ಜೈರಾಮ್ ರಮೇಶ್ 
ದೇಶ

ಆಪರೇಷನ್ ಸಿಂಧೂರ್ ವೇಳೆಯ 'ಅಪವಿತ್ರ ಮೈತ್ರಿ'ಯನ್ನು ಸದ್ದಿಲ್ಲದೆ ಒಪ್ಪಿಕೊಂಡ ಮೋದಿ ಸರ್ಕಾರ! ಚೀನಾ ಆಕ್ರಮಣವನ್ನು ಕಾನೂನುಬದ್ಧಗೊಳಿಸುತ್ತಿದ್ದೆಯೇ?: ಕಾಂಗ್ರೆಸ್

ಟಿಯಾಂಜಿನ್‌ನಲ್ಲಿ ಅಧ್ಯಕ್ಷ ಕ್ಸಿ ಅವರನ್ನು ಭೇಟಿಯಾದ ಮೋದಿ, ಪರಸ್ಪರ ನಂಬಿಕೆ, ಗೌರವ ಮತ್ತು ಸೂಕ್ಷ್ಮತೆಯ ಆಧಾರದ ಮೇಲೆ ಚೀನಾದೊಂದಿಗಿನ ಬಾಂಧವ್ಯವನ್ನು ಮುಂದುವರಿಸಲು ಭಾರತ ಬದ್ಧವಾಗಿದೆ ಎಂದು ಹೇಳಿದರು.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರನ್ನು ಭೇಟಿಯಾಗುತ್ತಿದ್ದಂತೆ ಪ್ರತಿಪಕ್ಷ ಕಾಂಗ್ರೆಸ್ ಭಾನುವಾರ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದೆ.

ಚೀನಾದಿಂದ ಬೆದರಿಸುವಿಕೆ ಹೊಸದೇನಲ್ಲಾ. ಬೆನ್ನು ಮೂಳೆ ಇಲ್ಲದ ಸರ್ಕಾರ ಎಂದು ವ್ಯಾಖ್ಯಾನಿಸಬಹುದೇ ಎಂದು ಕೇಳಿದೆ. ಚೀನಾದೊಂದಿಗಿನ ಸಮನ್ವಯಕ್ಕೆ ಮೋದಿ ಸರ್ಕಾರ ತಳ್ಳುವಿಕೆಯು ವಾಸ್ತವಿಕವಾಗಿ ಅದರ ಪ್ರಾದೇಶಿಕ ಆಕ್ರಮಣವನ್ನು ಕಾನೂನುಬದ್ಧಗೊಳಿಸುತ್ತಿದೆಯೇ ಎಂದು ಕಾಂಗ್ರೆಸ್ ಕೇಳಿದೆ.

ಟಿಯಾಂಜಿನ್‌ನಲ್ಲಿ ಅಧ್ಯಕ್ಷ ಕ್ಸಿ ಅವರನ್ನು ಭೇಟಿಯಾದ ಮೋದಿ, ಪರಸ್ಪರ ನಂಬಿಕೆ, ಗೌರವ ಮತ್ತು ಸೂಕ್ಷ್ಮತೆಯ ಆಧಾರದ ಮೇಲೆ ಚೀನಾದೊಂದಿಗಿನ ಬಾಂಧವ್ಯವನ್ನು ಮುಂದುವರಿಸಲು ಭಾರತ ಬದ್ಧವಾಗಿದೆ ಎಂದು ಹೇಳಿದರು.

ಕ್ಸಿ ಜಿನ್ ಪಿಂಗ್ ಜೊತೆಗಿನ ಪ್ರಧಾನಿ ಮೋದಿ ಅವರ ಸಭೆಯಲ್ಲಿ ಜೂನ್ 2020ರಲ್ಲಿ ನಡೆದ ಗಾಲ್ವಾನಾ ಕಣಿವೆ ಸಂಘರ್ಷದಲ್ಲಿ ಪ್ರಾಣತೆತ್ತ 20 ವೀರ ಯೋಧರ ತ್ಯಾಗದ ಬೆಲೆಯನ್ನು ಮೌಲ್ಯಮಾಪನ ಮಾಡಬೇಕು ಎಂದಿದ್ದಾರೆ. ಆದರೂ, ಚೀನಾದ ಆಕ್ರಮಣವನ್ನು ಗುರುತಿಸುವ ಬದಲು, ಜೂನ್ 19, 2020 ರಂದು ಪ್ರಧಾನಿ ಮೋದಿ ಚೀನಾಕ್ಕೆ (ಕುಖ್ಯಾತ) ಕ್ಲೀನ್ ಚಿಟ್ ನೀಡಿದರು ಎಂದಿದ್ದಾರೆ.

ಲಡಾಖ್‌ನಲ್ಲಿ ಚೀನಾ ಗಡಿಯಲ್ಲಿ ಯಥಾಸ್ಥಿತಿಯನ್ನು ಸಂಪೂರ್ಣವಾಗಿ ಮರುಸ್ಥಾಪಿಸಲು ಸೇನಾ ಮುಖ್ಯಸ್ಥರು ಒತ್ತಾಯಿಸಿದ್ದಾರೆ. ಅದನ್ನು ಸಾಧಿಸಲು ವಿಫಲವಾಗಿದ್ದರೂ ಮೋದಿ ಸರ್ಕಾರವು ಚೀನಾದೊಂದಿಗೆ ಸಮನ್ವಯಕ್ಕೆ ಮುಂದಾಗಿದೆ. ವಾಸ್ತವಿಕವಾಗಿ ಅವರ ಪ್ರಾದೇಶಿಕ ಆಕ್ರಮಣವನ್ನು ಕಾನೂನುಬದ್ಧಗೊಳಿಸಿದೆ" ಎಂದು ಅವರು ಟೀಕಿಸಿದ್ದಾರೆ.

ಆಪರೇಷನ್ ಸಿಂಧೂರ್ ಸಮಯದಲ್ಲಿ ಪಾಕಿಸ್ತಾನದೊಂದಿಗೆ ಚೀನಾದ ಪಾಲುದಾರಿಕೆ ಕುರಿತು ಜುಲೈ 4, 2025 ರಂದು ಸೇನೆಯ ಉಪ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ರಾಹುಲ್ ಸಿಂಗ್ ಪ್ರಾಮಾಣಿಕವಾಗಿ ಹೇಳಿದ್ದಾರೆ "ಈ ಅಪವಿತ್ರ ಮೈತ್ರಿಗೆ ಪ್ರತಿಕ್ರಿಯಿಸುವ ಬದಲು, ಮೋದಿ ಸರ್ಕಾರವು ಅದನ್ನು ಸದ್ದಿಲ್ಲದೆ ಒಪ್ಪಿಕೊಂಡಿದೆ.ಈಗ ಚೀನಾಕ್ಕೆ ಭೇಟಿ ನೀಡುವ ಮೂಲಕ ಅದಕ್ಕೆ ಬಹುಮಾನ ನೀಡುತ್ತಿದೆ ಎಂದು ರಮೇಶ್ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಕಿಡಿಕಾರಿದ್ದಾರೆ.

ಯಾರ್ಲುಂಗ್ ತ್ಸಾಂಗ್ಪೋದಲ್ಲಿ ಚೀನಾ ಬೃಹತ್ ಜಲವಿದ್ಯುತ್ ಯೋಜನೆಯನ್ನು ಘೋಷಿಸಿದೆ. ಅದು ನಮ್ಮ ಈಶಾನ್ಯ ಭಾರತದ ಮೇಲೆ ಬಹಳ ಗಂಭೀರ ಪರಿಣಾಮಗಳನ್ನು ಬೀರುತ್ತದೆ.'ಮೋದಿ ಸರ್ಕಾರ ಈ ವಿಷಯದ ಬಗ್ಗೆ ಒಂದು ಮಾತನ್ನೂ ಆಡಿಲ್ಲ. ಚೀನಾದಿಂದ ಆಮದು ಮಾಡಿಕೊಳ್ಳುವ ಅನಿಯಂತ್ರಿತ 'ಡಂಪಿಂಗ್' ನಮ್ಮ MSME ಗಳನ್ನು ಧ್ವಂಸಗೊಳಿಸುತ್ತಿದೆ ಎಂದು ರಮೇಶ್ ಹೇಳಿದ್ದಾರೆ. "ಇತರ ದೇಶಗಳಿಗಿಂತ ಭಿನ್ನವಾಗಿ, ನಾವು ಹೆಚ್ಚಾಗಿ ಚೀನಾದ ಆಮದುದಾರರಿಗೆ ಮುಕ್ತ ಅವಕಾಶ ನೀಡಿದ್ದೇವೆ. ಚೀನಾದಿಂದ ಬೆದರಿಸುವಿಕೆ ಹೊಸದೇನಲ್ಲಾ. ಬೆನ್ನು ಮೂಳೆ ಇಲ್ಲದ ಸರ್ಕಾರ ಎಂದು ವ್ಯಾಖ್ಯಾನಿಸಬಹುದೇ ಎಂದು ಜೈ ರಾಂ ರಮೇಶ್ ಕಿಡಿಕಾರಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮನ್ರೇಗಾ ಹೆಸರು ಬದಲಾವಣೆಗೆ ವಿರೋಧ: ನಾಳೆ ಕಾಂಗ್ರೆಸ್​ನಿಂದ ರಾಜಭವನ ಚಲೋ- DCM ಡಿಕೆ ಶಿವಕುಮಾರ್

T20 ವಿಶ್ವಕಪ್‌ಗೂ ಮುನ್ನ PAK ಹೊಸ ಆಟ: ಭಾರತದ ವಿರುದ್ಧದ ಪಂದ್ಯ ಬಹಿಷ್ಕರಿಸುವ ಬೆದರಿಕೆ!

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ಸಿದ್ದರಾಮಯ್ಯ ಆಕ್ರೋಶ ಬೆನ್ನಲ್ಲೇ​ ರಾಜೀವ್ ಗೌಡ ಬಂಧಿಸಿದ ಪೊಲೀಸರು!

News headlines 26-01-2026| R-Day: ಸರ್ಕಾರದ ಭಾಷಣ ಸಂಪೂರ್ಣ ಓದಿದ ರಾಜ್ಯಪಾಲರು; ಶತಾವಧಾನಿ ಗಣೇಶ್ ಸೇರಿ ರಾಜ್ಯದ 8 ಸಾಧಕರಿಗೆ ಪದ್ಮ ಪ್ರಶಸ್ತಿ; ಶಿವಮೊಗ್ಗ-ಭದ್ರಾವತಿ ರಸ್ತೆಯಲ್ಲಿ ಭೂಕುಸಿತ: ಬದಲಿ ಸಂಚಾರ ಮಾರ್ಗ

ಭಾರತದಲ್ಲಿ ಹಿಂದೂಗಳಿಂದಾಗಿ ಮುಸ್ಲಿಮರು ಸುರಕ್ಷಿತವಾಗಿದ್ದಾರೆ: ಅಸ್ಸಾಂ ಚುನಾವಣೆಗೂ ಮುನ್ನ ಮೌಲಾನಾ ಬದ್ರುದ್ದೀನ್ ಹೇಳಿಕೆ!

SCROLL FOR NEXT