ಅಶ್ವಿನಿ ವೈಷ್ಣವ್ ಜೊತೆ ಮೂವರು ಕ್ರಿಕೆಟ್ ಆಟಗಾರ್ತಿಯರು 
ದೇಶ

ಮಹಿಳಾ ವಿಶ್ವಕಪ್ ಕ್ರಿಕೆಟ್: ಮೂವರು ಚಾಂಪಿಯನ್‌ಗಳಿಗೆ ಬಡ್ತಿ ನೀಡಿದ ಭಾರತೀಯ ರೈಲ್ವೆ

ಇದಕ್ಕೂ ಮೊದಲು ರಾವಲ್ ಅವರು ರೈಲ್ವೆನಲ್ಲಿ ಹಿರಿಯ ಗುಮಾಸ್ತರಾಗಿ, ರೇಣುಕಾ ಮತ್ತು ರಾಣಾ ಅವರು ಕ್ರಮವಾಗಿ ಉತ್ತರ ರೈಲ್ವೆಯಲ್ಲಿ ಜೂನಿಯರ್ ಗುಮಾಸ್ತ ಮತ್ತು ಟಿಕೆಟ್ ಗುಮಾಸ್ತರಾಗಿ ಕೆಲಸ ನಿರ್ವಹಿಸುತ್ತಿದ್ದರು.

ನವದೆಹಲಿ: ಕ್ರೀಡಾ ಪ್ರತಿಭೆಗಳನ್ನು ಬೆಂಬಲಿಸುವ ಮತ್ತು ಉತ್ತೇಜಿಸುವ ತನ್ನ ಸುದೀರ್ಘ ಸಂಪ್ರದಾಯವನ್ನು ಭಾರತೀಯ ರೈಲ್ವೆ ಇಲಾಖೆ ಮುಂದುವರಿಸಿದೆ.

ಏಕದಿನ ಮಹಿಳಾ ವಿಶ್ವಪ್‌ ವಿಜೇತೆ ಭಾರತ ಮಹಿಳಾ ತಂಡದ ಆಟಗಾರ್ತಿಯರಾದ ಸ್ನೇಹ್ ರಾಣಾ ರೇಣುಕಾ ಸಿಂಗ್ ಮತ್ತು ಪ್ರತಿಕಾ ರಾವಲ್ ಅವರಿಗೆ ರೈಲ್ವೆ ಸಚಿವಾಲಯವು 'ಆಫೀಸರ್ ಆನ್ ಸ್ಪೆಷಲ್ ಡ್ಯೂಟಿ (ಕ್ರೀಡೆ)' ಹುದ್ದೆಗೆ ಬಡ್ತಿ ನೀಡಿದೆ.

ಈ ಮೂವರು ಆಟಗಾರ್ತಿಯರು ‘ಔಟ್ ಆಫ್ ಟರ್ನ್’ ಬಡ್ತಿ ಮೂಲಕ ಗ್ರೂಪ್ ಬಿ ಅಧಿಕಾರಿ ಹುದ್ದೆಯನ್ನು ಪಡೆದಿದ್ದಾರೆ. ಇದಕ್ಕೂ ಮೊದಲು ರಾವಲ್ ಅವರು ರೈಲ್ವೆನಲ್ಲಿ ಹಿರಿಯ ಗುಮಾಸ್ತರಾಗಿ, ರೇಣುಕಾ ಮತ್ತು ರಾಣಾ ಅವರು ಕ್ರಮವಾಗಿ ಉತ್ತರ ರೈಲ್ವೆಯಲ್ಲಿ ಜೂನಿಯರ್ ಗುಮಾಸ್ತ ಮತ್ತು ಟಿಕೆಟ್ ಗುಮಾಸ್ತರಾಗಿ ಕೆಲಸ ನಿರ್ವಹಿಸುತ್ತಿದ್ದರು.

7ನೇ ಸಿಪಿಸಿ ಪ್ರಕಾರ ಪೇ ಮ್ಯಾಟ್ರಿಕ್ಸ್‌ನ ಲೆವೆಲ್‌–8ರ ಅಡಿಯಲ್ಲಿ ಗ್ರೂಪ್ ಬಿ ಗೆಜೆಟೆಡ್ ಅಧಿಕಾರಿಯ ವೇತನ ಮತ್ತು ಸವಲತ್ತು ಪಡೆಯಲು ಅರ್ಹರಾಗಿದ್ದಾರೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ರೈಲ್ವೆ ಕ್ರೀಡಾ ಪ್ರಚಾರ ಮಂಡಳಿಯ ಈ ಉಪಕ್ರಮವು ಮೂವರು ಮಹಿಳಾ ಕ್ರಿಕೆಟಿಗರಿಗೆ ಆರ್ಥಿಕ ಭದ್ರತೆ ಒದಗಿಸುವುದಲ್ಲದೆ, ಅವರಿಗೆ ಆಡಳಿತಾತ್ಮಕ ಜವಾಬ್ದಾರಿಗಳನ್ನು ವಹಿಸುತ್ತದೆ ಎಂದು ಹೇಳಿದೆ.

ನವೆಂಬರ್ ಆರಂಭದಲ್ಲಿ, ಮೂವರು ಕ್ರೀಡಾಪಟುಗಳನ್ನು ಕೇಂದ್ರ ಸಚಿವೆ ಅಶ್ವಿನಿ ವೈಷ್ಣವ್ ಅವರು ರೈಲ್ ಭವನದಲ್ಲಿ ಸನ್ಮಾನಿಸಿದ್ದರು ಎಂಬುದನ್ನು ಸ್ಮರಿಸಬಹುದು.

ದೆಹಲಿಯಿಂದ ಬಂದಿರುವ ಪ್ರತೀಕಾ ರಾವಲ್ ಅತ್ಯಂತ ಬಲಿಷ್ಠ ಆರಂಭಿಕ ಬ್ಯಾಟ್ಸ್‌ಮನ್ ಮತ್ತು ಭಾರತದ ವಿಶ್ವಕಪ್ ವಿಜೇತ ಅಭಿಯಾನಕ್ಕೆ ಗಣನೀಯ ಕೊಡುಗೆ ನೀಡಿದ್ದಾರೆ, ಪ್ರತಿಕಾ ರಾವಲ್ ಅವರು ಉತ್ತರ ರೈಲ್ವೆಯಲ್ಲಿ ಹಿರಿಯ ಗುಮಾಸ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ರೈಲ್ವೆ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

WPL 2026: ನೇರವಾಗಿ ಫೈನಲ್ ಪ್ರವೇಶಿಸಿದ ಸ್ಮೃತಿ ಮಂದಾನ ನಾಯಕತ್ವದ RCB ಪಡೆ!

17ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ಸಿಎಂ ಸಿದ್ದರಾಮಯ್ಯ ಉದ್ಘಾಟನೆ

ಟ್ರಂಪ್ ದಾಳಿ ಬೆದರಿಕೆ ಬೆನ್ನಲ್ಲೇ ಇರಾನ್‌ಗೆ ಶಾಕ್: ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್‌ ಉಗ್ರ ಸಂಘಟನೆ ಎಂದು ಪಟ್ಟಿ ಮಾಡಿದ EU!

ಒಟ್ಟಾರೆ 320 ಕೋಟಿ ಆಸ್ತಿ ಮುಟ್ಟುಗೋಲು: ಕರ್ನಾಟಕ Congress ಶಾಸಕ, ಸಹಚರರು ಅಕ್ರಮ ಬೆಟ್ಟಿಂಗ್ ಜಾಲದ 'ಮಾಸ್ಟರ್ ಮೈಂಡ್'; ED

Indian Armyಗೆ 2 ದೀರ್ಘ-ಶ್ರೇಣಿಯ 'Suryastra' ರಾಕೆಟ್ ಲಾಂಚರ್‌ ಸೇರ್ಪಡೆ, ಶೀಘ್ರ live-fire ಪ್ರಯೋಗ!

SCROLL FOR NEXT