ಸಾಂದರ್ಭಿಕ ಚಿತ್ರ 
ದೇಶ

ಛತ್ತೀಸ್‌ಗಢ: ಬಿಜಾಪುರದಲ್ಲಿ ಎನ್‌ಕೌಂಟರ್‌ಗೆ ಐವರು ನಕ್ಸಲರು ಬಲಿ; ಒಬ್ಬ ಪೊಲೀಸ್ ಹುತಾತ್ಮ

ಗುಂಡಿನ ಚಕಮಕಿಯಲ್ಲಿ ಮತ್ತೊಬ್ಬ ಜವಾನ್ ಗಾಯಗೊಂಡಿದ್ದು, ಕಾರ್ಯಾಚರಣೆ ಇನ್ನೂ ಮುಂದುವರೆದಿದೆ ಎಂದು ಅವರು ಹೇಳಿದ್ದಾರೆ.

ಬಿಜಾಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಬುಧವಾರ ನಡೆದ ಎನ್‌ಕೌಂಟರ್‌ನಲ್ಲಿ ಐವರು ನಕ್ಸಲರನ್ನು ಹತ್ಯೆ ಮಾಡಲಾಗಿದೆ. ಗುಂಡಿನ ಕಾಳಗದಲ್ಲಿ ಜಿಲ್ಲಾ ಮೀಸಲು ಪೊಲೀಸ್ ಪಡೆ(ಡಿಆರ್‌ಜಿ)ಯ ಒಬ್ಬ ಜವಾನ್ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗುಂಡಿನ ಚಕಮಕಿಯಲ್ಲಿ ಮತ್ತೊಬ್ಬ ಜವಾನ್ ಗಾಯಗೊಂಡಿದ್ದು, ಕಾರ್ಯಾಚರಣೆ ಇನ್ನೂ ಮುಂದುವರೆದಿದೆ ಎಂದು ಅವರು ಹೇಳಿದ್ದಾರೆ.

ದಂತೇವಾಡ ಜಿಲ್ಲೆಯ ಪಕ್ಕದಲ್ಲಿರುವ ಗಂಗಲೂರು ಪ್ರದೇಶದ ಕಾಡಿನಲ್ಲಿ ಭದ್ರತಾ ಸಿಬ್ಬಂದಿಯ ಜಂಟಿ ತಂಡ ನಕ್ಸಲ್ ವಿರೋಧಿ ಕಾರ್ಯಾಚರಣೆಗೆ ಹೊರಟಿದ್ದಾಗ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಜ್ಯ ಪೊಲೀಸರ ಎರಡೂ ಘಟಕಗಳಾದ ಡಿಆರ್‌ಜಿ ಮತ್ತು ವಿಶೇಷ ಕಾರ್ಯಪಡೆ ಹಾಗೂ ಕೋಬ್ರಾ(ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್) ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಇಲ್ಲಿಯವರೆಗೆ, ಸ್ಥಳದಿಂದ ಐದು ನಕ್ಸಲರ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

"ಕಾರ್ಯಾಚರಣೆಯಲ್ಲಿ ಒಬ್ಬ ಡಿಆರ್‌ಜಿ ಸಿಬ್ಬಂದಿ ಹುತಾತ್ಮರಾಗಿದ್ದು, ಮತ್ತೊಬ್ಬ ಜವಾನ್ ಗಾಯಗೊಂಡಿದ್ದಾರೆ. ಗಾಯಗೊಂಡ ಜವಾನ್‌ನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ" ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video

ಕ್ಷಿಪಣಿ ದಾಳಿ ಆರೋಪ: Iranಗೆ UAE ಶಾಕ್, ಎಲ್ಲಾ ವ್ಯಾಪಾರ-ವಾಣಿಜ್ಯ ವಹಿವಾಟು ಸಂಪೂರ್ಣ ಸ್ಥಗಿತ..!

ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್'ಗೆ VIP ಟ್ರೀಟ್‌ಮೆಂಟ್?: ಕಾನೂನಿನ ಮುಂದೆ ಎಲ್ಲರೂ ಒಂದೇ, ಜೈಲಿನಲ್ಲಿ ಯಾರಿಗೂ ವಿಶೇಷ ಸೌಲಭ್ಯವಿಲ್ಲ; ಸರ್ಕಾರ ಸ್ಪಷ್ಟನೆ