಹಾಸಿಕ 'ಶನಿವಾರ ವಾಡಾ' ಕೋಟೆಯಲ್ಲಿ ಮುಸ್ಲಿಂ ಮಹಿಳೆಯರ ನಮಾಜ್! ವಿಡಿಯೋ ವೈರಲ್ , ಪ್ರತಿಭಟನೆ

SCROLL FOR NEXT