ಬಿಹೆಚ್ ಯು ಕ್ಯಾಂಪಸ್ 
ದೇಶ

ಬನಾರಸ್ ಹಿಂದೂ ವಿಶ್ವವಿದ್ಯಾಲಯದಲ್ಲಿ ಸಿಬ್ಬಂದಿ- ವಿದ್ಯಾರ್ಥಿಗಳ ಘರ್ಷಣೆ, ಕಲ್ಲು ತೂರಾಟ; ಇಬ್ಬರ ಬಂಧನ

ಘರ್ಷಣೆ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಘಟನೆಯಲ್ಲಿ ಹಲವು ಸಿಬ್ಬಂದಿಗಳಿಗೆ ಗಾಯಗಳಾಗಿವೆ. ಈ ಘಟನೆಯಲ್ಲಿ ಕಲ್ಲು ತೂರಾಟ ಸಹ ನಡೆದಿದೆ.

ಲಖನೌ: ಬನಾರಸ್ ಹಿಂದೂ ವಿಶ್ವವಿದ್ಯಾಲಯದಲ್ಲಿ ಸಿಬ್ಬಂದಿ- ವಿದ್ಯಾರ್ಥಿಗಳ ನಡುವೆ ಘರ್ಷಣೆ ಉಂಟಾಗಿ, ಕಲ್ಲು ತೂರಾಟ ನಡೆದಿದ್ದು ಘಟನೆಯಲ್ಲಿ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.

ಘರ್ಷಣೆ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಘಟನೆಯಲ್ಲಿ ಹಲವು ಸಿಬ್ಬಂದಿಗಳಿಗೆ ಗಾಯಗಳಾಗಿವೆ. ಈ ಘಟನೆಯಲ್ಲಿ ಕಲ್ಲು ತೂರಾಟ ಸಹ ನಡೆದಿದೆ.

ಲಂಕಾ ಪೊಲೀಸ್ ಠಾಣೆಯ ಉಸ್ತುವಾರಿ ರಾಜ್ ಕುಮಾರ್ ಶರ್ಮಾ ಈ ಬಗ್ಗೆ ಮಾಹಿತಿ ನೀಡಿದ್ದು, ಬಿಹೆಚ್ ಯು ಪ್ರಾಕ್ಟೋರಿಯಲ್ ಬೋರ್ಡ್ ಅಂಕಿತ್ ಪಾಲ್ ಹಾಗೂ ಅಂಕಿತ್ ಸಿಂಗ್ ಎಂಬ ಇಬ್ಬರು ಯುವಕರನ್ನು ಪೊಲೀಸರಿಗೆ ಒಪ್ಪಿಸಿದ್ದು ದೂರು ನೀಡಿದೆ. ಈ ಘರ್ಷಣೆಯ ಬಳಿಕ ಪಿಎಸಿಯನ್ನು ಬಿಹೆಚ್ ಯು ಹಾಸ್ಟೆಲ್ ರಸ್ತೆಯಲ್ಲಿ ನಿಯೋಜಿಸಲಾಗಿದೆ ಹಾಗೂ ಅಧಿಕಾರಿಗಳು ಪರಿಸ್ಥಿತಿಯನ್ನು ಗಮನಿಸುತ್ತಿದ್ದಾರೆ.

ಇದಕ್ಕೂ ಮುನ್ನ ರಾಜಾರಾಮ್ ಹಾಸ್ಟೆಲ್ ಬಳಿ ಬಿರ್ಲಾ ಸಿ ಹಾಸ್ಟೆಲ್ ನ ವಿದ್ಯಾರ್ಥಿಗೆ ಮಧ್ಯರಾತ್ರಿ ಕಾರೊಂದು ಡಿಕ್ಕಿ ಹೊಡೆದಿತ್ತು. ಈ ಬಗ್ಗೆ ವಿದ್ಯಾರ್ಥಿಗಳು ದೂರು ನೀಡಲು ಹೋಗಿದ್ದಾಗ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳ ನಡುವೆ ವಾಗ್ವಾದ ಉಂಟಾಗಿ ಅದು ತೀವ್ರ ಸ್ವರೂಪ ಪಡೆದುಕೊಂಡಿದ್ದು ಕಲ್ಲು ತೂರಾಟದವರೆಗೆ ಹೋಗಿದೆ. ಪೊಲೀಸರು ಮಧ್ಯಪ್ರವೇಶಿಸಿ ಹಾಸ್ಟೆಲ್ ಮಾರ್ಗವನ್ನು ಸಂಪೂರ್ಣ ಸೀಲ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೆಂಪೇಗೌಡ ಏರ್ ಪೋರ್ಟ್ ಲ್ಲಿ 62 ವಿಮಾನ ಸೇರಿ 200ಕ್ಕೂ ಹೆಚ್ಚು ಇಂಡಿಗೋ ವಿಮಾನ ಹಾರಾಟ ರದ್ದು; ಕಾರಣವೇನು?: ತನಿಖೆ ಆರಂಭಿಸಿದ DGCA

ಸಂಚಾರಿ ಸಾಥಿ ಆ್ಯಪ್: ಮೋದಿ ಸರ್ಕಾರ 'ಯೂ ಟರ್ನ್', ಮಧ್ಯಮ ವರ್ಗದ ಜನರಿಗೆ ಸಿಕ್ಕ ಅಪರೂಪದ ಜಯ! ಹೇಗೆ?

ಆಪರೇಷನ್ ಟ್ರೈಡೆಂಟ್: ಭಾರತ ಏಕೆ ಡಿಸೆಂಬರ್ 4ರಂದು ನೌಕಾಪಡೆಯ ದಿನವನ್ನು ಆಚರಿಸುತ್ತದೆ?

ನನ್ನ ಜ್ಯೋತಿಷಿ ಗುರುಗಳಿಗೆ 4 ನೇ ಹಂತದ ಕ್ಯಾನ್ಸರ್ ಇದೆ: ನಿದ್ರೆ ಇಲ್ಲದ ರಾತ್ರಿ ಕಳೆದಿದ್ದೇನೆ, ಕೌತುಕ ಹುಟ್ಟಿಸಿದ ರಾಜ್ ನಿಡಿಮೋರು ಮಾಜಿ ಪತ್ನಿ!

ಇಂದು ಸಂಜೆ ರಷ್ಯಾ ಅಧ್ಯಕ್ಷ Vladimir Putin ಭಾರತಕ್ಕೆ ಆಗಮನ: ರಾತ್ರಿ ಪ್ರಧಾನಿ ಮೋದಿಯಿಂದ ಖಾಸಗಿ ಔತಣಕೂಟ

SCROLL FOR NEXT