ಕಂಗನಾ ರನೌತ್ 
ದೇಶ

ಪ್ರಧಾನಿ ಮೋದಿ ಸನಾತನ ಧರ್ಮದ ರಾಯಭಾರಿ: ಕಂಗನಾ ರನೌತ್

ಸಂಸತ್ತಿನ ಹೊರಗೆ ಮಾತನಾಡಿದ ಕಂಗನಾ ರನೌತ್, “ಗೀತೆ ಸಾರ್ವತ್ರಿಕ ಸತ್ಯದ ಪರಂಪರೆಯಾಗಿದೆ. ನಮ್ಮ ಪ್ರಧಾನಿ ಸನಾತನ ಧರ್ಮ ಮತ್ತು ಭಾರತೀಯ ಸಂಸ್ಕೃತಿಯ ರಾಯಭಾರಿ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಭಗವದ್ಗೀತೆಯ ಪ್ರತಿಯನ್ನು ಗಿಫ್ಟ್ ನೀಡಿದ್ದಕ್ಕೆ ಪ್ರತಿಕ್ರಿಯಿಸಿದ ಬಿಜೆಪಿ ಸಂಸದೆ ಕಂಗನಾ ರನೌತ್, ಗೀತೆ ಸಾರ್ವತ್ರಿಕ ಸತ್ಯದ ಪರಂಪರೆಯನ್ನು ಪ್ರತಿನಿಧಿಸುತ್ತದೆ ಮತ್ತು ಪ್ರಧಾನಿ ಮೋದಿ ಸನಾತನ ಧರ್ಮ ಮತ್ತು ಭಾರತೀಯ ಸಂಸ್ಕೃತಿಯ ರಾಯಭಾರಿ ಎಂದು ಶುಕ್ರವಾರ ಹೇಳಿದ್ದಾರೆ.

ಸಂಸತ್ತಿನ ಹೊರಗೆ ಮಾತನಾಡಿದ ಕಂಗನಾ ರನೌತ್, “ಗೀತೆ ಸಾರ್ವತ್ರಿಕ ಸತ್ಯದ ಪರಂಪರೆಯಾಗಿದೆ. ನಮ್ಮ ಪ್ರಧಾನಿ ಸನಾತನ ಧರ್ಮ ಮತ್ತು ಭಾರತೀಯ ಸಂಸ್ಕೃತಿಯ ರಾಯಭಾರಿ. ಗೀತೆಯಲ್ಲಿರುವ ಸತ್ಯವು ಯಾವಾಗಲೂ ನಮಗೆ ಸ್ಫೂರ್ತಿ ನೀಡುತ್ತದೆ. ಧರ್ಮಗ್ರಂಥಗಳು ಕರ್ಮ, ಭಾವನೆಗಳು ಮತ್ತು ಕುಟುಂಬದ ಬಗ್ಗೆ ಆಳವಾದ ಬೋಧನೆಗಳನ್ನು ಹೊಂದಿವೆ. ಅಧ್ಯಕ್ಷ ಪುಟಿನ್ ಈ ಗೀತೆಯನ್ನು ಓದಿದರೆ, ಭಾರತ, ನಮ್ಮ ಮಣ್ಣು ಮತ್ತು ನಮ್ಮ ಜನರೊಂದಿಗಿನ ಅವರ ಬಾಂಧವ್ಯ ಇನ್ನಷ್ಟು ಬಲಗೊಳ್ಳುತ್ತದೆ” ಎಂದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ಸಂಸದ ಮನೋಜ್ ತಿವಾರಿ ಅವರು, “ನರೇಂದ್ರ ಮೋದಿ ಈ ದೇಶದ ಸಂಸ್ಕೃತಿಗೆ ಆಶೀರ್ವಾದವಾಗಿ ಬಂದಿದ್ದಾರೆ. ತಮ್ಮ ಕರ್ತವ್ಯಗಳನ್ನು ನಿರ್ವಹಿಸುವವರು ಮಾತ್ರ ಮುಂದುವರಿಯಬೇಕು - ಫಲಿತಾಂಶದ ಬಗ್ಗೆ ಚಿಂತಿಸದೆ ತಮ್ಮ ಕರ್ತವ್ಯವನ್ನು ಮಾಡಬೇಕು ಮತ್ತು ಯಾವಾಗಲೂ ನೀತಿವಂತರಾಗಿ ವರ್ತಿಸಬೇಕು ಎಂದು ಗೀತೆ ಕಲಿಸುತ್ತದೆ. ಅವರು ಈ ಸಂದೇಶವನ್ನು ಸಾರುತ್ತಿದ್ದರೆ. ಅದು ಅರ್ಥಪೂರ್ಣ ಮತ್ತು ಪ್ರಸ್ತುತವಾಗಿದೆ” ಎಂದರು.

ಗುರುವಾರ, ಪ್ರಧಾನಿ ಮೋದಿ ಅವರು ಅಧ್ಯಕ್ಷ ಪುಟಿನ್ ಅವರಿಗೆ ಭಗವದ್ಗೀತೆಯ ರಷ್ಯನ್ ಅನುವಾದವನ್ನು ಪ್ರದಾನ ಮಾಡಿದರು. ಇದು ವಿಶ್ವಾದ್ಯಂತ ಲಕ್ಷಾಂತರ ಜನರಿಗೆ ಸ್ಫೂರ್ತಿಯ ಶಾಶ್ವತ ಮೂಲವಾಗಿದೆ ಎಂದು ಬಣ್ಣಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಹುಲ್ ಗಾಂಧಿ ಅಥವಾ ಖರ್ಗೆ ಅಲ್ಲ; ಪುಟಿನ್ ಜೊತೆಗಿನ ಭೋಜನಕೂಟಕ್ಕೆ ಕಾಂಗ್ರೆಸ್ ನ ಈ ನಾಯಕನಿಗೆ ಮಾತ್ರ ಆಹ್ವಾನ!

ಪಾಕಿಸ್ತಾದ 'ನ್ಯೂಕ್ಲಿಯರ್ ಬಟನ್' ಈಗ ಅಸಿಮ್ ಮುನೀರ್ ಕೈಯಲ್ಲಿ! ಭಾರತದ ವಿರುದ್ಧ ಸೇಡಿಗೆ ಮುಂದಾಗ್ತಾರಾ?

'ನ್ಯಾಷನಲ್ ಹೆರಾಲ್ಡ್' ಕೇಸ್ ತನಿಖೆ: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ ದೆಹಲಿ ಪೊಲೀಸರ ನೋಟಿಸ್!

ಪುಟಿನ್ ಜೊತೆ ಪ್ರಯಾಣಿಸಲು ಕರ್ನಾಟಕದಲ್ಲಿ ತಯಾರಾದ Fortuner ಕಾರನ್ನೇ ಆಯ್ಕೆ ಮಾಡಿದ್ದೇಕೆ ಮೋದಿ?: ಜಗತ್ತಿಗೆ ಸಂದೇಶ ಏನು?

ಬಂಗಾಳಿ ಮಾತಾಡೋರನ್ನ ಬಾಂಗ್ಲಾಕ್ಕೆ ಕಳುಹಿಸೋದಾದ್ರೆ, ಹಿಂದಿ-ಉರ್ದು ಭಾಷಿಗರನ್ನು ಪಾಕ್‌ಗೆ ಕಳಿಸಬೇಕು: TMC ಸಂಸದೆ ಆಕ್ರೋಶ

SCROLL FOR NEXT