ದೆಹಲಿ ವಾಯು ಮಾಲಿನ್ಯ 
ದೇಶ

'ದೆಹಲಿ ಮಾಲಿನ್ಯಕ್ಕೆ ರೈತರನ್ನು ದೂರುವುದು ತಪ್ಪು': ಕೃಷಿ ತ್ಯಾಜ್ಯ ಸುಡುವ ಆರೋಪಕ್ಕೆ ಸುಪ್ರೀಂ ಕೋರ್ಟ್ ಗರಂ

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಸುಪ್ರೀಂ ಪೀಠ, "ಕೃಷಿ ತ್ಯಾಜ್ಯ ಸುಡುವ ವಿಷಯವು ಅನಗತ್ಯವಾಗಿ ರಾಜಕೀಯ ವಿಷಯ ಅಥವಾ ಅಹಂಕಾರದ ಸಮಸ್ಯೆಯಾಗಬಾರದು" ಎಂದು ಎಚ್ಚರಿಸಿದೆ.

ನವದೆಹಲಿ: ದೆಹಲಿ-ರಾಷ್ಟ್ರ ರಾಜಧಾನಿ ಪ್ರದೇಶದಲ್ಲಿನ ವಾಯು ಮಾಲಿನ್ಯ ಸಮಸ್ಯೆಯನ್ನು ಚಳಿಗಾಲದ ತಿಂಗಳುಗಳಲ್ಲಿ ಮಾತ್ರ ಪಟ್ಟಿ ಮಾಡಬೇಕಾದ "ಸಾಂಪ್ರದಾಯಿಕ" ಪ್ರಕರಣವೆಂದು ಪರಿಗಣಿಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ. ಅಲ್ಲದೆ ಈ ಪಿಡುಗಿಗೆ ಅಲ್ಪಾವಧಿ ಮತ್ತು ದೀರ್ಘಾವಧಿಯ ಪರಿಹಾರಗಳನ್ನು ಕಂಡುಹಿಡಿಯಲು ತಿಂಗಳಿಗೆ ಎರಡು ಬಾರಿ ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಸುಪ್ರೀಂ ಪೀಠ, "ಕೃಷಿ ತ್ಯಾಜ್ಯ ಸುಡುವ ವಿಷಯವು ಅನಗತ್ಯವಾಗಿ ರಾಜಕೀಯ ವಿಷಯ ಅಥವಾ ಅಹಂಕಾರದ ಸಮಸ್ಯೆಯಾಗಬಾರದು" ಎಂದು ಎಚ್ಚರಿಸಿದೆ.

ದೆಹಲಿ-ಎನ್‌ಸಿಆರ್‌ನಲ್ಲಿ ವಾಯು ಮಾಲಿನ್ಯಕ್ಕೆ ಕೃಷಿ ತ್ಯಾಜ್ಯ ಸುಡುವಿಕೆಯು ಪ್ರಮುಖ ಕಾರಣವಾಗಿದೆ ಎಂಬ ಸಾಮಾನ್ಯ ಆರೋಪವನ್ನು ಪ್ರಶ್ನಿಸಿದ ಹರಿಯಾಣದ ಹಿಸ್ಸಾರ್‌ನ ರೈತ ಕುಟುಂಬದಿಂದ ಬಂದ ಸಿಜೆಐ ಕಾಂತ್, "ಕೋವಿಡ್ ಸಮಯದಲ್ಲೂ ಕೃಷಿ ತ್ಯಾಜ್ಯ ಸುಡಲಾಗುತ್ತಿತ್ತು, ಆದರೂ ಜನ ಸ್ಪಷ್ಟವಾದ ನೀಲಿ ಆಕಾಶವನ್ನು ನೋಡುತ್ತಿದ್ದರು. ಇದು ಮಾಲಿನ್ಯಕ್ಕೆ ಇತರ ಅಂಶಗಳು ಕಾರಣ ಎಂದು ಸೂಚಿಸುತ್ತದೆ" ಎಂದರು.

"ಈ ನ್ಯಾಯಾಲಯದಲ್ಲಿ ವಿರಳವಾಗಿ ಪ್ರಾತಿನಿಧ್ಯ ಹೊಂದಿರುವ ಜನರ(ರೈತರ) ಮೇಲೆ ದೆಹಲಿ ಮಾಲಿನ್ಯದ ಹೊರೆಯನ್ನು ವರ್ಗಾಯಿಸುವುದು ತಪ್ಪಾಗಿರುವುದರಿಂದ ನಾವು ತ್ಯಾಜ್ಯ ಸುಡುವಿಕೆಯ ಬಗ್ಗೆ ಪ್ರತಿಕ್ರಿಯಿಸಲು ಬಯಸುವುದಿಲ್ಲ" ಎಂದು ಸಿಜೆಐ ಹೇಳಿದರು.

ತಕ್ಷಣದ ಮತ್ತು ದೀರ್ಘಕಾಲೀನ ಕ್ರಮಗಳ ಕುರಿತು ಸ್ಪಷ್ಟತೆಯನ್ನು ಕೋರಿ, ವಾಯು ಗುಣಮಟ್ಟ ನಿರ್ವಹಣಾ ಆಯೋಗ(CAQM), ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ಮತ್ತು ಇತರರಿಗೆ ವಾಯು ಮಾಲಿನ್ಯದ ಅಪಾಯವನ್ನು ನಿಭಾಯಿಸಲು ತೆಗೆದುಕೊಂಡ ಅಲ್ಪಾವಧಿ ಮತ್ತು ದೀರ್ಘಾವಧಿಯ ಕ್ರಮಗಳ ಬಗ್ಗೆ ಮಾಹಿತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸಿಜೆಐ ಸೂಚಿಸಿ, ವಿಚಾರಣೆಯನ್ನು ಡಿಸೆಂಬರ್ 10ಕ್ಕೆ ಮುಂದೂಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತಕ್ಕೆ ಬರುತ್ತಿದ್ದ ಸರಕು ಹಡಗಿನ ಮೇಲೆ ದಾಳಿ- ಹೊಣೆ ಹೊತ್ತ ಇರಾನ್; ಭಾರತದ ಪ್ರತಿಕ್ರಿಯೆ ಏನು?

ತೈಲ ಪೂರೈಕೆಗೆ ರಿಯಾಯಿತಿ ಸ್ಥಗಿತ ಬೆನ್ನಲ್ಲೇ ಎಚ್ಚೆತ್ತ ಭಾರತ; ರಷ್ಯಾ ವಿದೇಶಾಂಗ ಸಚಿವರಿಗೆ ಜೈಶಂಕರ್ ದೂರವಾಣಿ ಕರೆ; ಮಹತ್ವದ ಚರ್ಚೆ!

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು; ಪ್ರತಿಪಕ್ಷಗಳಿಗೆ ಮುಖಭಂಗ

IPL 2026: ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ಉದ್ಘಾಟನಾ ಪಂದ್ಯ; ಮಾರ್ಚ್ 28 ರಂದು RCB vs SRH

'ರಕ್ಷಿತ್ ಶೆಟ್ಟಿ-ರಶ್ಮಿಕಾ ನಿಶ್ಚಿತಾರ್ಥ ಮುರಿದುಬೀಳಲು ಇದೇ ಕಾರಣ': ತಾಯಿ ಸುಮನ್ ಮಂದಣ್ಣರದ್ದು ಎನ್ನಲಾದ ಆಡಿಯೋ ವೈರಲ್!

SCROLL FOR NEXT