ಸಂಸತ್ ಚಳಿಗಾಲದ ಅಧಿವೇಶನ 
ದೇಶ

ಸಂಸತ್ ಚಳಿಗಾಲದ ಅಧಿವೇಶನ: SIR ಬಗ್ಗೆ ಚರ್ಚೆಗೆ ವಿಪಕ್ಷಗಳ ಪ್ರತಿಭಟನೆ, ಗದ್ದಲ; ಲೋಕಸಭೆ ಕಲಾಪ ಮಧ್ಯಾಹ್ನ 2ಕ್ಕೆ ಮುಂದೂಡಿಕೆ

ಅಧಿವೇಶನದ ಮೊದಲ ದಿನ ಕಲಾಪ ಆರಂಭವಾಗುತ್ತಿದ್ದಂತೆ ಇದೇ ವಿಚಾರ ಮುಂದಿಟ್ಟುಕೊಂಡು ಪ್ರತಿಪಕ್ಷಗಳು ಗದ್ದಲ ಉಂಟು ಮಾಡಿದ್ದರಿಂದ ಕಲಾಪವನ್ನು ಮೊದಲಿಗೆ ಮಧ್ಯಾಹ್ನ 12 ಗಂಟೆಯವರೆಗೂ ಮುಂದೂಡಲಾಗಿತ್ತು.

ನವದೆಹಲಿ: ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಪ್ರಾರಂಭವಾಗಿದ್ದು, ದೇಶಾದ್ಯಂತ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿರೋಧಿಸಿ ವಿರೋಧ ಪಕ್ಷಗಳುತೀವ್ರ ಘೋಷಣೆ ಕೂಗಿ ಗದ್ದಲ ಎಬ್ಬಿಸಿದ್ದರಿಂದ ಲೋಕಸಭೆಯನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಲಾಗಿದೆ.

ಅಧಿವೇಶನದ ಮೊದಲ ದಿನ ಕಲಾಪ ಆರಂಭವಾಗುತ್ತಿದ್ದಂತೆ ಇದೇ ವಿಚಾರ ಮುಂದಿಟ್ಟುಕೊಂಡು ಪ್ರತಿಪಕ್ಷಗಳು ಗದ್ದಲ ಉಂಟು ಮಾಡಿದ್ದರಿಂದ ಕಲಾಪವನ್ನು ಮೊದಲಿಗೆ ಮಧ್ಯಾಹ್ನ 12 ಗಂಟೆಯವರೆಗೂ ಮುಂದೂಡಲಾಗಿತ್ತು.

ತದನಂತರ ಕಲಾಪ ಸಮಾವೇಶಗೊಂಡಲೂ ಹಲವು ವಿರೋಧ ಪಕ್ಷಗಳ ಸದಸ್ಯರು SIR ವಿಷಯದ ಬಗ್ಗೆ ಚರ್ಚೆಗೆ ಒತ್ತಾಯಿಸಿ ಘೋಷಣೆ ಕೂಗುತ್ತಾ ಪ್ರತಿಭಟನೆ ನಡೆಸಿದರು. ಇದರಿಂದಾಗಿ ಕಲಾಪವನ್ನು ಮಧ್ಯಾಹ್ನವನ್ನು 2 ಗಂಟೆಯವರೆಗೂ ಮುಂದೂಡಲಾಯಿತು.

ಶೂನ್ಯ ವೇಳೆಯ 12 ನಿಮಿಷಗಳ ಅವಧಿಯಲ್ಲಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2025-2026 ರ ಅನುದಾನಕ್ಕಾಗಿ ಪೂರಕ ಬೇಡಿಕೆಗಳನ್ನು ಮಂಡಿಸುವುದರ ಜೊತೆಗೆ ಮೂರು ಮಸೂದೆಗಳನ್ನು ಮಂಡಿಸಿದರು.

ತಂಬಾಕು ಮತ್ತು ತಂಬಾಕು ಉತ್ಪನ್ನಗಳ ಮೇಲೆ ಅಬಕಾರಿ ಸುಂಕ ವಿಧಿಸುವ ಮತ್ತು ಪಾನ್ ಮಸಾಲಾ ತಯಾರಿಕೆಯ ಮೇಲೆ ಹೊಸ ಸೆಸ್ ವಿಧಿಸುವ ಕೇಂದ್ರ ಅಬಕಾರಿ (ತಿದ್ದುಪಡಿ) ಮಸೂದೆ, ಆರೋಗ್ಯ ಭದ್ರತೆ ಮತ್ತು ರಾಷ್ಟ್ರೀಯ ಭದ್ರತಾ ಸೆಸ್ ಮಸೂದ, ಮಣಿಪುರ ಸರಕು ಮತ್ತು ಸೇವಾ ತೆರಿಗೆ (ಎರಡನೇ ತಿದ್ದುಪಡಿ) ಮಸೂದೆ 2025 ಅನ್ನು ಹಣಕಾಸು ಸಚಿವರು ಮಂಡಿಸಿದರು.

ಇದಕ್ಕೂ ಮುನ್ನಾ ಮಣಿಪುರ ಜಿಎಸ್‌ಟಿಯ ಮೇಲೆ ಸರ್ಕಾರ ಸುಗ್ರೀವಾಜ್ಞೆಯನ್ನು ಹೊರಡಿಸಿತ್ತು ಏಕೆಂದರೆ ರಾಜ್ಯವು ರಾಷ್ಟ್ರಪತಿ ಆಳ್ವಿಕೆಯಲ್ಲಿದೆ. ವಿರೋಧ ಪಕ್ಷದ ಸದಸ್ಯರು ತಮ್ಮ ಪ್ರತಿಭಟನೆಯನ್ನು ಮುಂದುವರಿಸಿದ್ದರಿಂದ ಲೋಕಸಭಾ ಸ್ಪೀಕರ್ ಸದನವನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಾಂಗ್ಲಾದಲ್ಲಿ 'ಪ್ರಜಾಪ್ರಭುತ್ವ ಗಡಿಪಾರು'; ಚುನಾವಣೆ ಮುಕ್ತವಾಗಿರುವುದಿಲ್ಲ: ಯೂನಸ್ ವಿರುದ್ಧ ಮಾಜಿ ಪ್ರಧಾನಿ ಹಸೀನಾ ವಾಗ್ದಾಳಿ

IND vs NZ 2nd T20: ಭಾರತಕ್ಕೆ 7 ವಿಕೆಟ್‌ ಗೆಲುವು

ಬ್ಯಾನರ್ ಗಲಾಟೆ ಮಾಸುವ ಮುನ್ನವೇ ಜನಾರ್ದನ ರೆಡ್ಡಿಗೆ ಸೇರಿದ ಮಾಡೆಲ್‌ ಹೌಸ್‌ಗೆ ಬೆಂಕಿ; ಕಾಂಗ್ರೆಸ್ ಕೃತ್ಯ ಎಂದು ಕಿಡಿ!

'ವಿಬಿ ಜಿ ರಾಮ್ ಜಿ' ಕಾಯ್ದೆ ಜಾರಿ ಬಗ್ಗೆ NDA ಮಿತ್ರ ಪಕ್ಷ ಆತಂಕ: ರಾಜಕೀಯವಾಗಿ ಮಹತ್ವದ್ದು ಎಂದ ಸಿದ್ದರಾಮಯ್ಯ!

ಮಹಾರಾಷ್ಟ್ರ ರಾಜಕಾರಣದಲ್ಲಿ ಟ್ವಿಸ್ಟ್ ಮೇಲೆ ಟ್ವಿಸ್ಟ್! BMC ಯಲ್ಲಿ ಬದ್ಧವೈರಿಗಳು ಒಂದಾಗುವ ಸಾಧ್ಯತೆ?

SCROLL FOR NEXT