ಸಾಂದರ್ಭಿಕ ಚಿತ್ರ 
ದೇಶ

ಯುಪಿಯಲ್ಲಿ ಮತ್ತೊಬ್ಬ BLO ಸಾವು; SIR ಕೆಲಸದ ಒತ್ತಡಕ್ಕೆ ಒಂದೇ ವಾರದಲ್ಲಿ ಐವರು ಬಲಿ

ಹತ್ರಾಸ್ ಜಿಲ್ಲೆಯ ಸಿಕಂದ್ರ ರಾವ್‌ನ ಬ್ರಹ್ಮನ್‌ಪುರಿ ಪ್ರದೇಶದ ನಿವಾಸಿ 40 ವರ್ಷದ ಕಮಲಕಾಂತ್ ಶರ್ಮಾ ಅವರು ಮಂಗಳವಾರ ಬೆಳಗ್ಗೆ ತಮ್ಮ ನಿವಾಸದಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

ಲಖನೌ: ಉತ್ತರ ಪ್ರದೇಶದಲ್ಲಿ ವಿವಾದಾತ್ಮಕ ವಿಶೇಷ ಸಮಗ್ರ ಪರಿಷ್ಕರಣೆ(SIR)ಗೆ ಸಂಬಂಧಿಸಿದ ಕೆಲಸದ ಒತ್ತಡದಿಂದಾಗಿ ಮತ್ತೊಬ್ಬ ಬೂತ್ ಮಟ್ಟದ ಅಧಿಕಾರಿ(BLO) ಸಾವನ್ನಪ್ಪಿದ್ದು, ಒಂದು ವಾರಕ್ಕಿಂತ ಕಡಿಮೆ ಅವಧಿಯಲ್ಲಿ ಐವರು ಬಿಎಲ್ಒ ಮೃತಪಟ್ಟಿದ್ದಾರೆ.

ಹತ್ರಾಸ್ ಜಿಲ್ಲೆಯ ಸಿಕಂದ್ರ ರಾವ್‌ನ ಬ್ರಹ್ಮನ್‌ಪುರಿ ಪ್ರದೇಶದ ನಿವಾಸಿ 40 ವರ್ಷದ ಕಮಲಕಾಂತ್ ಶರ್ಮಾ ಅವರು ಮಂಗಳವಾರ ಬೆಳಗ್ಗೆ ತಮ್ಮ ನಿವಾಸದಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

ನವಲಿ ಲಾಲ್‌ಪುರದ ಕಾಂಪೋಸಿಟ್ ಶಾಲೆಯಲ್ಲಿ ಸಹಾಯಕ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಶರ್ಮಾ ಅವರು ಅವರು BLO ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಕುಟುಂಬ ಸದಸ್ಯರ ಪ್ರಕಾರ, ಶರ್ಮಾ ತಮ್ಮ ಮನೆಯ ಮೇಲಿನ ಮಹಡಿಯಿಂದ ಕೆಳಗೆ ಬಂದು ಚಹಾ ಕುಡಿಯುತ್ತಿದ್ದಾಗ ಇದ್ದಕ್ಕಿದ್ದಂತೆ ತಲೆತಿರುಗುವಿಕೆ ಉಂಟಾಗಿ ಕುಸಿದು ಬಿದ್ದರು. ತಕ್ಷಣ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ದಾರಿ ಮಧ್ಯೆಯೇ ನಿಧನರಾದರು. ಅವರ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಶರ್ಮಾ ಅವರ ಮಗ ವಿನಾಯಕ್, BLO ಕರ್ತವ್ಯಗಳಿಗೆ ಸಂಬಂಧಿಸಿದ ಕೆಲಸದ ಹೊರೆಯಿಂದಾಗಿ ತಮ್ಮ ತಂದೆ ತೀವ್ರ ಒತ್ತಡಕ್ಕೆ ಸಿಲುಕಿದ್ದರು ಹೇಳಿರುವುದಾಗಿ ಎಂದು ಪಿಟಿಐ ವರದಿ ಮಾಡಿದೆ.

"ಅವರು ಬೆಳಗ್ಗೆ 7 ಗಂಟೆ ಸುಮಾರಿಗೆ ಚಹಾ ಕುಡಿಯಲು ಕೆಳಗೆ ಬಂದರು ಮತ್ತು ಇದ್ದಕ್ಕಿದ್ದಂತೆ ಮೂರ್ಛೆ ಹೋದರು. ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಅವರು ನಿಧನರಾದರು" ಎಂದು ಪುತ್ರ ತಿಳಿಸಿದ್ದಾರೆ.

ನವೆಂಬರ್ 30 ರಂದು, 46 ವರ್ಷದ ದಲಿತ ಶಾಲಾ ಶಿಕ್ಷಕ ಸರ್ವೇಶ್ ಕುಮಾರ್ ಮೊರಾದಾಬಾದ್ ಜಿಲ್ಲೆಯ ತಮ್ಮ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರನ್ನು ಅಕ್ಟೋಬರ್ 7 ರಂದು ಬಿಎಲ್‌ಒ ಆಗಿ ನೇಮಿಸಲಾಗಿತ್ತು. ಕುಮಾರ್ ಅವರು ತಮ್ಮ ಆತ್ಮಹತ್ಯೆ ಪತ್ರದಲ್ಲಿ ಬಿಎಲ್ ಒ ಕೆಲಸ ಉಸಿರುಗಟ್ಟಿಸುತ್ತಿರುವುದಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಟಿ ತ್ರಿಶಾ ಕುರಿತು ಆಕ್ಷೇಪಾರ್ಹ ಹೇಳಿಕೆ; DMK ನಾಯಕ ಉದಯನಿಧಿ ಸ್ಟಾಲಿನ್ ಪೊಲೀಸ್ ವಶಕ್ಕೆ, ತಮಿಳುನಾಡು ರಾಜಕೀಯದಲ್ಲಿ ತೀವ್ರ ಸಂಚಲನ..!

Crass, cheap and derogatory': ನಟಿ ತ್ರಿಶಾಗೆ ಅಸಭ್ಯ, ಕೀಳುಮಟ್ಟದಲ್ಲಿ ಅಪಮಾನ, ಉದಯನಿಧಿ ಸ್ಟಾಲಿನ್ ಕ್ಷಮೆಯಾಚನೆಗೆ ಖುಷ್ಬೂ ಸುಂದರ್ ಒತ್ತಾಯ!

ಹೊಸ ಸುಂಕ ನೀತಿಗೆ ಅಮೆರಿಕದಲ್ಲೇ ಭಾರಿ ವಿರೋಧ: ಭಾರತ ಸೇರಿ 59 ದೇಶಗಳ ಪರ ನಿಂತ 25 ರಾಜ್ಯಗಳು; ಟ್ರಂಪ್ ಸರ್ಕಾರಕ್ಕೆ ಕಾನೂನು ಸಂಕಷ್ಟ..!

West Asia War: ಒಪ್ಪಂದಕ್ಕೆ ಬರ್ತೀರಾ? ಇತಿಹಾಸ ಸೇರ್ತೀರಾ?; ಇರಾನ್‌ಗೆ ಟ್ರಂಪ್ ಲಾಸ್ಟ್ ವಾರ್ನಿಂಗ್..!

"ನನಗೊಬ್ಬ ಪಾಕಿಸ್ತಾನಿ ಹುಡುಗನನ್ನು ಹುಡುಕಿ ಕೊಡಿ" ಸಂಘಿ ಹೇಳಿಕೆ ಬೆನ್ನಲ್ಲೇ ಕಂಗನಾ ರಣಾವತ್ ಹಳೆಯ VIDEO ವೈರಲ್!