ಪಶ್ಚಿಮ ಬಂಗಾಳದಲ್ಲಿ ನಿರ್ಮಾಣವಾಗಲಿರುವ ಬಾಬ್ರಿ ಮಾದರಿಯ ಮಸೀದಿ  online desk
ದೇಶ

ಪಶ್ಚಿಮ ಬಂಗಾಳದಲ್ಲಿ ಬಾಬ್ರಿ ಮಾದರಿಯ ಮಸೀದಿ ನಿರ್ಮಾಣ: ಮೂರೇ ದಿನದಲ್ಲಿ 3 ಕೋಟಿ ರೂ ದೇಣಿಗೆ!

ಕಬೀರ್ ಅವರು ಡಿಸೆಂಬರ್ 6 ರಂದು ಮುರ್ಷಿದಾಬಾದ್ ಜಿಲ್ಲೆಯ ರೆಜಿನಗರದಲ್ಲಿ ನೂತನ ಬಾಬ್ರಿ ಮಸೀದಿಗೆ ಶಂಕುಸ್ಥಾಪನೆ ನೆರವೇರಿಸಿದ್ದರು.

ಮುರ್ಷಿದಾಬಾದ್‌: ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ತೃಣಮೂಲ ಕಾಂಗ್ರೆಸ್‌ನ ಅಮಾನತುಗೊಂಡ ಶಾಸಕ ಹುಮಾಯೂನ್ ಕಬೀರ್ ಅವರು ಶಂಕುಸ್ಥಾಪನೆ ಮಾಡಿದ ಬಾಬರಿ ಮಸೀದಿ ಮಾದರಿಯ ಮಸೀದಿಗೆ ಭಾರಿ ಪ್ರಮಾಣದಲ್ಲಿ ದೇಣಿ ಹರಿದು ಬರುತ್ತಿದ್ದು, ಮೂರೇ ದಿನದಲ್ಲಿ 3 ಕೋಟಿ ರೂ. ಸಂಗ್ರಹವಾಗಿದೆ ಎಂದು ಟಿಎಂಸಿ ನಾಯಕನ ಆಪ್ತರು ಮಂಗಳವಾರ ಹೇಳಿದ್ದಾರೆ.

ಕಬೀರ್ ಅವರು ಡಿಸೆಂಬರ್ 6 ರಂದು ಮುರ್ಷಿದಾಬಾದ್ ಜಿಲ್ಲೆಯ ರೆಜಿನಗರದಲ್ಲಿ ನೂತನ ಬಾಬ್ರಿ ಮಸೀದಿಗೆ ಶಂಕುಸ್ಥಾಪನೆ ನೆರವೇರಿಸಿದ್ದರು.

ಕಬೀರ್ ಅವರ ಪ್ರಕಾರ, ಸ್ಥಳದಲ್ಲಿ 12 ದೇಣಿಗೆ ಪೆಟ್ಟಿಗೆಗಳನ್ನು ಇರಿಸಲಾಗಿದೆ. ಇಲ್ಲಿಯವರೆಗೆ, ಪೆಟ್ಟಿಗೆಗಳಿಂದ 57 ಲಕ್ಷ ರೂ.ಗಳನ್ನು ಎಣಿಸಲಾಗಿದೆ. ಆದರೆ 2.47 ಕೋಟಿ ರೂ. QR- ಕೋಡ್ ಪಾವತಿಗಳ ಮೂಲಕ ಸ್ವೀಕರಿಸಲಾಗಿದೆ.

ಹೊಸ ದೇಣಿಗೆಗಳಿಗಾಗಿ ಒಂದು ದೇಣಿಗೆ ಪೆಟ್ಟಿಗೆಯನ್ನು ಇನ್ನೂ ಶಿಲಾನ್ಯಾಸ ಸ್ಥಳದಲ್ಲಿ ಇರಿಸಲಾಗಿದೆ.

2012 ರಲ್ಲಿ ತೃಣಮೂಲ ಕಾಂಗ್ರೆಸ್ ಸೇರಿದ ಮಾಜಿ ಕಾಂಗ್ರೆಸ್ ಶಾಸಕ ಕಬೀರ್, ನಂತರ ಬಿಜೆಪಿಗೆ ಅಲ್ಪಾವಧಿಗೆ ಸೇರ್ಪಡೆಗೊಂಡು 2020 ರಲ್ಲಿ ಆಡಳಿತ ಪಕ್ಷಕ್ಕೆ ಮರಳಿದರು. ಪಕ್ಷದ ನಾಯಕತ್ವದೊಂದಿಗೆ ಪದೇ ಪದೇ ಘರ್ಷಣೆ ನಡೆದ ನಂತರ ಅವರನ್ನು ಅಮಾನತುಗೊಳಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!