ನಿಂತಿದ್ದ ವಾಹನಕ್ಕೆ ಕಾರು ಡಿಕ್ಕಿ 
ದೇಶ

ರಾಮನಾಥಪುರಂ ಬಳಿ ನಿಂತಿದ್ದ ವಾಹನಕ್ಕೆ ಕಾರು ಡಿಕ್ಕಿ; ಐವರು ಅಯ್ಯಪ್ಪಸ್ವಾಮಿ ಭಕ್ತರು ದುರ್ಮರಣ

ಶಬರಿಮಲೆಯಿಂದ ಹಿಂತಿರುಗುತ್ತಿದ್ದ ವಿಜಯನಗರಂ ಜಿಲ್ಲೆಯ ಐದು ಪುರುಷರನ್ನು ಹೊತ್ತೊಯ್ಯುತ್ತಿದ್ದ ಕಾರು(ಎಪಿ 40 ಎಫ್‌ಕೆ 5781) ಇಂದು ಬೆಳಗಿನ ಜಾವ 1.50 ರ ಸುಮಾರಿಗೆ ರಸ್ತೆಬದಿಯಲ್ಲಿ ನಿಂತಿತ್ತು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ.

ರಾಮನಾಥಪುರಂ: ತಮಿಳುನಾಡಿನ ರಾಮನಾಥಪುರಂ ಬಳಿ ಶನಿವಾರ ಬೆಳಗ್ಗೆ ಪೂರ್ವ ಕರಾವಳಿ ರಸ್ತೆಯಲ್ಲಿ ನಿಂತಿದ್ದ ವಾಹನಕ್ಕೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಆಂಧ್ರಪ್ರದೇಶದ ಐವರು ಶಬರಿಮಲೆ ಅಯ್ಯಪ್ಪಸ್ವಾಮಿ ಭಕ್ತರು ಸಾವನ್ನಪ್ಪಿದ್ದು, ಏಳು ಜನ ಗಾಯಗೊಂಡಿದ್ದಾರೆ.

ಪೊಲೀಸರ ಪ್ರಕಾರ, ಶಬರಿಮಲೆಯಿಂದ ಹಿಂತಿರುಗುತ್ತಿದ್ದ ವಿಜಯನಗರಂ ಜಿಲ್ಲೆಯ ಐದು ಪುರುಷರನ್ನು ಹೊತ್ತೊಯ್ಯುತ್ತಿದ್ದ ಕಾರು(ಎಪಿ 40 ಎಫ್‌ಕೆ 5781) ಇಂದು ಬೆಳಗಿನ ಜಾವ 1.50 ರ ಸುಮಾರಿಗೆ ರಸ್ತೆಬದಿಯಲ್ಲಿ ನಿಂತಿತ್ತು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ.

ಕೀಲಕರೈನ ನಾರ್ತ್ ಸ್ಟ್ರೀಟ್‌ನ ಮುಸ್ತಾಕ್ ಅಹಮ್ಮದ್(34) ಚಲಾಯಿಸುತ್ತಿದ್ದ ಕಾರು ಅತಿವೇಗದಲ್ಲಿ ಬಂದು ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿರುವುದಾಗಿ ರಾಮನಾಥಪುರಂ ಎಸ್‌ಪಿ ಜಿ. ಚಂಡೀಶ್ ಅವರು ಟಿಎನ್‌ಐಇಗೆ ತಿಳಿಸಿದ್ದಾರೆ.

ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅವರಲ್ಲಿ ಕಾರು ಚಾಲಕ ಮುಸ್ತಾಕ್ ಮತ್ತು ಆಂಧ್ರಪ್ರದೇಶದ ಮೂವರು ಯಾತ್ರಿಕರಾದ ರಾಮಚಂದ್ರ ರಾವ್(35), ಅಪ್ಪಾವು ನಾಯ್ಡು(35) ಮತ್ತು ಬಂಡಾರ ಚಂದ್ರು ರಾವ್ (45) ಎಂದು ಗುರುತಿಸಲಾಗಿದೆ. ಉಳಿದ ಯಾತ್ರಿಕರಾದ ರಾಮು(60) ಮತ್ತು ಶ್ರೀ ರಾಮ್ (40) ಅವರನ್ನು ರಾಮನಾಥಪುರಂ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ರಾಮು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದರು. ಇದರಿಂದಾಗಿ ಸಾವಿನ ಸಂಖ್ಯೆ ಐದಕ್ಕೆ ಏರಿತು.

ಮತ್ತೊಂದು ಕಾರಿನಲ್ಲಿ ಕೀಲಕರೈಗೆ ಹೋಗುತ್ತಿದ್ದ ಇತರ ಆರು ಮಂದಿ - ಫ್ರಿಝರ್ (20), ತಿವ್ಯಾನ್ (19), ಪ್ರವೀಣ್ (19), ಜಮೀಲ್ ರೆಹಮಾನ್ (15), ಮಾದೇಶ್ವರನ್ (ಗಂಭೀರ) ಮತ್ತು ಹರ್ಷತ್ (32) ಅವರಿಗೆ ಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಕೀಲಕರೈ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಪ್ರತಿ ಕುಟುಂಬಕ್ಕೆ ವಾರ್ಷಿಕ 60 ಸಾವಿರ ರೂ.ಗಳ ಆರ್ಥಿಕ ಬಲ- ಸಿಎಂ ಸಿದ್ದರಾಮಯ್ಯ

ಯೋಗ್ಯತಾ ಪರವಾನಗಿ ಇಲ್ಲದೆ ಎಂಟು ಬಾರಿ ವಿಮಾನ ಹಾರಾಟ: ಏರ್ ಇಂಡಿಯಾಕ್ಕೆ 1 ಕೋಟಿ ರೂ.ದಂಡ!

T-20 ವಿಶ್ವಕಪ್ 2026: ನೆದರ್ ಲ್ಯಾಂಡ್ಸ್ ವಿರುದ್ಧ 93 ರನ್ ಅಂತರದಿಂದ ಗೆದ್ದ ಅಮೆರಿಕ!

ಅಧಿಕಾರಿ ವರ್ಗಾವಣೆಗಾಗಿ ಸಿಎಂ ಸಿದ್ದರಾಮಯ್ಯರ ನಕಲಿ ಟಿಪ್ಪಣಿ: ಪೊಲೀಸ್ ಕೇಸ್ ದಾಖಲು!

ಹೊಸ PMO ಕಚೇರಿ 'ಸೇವಾ ತೀರ್ಥ' ಕಟ್ಟಡಕ್ಕೆ ಪ್ರಧಾನಿ ಮೋದಿ ಸ್ಥಳಾಂತರ: ಮೊದಲ ದಿನವೇ ಹಲವು ಪ್ರಮುಖ ನಿರ್ಧಾರ!

SCROLL FOR NEXT