ಚಂಡಮಾರುತ ಪೀಡಿತ ಶ್ರೀಲಂಕಾ 
ದೇಶ

ಪ್ರವಾಹ ಪೀಡಿತ ಶ್ರೀಲಂಕಾಗೆ ನೆರವು ನೀಡುವ ಪಾಕ್ ವಿಮಾನಗಳಿಗೆ ಭಾರತ ವಾಯು ಪ್ರದೇಶ ಬಂದ್ ಮಾಡಿತ್ತೇ?

ಪಾಕಿಸ್ತಾನವು ಡಿಸೆಂಬರ್ 1 ರಂದು ಮಧ್ಯಾಹ್ನ 1 ಗಂಟೆಗೆ (IST) ಭಾರತೀಯ ವಾಯುಪ್ರದೇಶದ ಮೇಲೆ ಹಾರಲು ಅನುಮತಿ ಕೋರಿ ತನ್ನ ಔಪಚಾರಿಕ ವಿನಂತಿಯನ್ನು ಸಲ್ಲಿಸಿತು.

ನವದೆಹಲಿ: ಪ್ರವಾಹ ಪೀಡಿತ ಶ್ರೀಲಂಕಾಗೆ ನೆರವು ನೀಡಲು ತನ್ನ ವಾಯುಪ್ರದೇಶ ಬಳಸಲು ಭಾರತ ಅನುಮತಿ ನೀಡಿಲ್ಲ ಎಂದು ಪಾಕಿಸ್ತಾನ ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಈ ವರದಿಗಳೆಲ್ಲಾ ಸುಳ್ಳು ಎಂದು ಭಾರತ ತಳ್ಳಿಹಾಕಿದೆ.

ಪಾಕಿಸ್ತಾನವು ಡಿಸೆಂಬರ್ 1 ರಂದು ಮಧ್ಯಾಹ್ನ 1 ಗಂಟೆಗೆ (IST) ಭಾರತೀಯ ವಾಯುಪ್ರದೇಶದ ಮೇಲೆ ಹಾರಲು ಅನುಮತಿ ಕೋರಿ ತನ್ನ ಔಪಚಾರಿಕ ವಿನಂತಿಯನ್ನು ಸಲ್ಲಿಸಿತು.

ಶ್ರೀಲಂಕಾಕ್ಕೆ ಮಾನವೀಯ ನೆರವಿಗೆ ಸಂಬಂಧಿಸಿದ ವಿನಂತಿಯನ್ನು ಪರಿಗಣಿಸಿ, ಭಾರತ ಸರ್ಕಾರ ನಿನ್ನೆ ಸಂಜೆ 5 ಗಂಟೆಗೆ (IST) ವಿನಂತಿಯನ್ನು ಒಪ್ಪಿಕೊಂಡಿತ್ತು ಎಂದು ಭಾರತದ ಅಧಿಕಾರಿಗಳು ಹೇಳಿದ್ದಾರೆ.

ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ಪಾಕಿಸ್ತಾನ ತನ್ನ ವಾಯುಪ್ರದೇಶವನ್ನು ನಿಷೇಧಿಸಿದ್ದರೂ ಸಂಪೂರ್ಣವಾಗಿ ಮಾನವೀಯ ಆಧಾರದ ಮೇಲೆ ಮನವಿಯನ್ನು ಪರಿಗಣಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಪಾಕಿಸ್ತಾನ ಮಾಧ್ಯಮಗಳು ಎಂದಿನಂತೆ ಪ್ರಚಾರದಲ್ಲಿ ತೊಡಗಿದ್ದು, ಸುಳ್ಳು ಸುದ್ದಿಗಳನ್ನು ಹರಡುತ್ತಿವೆ. ಈ ಆರೋಪಗಳು ಆಧಾರರಹಿತವಾಗಿವೆ ಎಂದು ಅವರು ಟೀಕಿಸಿದ್ದಾರೆ.

ಓವರ್‌ಫ್ಲೈಟ್ ಅಥವಾ ಸಾಗಣೆಗೆ ಸಂಬಂಧಿಸಿದ ಎಲ್ಲಾ ಮನವಿಗಳನ್ನು ನಿಯಮಗಳು ಮತ್ತು ಅಂತಾರಾಷ್ಟ್ರೀಯ ಮಾನದಂಡಗಳಿಗೆ ಅನುಗುಣವಾಗಿ ಪರಿಗಣಿಸಲಾಗಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಒಂದೆ ಕಂಪನಿಯ ವಾಚ್ ಕಟ್ಟಿ ಒಗ್ಗಟ್ಟು ಪ್ರದರ್ಶಿಸಿದ್ರಾ CM, DCM?; Cartier ವಾಚಿನ ಬೆಲೆ ಎಷ್ಟು ಗೊತ್ತಾ?

PMO ಕಚೇರಿಗೆ 'ಸೇವಾ ತೀರ್ಥ': ದೇಶದಲ್ಲಿರುವ ಎಲ್ಲಾ ರಾಜಭವನಗಳಿಗೆ 'ಲೋಕಭವನ' ಎಂದು ಮರುನಾಮಕರಣ!

ಗೌತಮ್ ಗಂಭೀರ್ ಗೆ ಮೂಗುದಾರ..? ಮೆಂಟರ್ ಆಗಿ MS Dhoni ಎಂಟ್ರಿ.. 2026 ಟಿ20 ವಿಶ್ವಕಪ್ ಗೆ ಸಿದ್ಧತೆ!

ಯುಪಿಯಲ್ಲಿ ಮತ್ತೊಬ್ಬ BLO ಸಾವು; SIR ಕೆಲಸದ ಒತ್ತಡಕ್ಕೆ ಒಂದೇ ವಾರದಲ್ಲಿ ಐವರು ಬಲಿ

SIR ಚರ್ಚೆಗೆ ಕೇಂದ್ರ ಸಿದ್ಧ, 'ಯಾವುದೇ ಷರತ್ತು ಹಾಕಬೇಡಿ' ಎಂದ ಸಚಿವ ರಿಜಿಜು; ಪ್ರತಿಪಕ್ಷಗಳ ಸಭಾತ್ಯಾಗ!

SCROLL FOR NEXT