ಪ್ರಧಾನಿ ಮೋದಿ 
ದೇಶ

ಸಂಸತ್ ಚಳಿಗಾಲದ ಅಧಿವೇಶನ: ಸೋಲಿನ ಭೀತಿ ಚರ್ಚೆಗೆ ಕಾರಣವಾಗಬಾರದು: ವಿಪಕ್ಷಗಳಿಗೆ ಪ್ರಧಾನಿ ಮೋದಿ ಟಾಂಗ್!

ಭಾರತ ಪ್ರಜಾಪ್ರಭುತ್ವದಲ್ಲಿ ಬದುಕಿದ್ದು, ಪ್ರಜಾಪ್ರಭುತ್ವದ ಉತ್ಸಾಹ ಪದೇ ಪದೇ ವ್ಯಕ್ತವಾಗುತ್ತಿರುವುದರಿಂದ ಪ್ರಜಾಪ್ರಭುತ್ವದ ಮೇಲಿನ ನಂಬಿಕೆ ಬಲವಾಗಿ ಬೆಳೆಯುತ್ತಲೇ ಇದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ನವದೆಹಲಿ: ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ ಪ್ರಾರಂಭವಾಗಿದ್ದು, ಈ ಅಧಿವೇಶನದಲ್ಲಿ ಸೋಲಿನ ಭೀತಿ ಪ್ರತಿಪಕ್ಷಗಳ ಚರ್ಚೆಗೆ ಕಾರಣವಾಗಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ.

ಸಂಸತ್ ಭವನದ ಮುಂದೆ ಸುದ್ದಿಗಾರರೊಂದಿಗೆ ಮಾತನಾಡಿದ ಮೋದಿ, ಭಾರತ ಪ್ರಜಾಪ್ರಭುತ್ವದಲ್ಲಿ ಬದುಕಿದ್ದು, ಪ್ರಜಾಪ್ರಭುತ್ವದ ಉತ್ಸಾಹ ಪದೇ ಪದೇ ವ್ಯಕ್ತವಾಗುತ್ತಿರುವುದರಿಂದ ಪ್ರಜಾಪ್ರಭುತ್ವದ ಮೇಲಿನ ನಂಬಿಕೆ ಬಲವಾಗಿ ಬೆಳೆಯುತ್ತಲೇ ಇದೆ ಎಂದರು.

ಈ ಅಧಿವೇಶನದಲ್ಲಿ ಸೋಲಿನ ಭೀತಿ ಚರ್ಚೆಗೆ ಕಾರಣವಾಗಬಾರದು ಎಂದು ವಿಪಕ್ಷಗಳನ್ನು ಒತ್ತಾಯಿಸುತ್ತೇನೆ. ಜನರ ಪ್ರತಿನಿಧಿಗಳಾಗಿ, ಭವಿಷ್ಯದ ಬಗ್ಗೆ ಯೋಚಿಸುವಾಗ ನಾವು ದೇಶದ ಜನರ ಜವಾಬ್ದಾರಿ ಮತ್ತು ನಿರೀಕ್ಷೆಗಳನ್ನು ಅತ್ಯಂತ ಸಮತೋಲನ ಮತ್ತು ಜವಾಬ್ದಾರಿಯಿಂದ ನಿರ್ವಹಿಸಬೇಕು ಎಂದು ಹೇಳಿದರು.

ಈ ಸಂಸತ್ತು ದೇಶದ ಬಗ್ಗೆ ಏನು ಯೋಚಿಸುತ್ತದೆ ದೇಶಕ್ಕಾಗಿ ಏನು ಮಾಡಲು ಬಯಸುತ್ತದೆ ಎಂಬುದರ ಮೇಲೆ ಅಧಿವೇಶನ ಗಮನ ಕೇಂದ್ರೀಕರಿಸಬೇಕು. ವಿರೋಧ ಪಕ್ಷಗಳು ಸಹ ತನ್ನ ಜವಾಬ್ದಾರಿ ಅರಿತು ಕಾರ್ಯನಿರ್ವಹಿಸಬೇಕು. ಅಂತಹ ಸಮಸ್ಯೆಗಳು, ಬಲವಾದ ಸಮಸ್ಯೆಗಳನ್ನು ಎತ್ತಬೇಕು. ಅವರ ಸೋಲಿನ ನಿರಾಶೆಯನ್ನು ಮರೆತುಬಿಡಬೇಕು ಎಂದರು.

ದುರಾದೃಷ್ಟವಶಾತ್ ಸೋಲನ್ನು ಅರಗಿಸಿಕೊಳ್ಳಲು ಸಾಧ್ಯವಾಗದ ಕೆಲವು ಪಕ್ಷಗಳಿವೆ. ಬಿಹಾರ ಫಲಿತಾಂಶ ಬಂದು ಸ್ವಲ್ಪ ದಿನ ಆಗಿರುವುದರಿಂದ ಅವರು ಸ್ವಲ್ಪ ಶಾಂತವಾಗಿರಬಹುದು ಎಂದು ಅಂದುಕೊಂಡಿದ್ದೆ. ಆದರೆ ಅವರು ಸೋಲಿನಿಂದ ಹೊರಬಂದಿಲ್ಲ ಎಂಬ ವಿಚಾರವನ್ನು ನಿನ್ನೆ ನಾನು ಕೇಳಿದೆ ಎಂದರು.

ನಾಟಕ ಮಾಡ ಬಯಸುವವರ ಅದನ್ನು ಇಲ್ಲಿ ಮಾಡಬಹುದು. ಆದರೆ ನಾಟಕವಲ್ಲ, ನೀತಿಯ ಮೇಲೆ ಮಾಡಬಹುದು. ಪ್ರತಿಭಟನೆ ಅಲ್ಲ ಎಂದು ಹೇಳಿದರು. ಡಿಸೆಂಬರ್ 19ರವರೆಗೂ ಸಂಸತ್ ಚಳಿಗಾಲದ ಅಧಿವೇಶನ ಮುಂದುವರೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಣ್ವಸ್ತ್ರ ಒತ್ತಡಕ್ಕೆ ಮಣಿಯದ ಅಮೆರಿಕಾ: ಶಾಂತಿ ಪ್ರಸ್ತಾವನೆಗೆ ನಕಾರ; ಷರತ್ತುಗಳು ಅತಿಯಾಯ್ತು-ಸಮಯ ವ್ಯರ್ಥ ಮಾಡುತ್ತಿದ್ದಾರೆ; ಇರಾನ್ ವಿರುದ್ಧ ಟ್ರಂಪ್ ತೀವ್ರ ಕಿಡಿ

ಕದನ ವಿರಾಮ ನಡುವಲ್ಲೂ ಲೆಬನಾನ್ ಮೇಲೆ ಇಸ್ರೇಲ್ ದಾಳಿ: 10 ಮಂದಿ ಸಾವು, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

ಅಮೆರಿಕ ಜೊತೆ ಮಾತುಕತೆ ನಡೆಸಲು ಪಾಕಿಸ್ತಾನಿ ಮಧ್ಯವರ್ತಿಗಳಿಗೆ ಹೊಸ ಪ್ರಸ್ತಾವನೆ ಕಳುಹಿಸಿದ ಇರಾನ್!

ನಾಯಕತ್ವ ಬದಲಾವಣೆ ಚರ್ಚೆ ನಡುವೆ ಕೌತುಕ ಸೃಷ್ಟಿಸಿದ ಸಿಎಂ ಸಿದ್ದರಾಮಯ್ಯ-ಬಿ.ಕೆ ಹರಿಪ್ರಸಾದ್ ಮಾತುಕತೆ! Video

IPL 2026: ರಾಹುಲ್ ಭರ್ಜರಿ ಬ್ಯಾಟಿಂಗ್; ರಾಜಸ್ಥಾನ ವಿರುದ್ಧ ಡೆಲ್ಲಿ 7 ವಿಕೆಟ್ ಗೆಲುವು!

SCROLL FOR NEXT