ಜ್ಯೋತಿರಾದಿತ್ಯ ಸಿಂಧಿಯಾ  online desk
ದೇಶ

ಸಂಚಾರ್ ಸಾಥಿಯಿಂದ Snooping ಅಸಾಧ್ಯ; ಪ್ರೀ-ಇನ್ಸ್ಟಾಲ್ ಆದೇಶ ವಾಪಸ್: ಸಚಿವ ಸಿಂಧಿಯಾ

ಸಾಧನಗಳಲ್ಲಿ ಅಪ್ಲಿಕೇಶನ್ ಸ್ಥಾಪನೆಗೆ ಸಂಬಂಧಿಸಿದ ಆದೇಶದಲ್ಲಿ ಬದಲಾವಣೆಗಳನ್ನು ಮಾಡಲು ಸಚಿವಾಲಯ ಸಿದ್ಧವಾಗಿದೆ ಎಂದು ಅವರು ಲೋಕಸಭೆಗೆ ತಿಳಿಸಿದರು.

ನವದೆಹಲಿ: ಸಂಚಾರ್ ಸಾಥಿ ಅಪ್ಲಿಕೇಶನ್ ಕುರಿತು ಗೌಪ್ಯತೆ ಕಳವಳಗಳ ನಡುವೆ, ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಬುಧವಾರ, ಸ್ನೂಪಿಂಗ್ (ಗೂಢಚಾರಿಕೆ) ಸಾಧ್ಯವಿಲ್ಲ ಅಥವಾ ಅಪ್ಲಿಕೇಶನ್‌ನಿಂದಲೂ ಅದು ಸಂಭವಿಸುವುದಿಲ್ಲ ಎಂದು ಪ್ರತಿಪಾದಿಸಿದರು.

ಸಂಚಾರ್ ಸಾಥಿ ಅಪ್ಲಿಕೇಶನ್ ಬಗ್ಗೆ ವ್ಯಾಪಕ ವಿರೋಧ ಮತ್ತು ಗೌಪ್ಯತೆ ಕಾಳಜಿಯ ನಡುವೆ, ಕೇಂದ್ರ ಬುಧವಾರ ದೇಶದ ಎಲ್ಲಾ ಮೊಬೈಲ್ ಫೋನ್‌ಗಳಲ್ಲಿ ಸಂಚಾರ್ ಸಾಥಿ ಅಪ್ಲಿಕೇಶನ್ ನ್ನು ಪ್ರೀ ಇನ್ಸ್ಟಾಲ್ ಮಾಡುವುದನ್ನು ಕಡ್ಡಾಯಗೊಳಿಸುವ ತನ್ನ ಆದೇಶವನ್ನು ಹಿಂತೆಗೆದುಕೊಂಡಿದೆ.

ಸಾಧನಗಳಲ್ಲಿ ಅಪ್ಲಿಕೇಶನ್ ಸ್ಥಾಪನೆಗೆ ಸಂಬಂಧಿಸಿದ ಆದೇಶದಲ್ಲಿ ಬದಲಾವಣೆಗಳನ್ನು ಮಾಡಲು ಸಚಿವಾಲಯ ಸಿದ್ಧವಾಗಿದೆ ಎಂದು ಅವರು ಲೋಕಸಭೆಗೆ ತಿಳಿಸಿದರು.

ಸಂಚಾರ್ ಸಾಥಿ ಅಪ್ಲಿಕೇಶನ್ ನಲ್ಲಿ ಸ್ನೂಪಿಂಗ್ ಸಂಭವವೂ ಇಲ್ಲ ಸ್ನೂಪಿಂಗ್ ನಡೆಯುವುದೂ ಇಲ್ಲ" ಎಂದು ಕಾಂಗ್ರೆಸ್ ನಾಯಕ ದೀಪೇಂದರ್ ಸಿಂಗ್ ಹೂಡಾ ಅವರ ಅಪ್ಲಿಕೇಶನ್‌ಗೆ ಸಂಬಂಧಿಸಿದ ಸ್ನೂಪಿಂಗ್ ಕಳವಳಗಳ ಕುರಿತು ಪೂರಕ ಪ್ರಶ್ನೆಗೆ ಪ್ರತಿಕ್ರಿಯಿಸುತ್ತಾ ಅವರು ಹೇಳಿದರು.

ನವೆಂಬರ್ 28 ರಂದು ಸಚಿವಾಲಯದ ಆದೇಶ, ಎಲ್ಲಾ ಮೊಬೈಲ್ ಫೋನ್ ತಯಾರಕರು ಸಾಫ್ಟ್‌ವೇರ್ ನವೀಕರಣದ ಮೂಲಕ ಭಾರತದಲ್ಲಿ ಮಾರಾಟವಾಗುವ ಎಲ್ಲಾ ಹ್ಯಾಂಡ್‌ಸೆಟ್‌ಗಳಲ್ಲಿ ಮತ್ತು ಅಸ್ತಿತ್ವದಲ್ಲಿರುವ ಸಾಧನಗಳಲ್ಲಿ ಸಂಚಾರ್ ಸಾಥಿ ಅಪ್ಲಿಕೇಶನ್ ಪ್ರೀ ಇನ್ಸ್ಟಾಲ್ ಮಾಡುವುದನ್ನು ಕಡ್ಡಾಯಗೊಳಿಸಿದ್ದು ವಿವಾದಕ್ಕೆ ಕಾರಣವಾಗಿದೆ. ಬಳಕೆದಾರರು ಅಪ್ಲಿಕೇಶನ್ ನ್ನು ಬಳಸಲು ಬಯಸದಿದ್ದರೆ ಅದನ್ನು ಅಳಿಸಲು ಮುಕ್ತರಾಗಿದ್ದಾರೆ ಎಂದು ಸಿಂಧಿಯಾ ಹೇಳಿದರು.

ಸಂಭಾವ್ಯ ಸ್ನೂಪಿಂಗ್ ಬಗ್ಗೆ ಮತ್ತು ಬಳಕೆದಾರರು ವಿನಿಮಯ ಮಾಡಿಕೊಳ್ಳುವ ಸಂದೇಶಗಳನ್ನು ಓದಲು ಈ ಅಪ್ಲಿಕೇಶನ್ ನ್ನು ಬಳಸಬಹುದು ಎಂಬ ಕಳವಳ ವ್ಯಕ್ತವಾಗಿದೆ.

ಈ ಅಪ್ಲಿಕೇಶನ್ ಜನರ ರಕ್ಷಣೆಗಾಗಿ ಎಂದು ಪ್ರತಿಪಾದಿಸಿದ ಸಿಂಧಿಯಾ, ಸರ್ಕಾರ ಗ್ರಾಹಕರಿಗೆ ಆಯ್ಕೆಗಳನ್ನು ನೀಡಲು ಬಯಸುತ್ತದೆ ಎಂದು ಲೋಕಸಭೆಗೆ ತಿಳಿಸಿದರು.

ಗ್ರಾಹಕರು ಅಪ್ಲಿಕೇಶನ್‌ನಲ್ಲಿ ನೋಂದಾಯಿಸದಿದ್ದರೆ, ಅಪ್ಲಿಕೇಶನ್ ಕಾರ್ಯನಿರ್ವಹಿಸುವುದಿಲ್ಲ ಮತ್ತು ಗ್ರಾಹಕರು ಅಪ್ಲಿಕೇಶನ್ ನ್ನು ಅಳಿಸಬಹುದು ಎಂದು ಅವರು ಹೇಳಿದ್ದಾರೆ. ಈ ವರೆಗೂ ಸುಮಾರು 1.5 ಕೋಟಿ ಸಂಚಾರ್ ಸಾಥಿ ಅಪ್ಲಿಕೇಶನ್ ಡೌನ್‌ಲೋಡ್‌ಗಳಾಗಿವೆ.

‌‌ಸಂಚಾರ್ ಸಾಥಿ ಪೋರ್ಟಲ್ ಮತ್ತು ಅಪ್ಲಿಕೇಶನ್‌ನೊಂದಿಗೆ, 26 ಲಕ್ಷ ಕದ್ದ ಹ್ಯಾಂಡ್‌ಸೆಟ್‌ಗಳನ್ನು ಪತ್ತೆಹಚ್ಚಲಾಗಿದೆ, 7 ಲಕ್ಷ ಕದ್ದ ಹ್ಯಾಂಡ್‌ಸೆಟ್‌ಗಳನ್ನು ಗ್ರಾಹಕರಿಗೆ ಹಿಂತಿರುಗಿಸಲಾಗಿದೆ, 41 ಲಕ್ಷ ಮೊಬೈಲ್ ಸಂಪರ್ಕಗಳನ್ನು ಕಡಿತಗೊಳಿಸಲಾಗಿದೆ ಮತ್ತು 6 ಲಕ್ಷ ವಂಚನೆಗಳನ್ನು ನಿರ್ಬಂಧಿಸಲಾಗಿದೆ ಎಂದು ಸಚಿವರು ಹೇಳಿದರು.

ಸಚಿವಾಲಯದ ಆದೇಶ ಮೊಬೈಲ್ ಫೋನ್ ಕಂಪನಿಗಳು ಮೊದಲೇ ಸ್ಥಾಪಿಸಲಾದ ಸಂಚಾರ್ ಸಾಥಿ ಅಪ್ಲಿಕೇಶನ್ ಮೊದಲ ಬಳಕೆ ಅಥವಾ ಸಾಧನ ಸೆಟಪ್ ಸಮಯದಲ್ಲಿ ಅಂತಿಮ ಬಳಕೆದಾರರಿಗೆ ಸುಲಭವಾಗಿ ಗೋಚರಿಸುತ್ತದೆ ಮತ್ತು ಪ್ರವೇಶಿಸಬಹುದಾಗಿದೆ ಮತ್ತು ಅದರ ಕಾರ್ಯಗಳನ್ನು ನಿಷ್ಕ್ರಿಯಗೊಳಿಸಲಾಗಿಲ್ಲ ಅಥವಾ ನಿರ್ಬಂಧಿಸಲಾಗಿಲ್ಲ ಎಂದು ಖಚಿತಪಡಿಸಿಕೊಳ್ಳಬೇಕು ಎಂದು ಆದೇಶಿಸುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

2ನೇ ಏಕದಿನ: ಕೊಹ್ಲಿ, ಗಾಯಕ್ವಾಡ್ ಸ್ಫೋಟಕ ಶತಕ; ಆಫ್ರಿಕಾ ವಿರುದ್ಧ 358 ರನ್ ಬೃಹತ್ ಮೊತ್ತ ಪೇರಿಸಿದ ಭಾರತ

ಕೋಚ್ ಗಂಭೀರ್ ಜೊತೆ ಮುನಿಸು: ODI ನಲ್ಲಿ 53ನೇ ಶತಕ ಸಿಡಿಸಿ ವಿಶ್ವದ ಏಕೈಕ ಬ್ಯಾಟರ್ Virat Kohli!

ಕರ್ನಾಟಕ ರಾಜಭವನಕ್ಕೆ ಲೋಕಭವನ ಎಂದು ಮರುನಾಮಕರಣ

ಬಣ ಬಡಿದಾಟ: ಮಂಗಳೂರಿನಲ್ಲಿ ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಬೆಂಬಲಿಗರಿಂದ ಜೈಕಾರ ಘೋಷಣೆ- Video

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣಗೆ ಮತ್ತೊಂದು ಶಾಕ್; ಜೀವಾವಧಿ ಶಿಕ್ಷೆಗೆ ತಡೆ ನೀಡಲು ಹೈಕೋರ್ಟ್ ನಕಾರ

SCROLL FOR NEXT