ನಿಂತಿದ್ದ ವಾಹನಕ್ಕೆ ಕಾರು ಡಿಕ್ಕಿ 
ದೇಶ

ರಾಮನಾಥಪುರಂ ಬಳಿ ನಿಂತಿದ್ದ ವಾಹನಕ್ಕೆ ಕಾರು ಡಿಕ್ಕಿ; ಐವರು ಅಯ್ಯಪ್ಪಸ್ವಾಮಿ ಭಕ್ತರು ದುರ್ಮರಣ

ಶಬರಿಮಲೆಯಿಂದ ಹಿಂತಿರುಗುತ್ತಿದ್ದ ವಿಜಯನಗರಂ ಜಿಲ್ಲೆಯ ಐದು ಪುರುಷರನ್ನು ಹೊತ್ತೊಯ್ಯುತ್ತಿದ್ದ ಕಾರು(ಎಪಿ 40 ಎಫ್‌ಕೆ 5781) ಇಂದು ಬೆಳಗಿನ ಜಾವ 1.50 ರ ಸುಮಾರಿಗೆ ರಸ್ತೆಬದಿಯಲ್ಲಿ ನಿಂತಿತ್ತು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ.

ರಾಮನಾಥಪುರಂ: ತಮಿಳುನಾಡಿನ ರಾಮನಾಥಪುರಂ ಬಳಿ ಶನಿವಾರ ಬೆಳಗ್ಗೆ ಪೂರ್ವ ಕರಾವಳಿ ರಸ್ತೆಯಲ್ಲಿ ನಿಂತಿದ್ದ ವಾಹನಕ್ಕೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಆಂಧ್ರಪ್ರದೇಶದ ಐವರು ಶಬರಿಮಲೆ ಅಯ್ಯಪ್ಪಸ್ವಾಮಿ ಭಕ್ತರು ಸಾವನ್ನಪ್ಪಿದ್ದು, ಏಳು ಜನ ಗಾಯಗೊಂಡಿದ್ದಾರೆ.

ಪೊಲೀಸರ ಪ್ರಕಾರ, ಶಬರಿಮಲೆಯಿಂದ ಹಿಂತಿರುಗುತ್ತಿದ್ದ ವಿಜಯನಗರಂ ಜಿಲ್ಲೆಯ ಐದು ಪುರುಷರನ್ನು ಹೊತ್ತೊಯ್ಯುತ್ತಿದ್ದ ಕಾರು(ಎಪಿ 40 ಎಫ್‌ಕೆ 5781) ಇಂದು ಬೆಳಗಿನ ಜಾವ 1.50 ರ ಸುಮಾರಿಗೆ ರಸ್ತೆಬದಿಯಲ್ಲಿ ನಿಂತಿತ್ತು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ.

ಕೀಲಕರೈನ ನಾರ್ತ್ ಸ್ಟ್ರೀಟ್‌ನ ಮುಸ್ತಾಕ್ ಅಹಮ್ಮದ್(34) ಚಲಾಯಿಸುತ್ತಿದ್ದ ಕಾರು ಅತಿವೇಗದಲ್ಲಿ ಬಂದು ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿರುವುದಾಗಿ ರಾಮನಾಥಪುರಂ ಎಸ್‌ಪಿ ಜಿ. ಚಂಡೀಶ್ ಅವರು ಟಿಎನ್‌ಐಇಗೆ ತಿಳಿಸಿದ್ದಾರೆ.

ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅವರಲ್ಲಿ ಕಾರು ಚಾಲಕ ಮುಸ್ತಾಕ್ ಮತ್ತು ಆಂಧ್ರಪ್ರದೇಶದ ಮೂವರು ಯಾತ್ರಿಕರಾದ ರಾಮಚಂದ್ರ ರಾವ್(35), ಅಪ್ಪಾವು ನಾಯ್ಡು(35) ಮತ್ತು ಬಂಡಾರ ಚಂದ್ರು ರಾವ್ (45) ಎಂದು ಗುರುತಿಸಲಾಗಿದೆ. ಉಳಿದ ಯಾತ್ರಿಕರಾದ ರಾಮು(60) ಮತ್ತು ಶ್ರೀ ರಾಮ್ (40) ಅವರನ್ನು ರಾಮನಾಥಪುರಂ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ರಾಮು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದರು. ಇದರಿಂದಾಗಿ ಸಾವಿನ ಸಂಖ್ಯೆ ಐದಕ್ಕೆ ಏರಿತು.

ಮತ್ತೊಂದು ಕಾರಿನಲ್ಲಿ ಕೀಲಕರೈಗೆ ಹೋಗುತ್ತಿದ್ದ ಇತರ ಆರು ಮಂದಿ - ಫ್ರಿಝರ್ (20), ತಿವ್ಯಾನ್ (19), ಪ್ರವೀಣ್ (19), ಜಮೀಲ್ ರೆಹಮಾನ್ (15), ಮಾದೇಶ್ವರನ್ (ಗಂಭೀರ) ಮತ್ತು ಹರ್ಷತ್ (32) ಅವರಿಗೆ ಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಕೀಲಕರೈ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಜನ ಸಾಮಾನ್ಯರಿಗಾಗಿ ಸುಪ್ರೀಂಕೋರ್ಟ್' : ಬಲವಾದ ಸಂದೇಶ ರವಾನಿಸಿದ CJI ಸೂರ್ಯಕಾಂತ್!

ಬೆಂಗಳೂರಿನಲ್ಲಿ 2,215 ಕೋಟಿ ರೂ. ಮೊತ್ತದ ಸುರಂಗ ಮಾರ್ಗ ನಿರ್ಮಾಣಕ್ಕೆ ಸಂಪುಟ ಅನುಮೋದನೆ!

ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 9 ವಿಕೆಟ್ ಭರ್ಜರಿ ಜಯ: 2-1 ಅಂತರದಲ್ಲಿ ಸರಣಿ ಕೈ ವಶ!

ಇಂಡಿಗೋ ವಿಮಾನಗಳಲ್ಲಿ ವ್ಯತ್ಯಯ: ಇತರೆ ಏರ್‌ಲೈನ್‌ಗಳಿಂದ ಟಿಕೆಟ್ ದರ ಏರಿಕೆಗೆ ಸರ್ಕಾರ ಬ್ರೇಕ್

Love jihad case: 'ಮತಾಂತರವಾಗದಿದ್ರೆ 32 ಪೀಸ್, ಖಾಸಗಿ ಫೋಟೋಗಳಿಂದ ಬ್ಲಾಕ್ ಮೇಲ್': ಹಿಂದೂ ಯುವತಿಗೆ ಉಸ್ಮಾನ್ ಬೆದರಿಕೆ! Video

SCROLL FOR NEXT