ಇಂಡಿಗೋ ಅವ್ಯವಸ್ಥೆ 
ದೇಶ

610 ಕೋಟಿ ರೂ ವಾಪಸ್: ಆರು ದಿನಗಳ ಇಂಡಿಗೋ ವಿಮಾನ ರದ್ದತಿ ಅವ್ಯವಸ್ಥೆ ಬಳಿಕ ಪ್ರಯಾಣಿಕರಿಗೆ ರೀಫಂಡ್!

ಸಾಮಾನ್ಯವಾಗಿ ಪ್ರತಿದಿನ ಸುಮಾರು 2,300 ವಿಮಾನಗಳನ್ನು ನಿರ್ವಹಿಸುವ ವಿಮಾನಯಾನ ಸಂಸ್ಥೆಯು ಶನಿವಾರ 1,500 ಕ್ಕೂ ಹೆಚ್ಚು ವಿಮಾನಗಳನ್ನು ಓಡಿಸಿದೆ.

ನವದೆಹಲಿ: ದೇಶಾದ್ಯಂತ ಸುಮಾರು ಒಂದು ವಾರ ವಿಮಾನ ಅಡಚಣೆಗಳ ನಂತರ ಇಂಡಿಗೋ ಕಾರ್ಯಾಚರಣೆಯನ್ನು ಚುರುಕುಗೊಳಿಸಿದೆ. ಒಟ್ಟು 610 ಕೋಟಿ ರೂ. ರೀಫಂಡ್ ಮಾಡಲಾಗುತ್ತಿದೆ. ಪ್ರಯಾಣಿಕರಿಗೆ 3,000 ಲಗ್ಗೇಜು ವಸ್ತುಗಳನ್ನು ತಲುಪಿಸಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ಭಾನುವಾರ ತಿಳಿಸಿದೆ.

ಸಾಮಾನ್ಯವಾಗಿ ಪ್ರತಿದಿನ ಸುಮಾರು 2,300 ವಿಮಾನಗಳನ್ನು ನಿರ್ವಹಿಸುವ ವಿಮಾನಯಾನ ಸಂಸ್ಥೆಯು ಶನಿವಾರ 1,500 ಕ್ಕೂ ಹೆಚ್ಚು ವಿಮಾನಗಳನ್ನು ಓಡಿಸಿದೆ. ಭಾನುವಾರ ಸುಮಾರು 1,650 ವಿಮಾನಗಳು ನಿರ್ವಹಿಸುತ್ತಿದ್ದು, ಅದರ 138 ಸ್ಥಳಗಳ ಪೈಕಿ 135 ಸ್ಥಳಗಳನ್ನು ಮರುಸಂಪರ್ಕಿಸಿದೆ.

ವಿಮಾನಯಾನ ಸಂಸ್ಥೆಯ ಸಮಯಕ್ಕೆ ಸರಿಯಾದ ಕಾರ್ಯಕ್ಷಮತೆ ಶೇ. 75 ರಷ್ಟು ತಲುಪಿದೆ ಮತ್ತು ಹಿಂದಿನ ರದ್ದತಿಗಳು ಪ್ರಯಾಣಿಕರು ಅನಗತ್ಯವಾಗಿ ವಿಮಾನ ನಿಲ್ದಾಣಗಳಿಗೆ ಬರುವುದನ್ನು ತಡೆಯಲು ಸಹಾಯ ಮಾಡಿದೆ ಎಂದು ಸಿಇಒ ಪೀಟರ್ ಎಲ್ಬರ್ಸ್ ಹೇಳಿದ್ದಾರೆ.

ಇಂಡಿಗೋ ಡಿಸೆಂಬರ್ 10 ರಂದು ಸಂಪೂರ್ಣ ಕಾರ್ಯಾಚರಣೆ ಆರಂಭಿಸಲು ಯೋಜಿಸಿದೆ. ಹೆಚ್ಚುತ್ತಿರುವ ರಾಜಕೀಯ ಟೀಕೆ ಮತ್ತು ನಿಯಂತ್ರಕ ಸಂಸ್ಥೆಯ ಪರಿಶೀಲನೆಯ ನಡುವೆಯೇ ಚೇತರಿಕೆ ಕಂಡುಬಂದಿದೆ. ಹಿರಿಯ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಈ ಬಿಕ್ಕಟ್ಟನ್ನು ಇಂಡಿಗೋ ಆಡಳಿತ ಮಂಡಳಿ ಮತ್ತು ನಾಗರಿಕ ವಿಮಾನಯಾನ ಸಚಿವಾಲಯದ "ಭಾರಿ ವೈಫಲ್ಯ" ಎಂದು ಬಣ್ಣಿಸಿದ್ದಾರೆ.

ಆದರೆ DGCA, ಸಿಇಒ ಪೀಟರ್ ಎಲ್ಬರ್ಸ್ ಮತ್ತು ಅಕೌಂಟೆಬಲ್ ಮ್ಯಾನೇಜರ್ ಇಸಿಡ್ರೊ ಪೋರ್ಕ್ವೆರಾಸ್ ಅವರಿಗೆ ಕಾರ್ಯಾಚರಣೆಯ ಲೋಪಗಳ ಕುರಿತು ಶೋಕಾಸ್ ನೋಟಿಸ್‌ಗಳನ್ನು ನೀಡಿದೆ.

ಸಂಕಷ್ಟಕ್ಕೆ ಸಿಲುಕಿದ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಲು ವಿಶೇಷ ರೈಲುಗಳ ಕಾರ್ಯಾಚರಣೆ ಆರಂಭಿಸಲಾಗಿತ್ತು. ಭಾರತದ ಅತಿದೊಡ್ಡ ವಿಮಾನಯಾನ ಸಂಸ್ಥೆಯ ವಿಶ್ವಾಸವನ್ನು ಪುನಃಸ್ಥಾಪಿಸಲು ಮತ್ತು ಚೇತರಿಕೆಯ ಹಂತದಲ್ಲಿ ಸುಗಮ ಪ್ರಯಾಣವನ್ನು ಖಚಿತಪಡಿಸಿಕೊಳ್ಳಲು ತೀವ್ರ ಒತ್ತಡಕ್ಕೆ ಸಿಲುಕಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇತಿಹಾಸ ತಿರುಚಲು' ಪ್ರಧಾನಿ ಮೋದಿ ಯತ್ನ; ನೆಹರೂ ಪರಂಪರೆ ಅಳಿಸಲು ಬಿಜೆಪಿಗೆ ಸಾಧ್ಯವಿಲ್ಲ: ಗೌರವ್ ಗೊಗೊಯ್

ಬ್ರಿಟಿಷರ ದಬ್ಬಾಳಿಕೆ ನಡುವೆಯೂ 'ವಂದೇ ಮಾತರಂ' ಬಂಡೆಯಂತೆ ಗಟ್ಟಿಯಾಗಿ ನಿಂತಿತು: ಲೋಕಸಭೆಯಲ್ಲಿ ಪ್ರಧಾನಿ ಮೋದಿ

ಬಾಬ್ರಿ ಮಾದರಿಯ ಬಂಗಾಳದ ಮಸೀದಿಗೆ ಎರಡೇ ದಿನದಲ್ಲಿ 1.3 ಕೋಟಿ ರೂ. ದೇಣಿಗೆ!

ಮಾಜಿ ಪತ್ನಿ ಮಂಜು ವಾರಿಯರ್ ಹೇಳಿಕೆ ನಂತರ ನನ್ನ ವಿರುದ್ಧ ಪಿತೂರಿ: ನಟ ದಿಲೀಪ್

ಮಲಯಾಳಂ ನಟಿ ಮೇಲೆ ಅತ್ಯಾಚಾರ ಪ್ರಕರಣ: ನಟ ದಿಲೀಪ್ ಖುಲಾಸೆ; ಪಲ್ಸರ್ ಸುನಿ ಸೇರಿ ಆರು ಮಂದಿ ತಪ್ಪಿತಸ್ಥರು

SCROLL FOR NEXT