ಏಕನಾಥ್ ಶಿಂಧೆ ಮತ್ತು ದೇವೇದ್ರ ಫಡ್ನವೀಸ್ 
ದೇಶ

ಭಿನ್ನಾಭಿಪ್ರಾಯ ಬಗೆಹರಿಸಿಕೊಂಡು BMC ಚುನಾವಣೆಗೆ ಒಟ್ಟಾಗಿ ಸ್ಪರ್ಧಿಸಲು ಶಿಂಧೆ-ಫಡ್ನವೀಸ್ ನಿರ್ಧಾರ!

ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಉಪಮುಖ್ಯಮಂತ್ರಿ ಶಿಂಧೆ ಸೋಮವಾರ ತಡರಾತ್ರಿ ನಡೆದ ಸಭೆಯಲ್ಲಿ, ಆಡಳಿತ ಪಕ್ಷಗಳು ಅಸ್ತಿತ್ವದಲ್ಲಿರುವ ಮಹಾಯುತಿ ಮೈತ್ರಿಕೂಟದ ಸದಸ್ಯರಾಗಿ ಈ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ

ಮುಂಬಯಿ: ಭಿನ್ನಾಭಿಪ್ರಾಯ ಮರೆತು ಆಡಳಿತಾರೂಢ ಮಿತ್ರಪಕ್ಷಗಳಾದ ಬಿಜೆಪಿ ಮತ್ತು ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ, ಮುಂಬೈ ಮತ್ತು ಥಾಣೆ ಸೇರಿದಂತೆ ಮಹಾರಾಷ್ಟ್ರದ ಪುರಸಭೆಗಳಿಗೆ ನಡೆಯುವ ಚುನಾವಣೆಯಲ್ಲಿ ಮೈತ್ರಿಕೂಟವಾಗಿ ಸ್ಪರ್ಧಿಸಲು ನಿರ್ಧರಿಸಿವೆ ಎಂದು ಶಿವಸೇನೆ ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಉಪಮುಖ್ಯಮಂತ್ರಿ ಶಿಂಧೆ ಸೋಮವಾರ ತಡರಾತ್ರಿ ನಡೆದ ಸಭೆಯಲ್ಲಿ, ಆಡಳಿತ ಪಕ್ಷಗಳು ಅಸ್ತಿತ್ವದಲ್ಲಿರುವ ಮಹಾಯುತಿ ಮೈತ್ರಿಕೂಟದ ಸದಸ್ಯರಾಗಿ ಈ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ, ಆದರೆ ಪುರಸಭೆ ಚುನಾವಣೆಯ ಇನ್ನೂ ದಿನಾಂಕ ಘೋಷಿಸಲಾಗಿಲ್ಲ.

ರಾಜ್ಯ ವಿಧಾನಸಭೆಯ ಚಳಿಗಾಲದ ಅಧಿವೇಶನ ನಡೆಯುತ್ತಿರುವ ನಾಗ್ಪುರದಲ್ಲಿ ಬಿಜೆಪಿ ನಾಯಕರಾದ ಚಂದ್ರಶೇಖರ್ ಬವಾಂಕುಲೆ ಮತ್ತು ರವೀಂದ್ರ ಚವಾಣ್ ಭಾಗವಹಿಸಿದ್ದ ಸಭೆಯಲ್ಲಿ, ಬಿಜೆಪಿ ಮತ್ತು ಶಿವಸೇನೆ ನಾಯಕರು ಮತ್ತು ಕಾರ್ಯಕರ್ತರಿಗೆ ಗಾಳ ಹಾಕುವುದಿಲ್ಲ ಎಂದು ಹೇಳಿದ್ದಾರೆ.

ಮುಂಬೈ ಮತ್ತು ಥಾಣೆ ಸೇರಿದಂತೆ ಮಹಾರಾಷ್ಟ್ರದಾದ್ಯಂತ ಪುರಸಭೆ ಚುನಾವಣೆಗಳನ್ನು ಒಟ್ಟಾಗಿ ಮಹಾಯುತಿ ಮೈತ್ರಿಕೂಟವಾಗಿ ಸ್ಪರ್ಧಿಸುವ ಬಗ್ಗೆ ಎರಡೂ ಪಕ್ಷಗಳ ನಾಯಕರ ನಡುವೆ ಸಕಾರಾತ್ಮಕ ಚರ್ಚೆ ನಡೆದಿದೆ" ಎಂದು ಶಿವಸೇನಾ ನಾಯಕರೊಬ್ಬರು ಹೇಳಿದರು. ಮುಂದಿನ ಎರಡು-ಮೂರು ದಿನಗಳಲ್ಲಿ ಸ್ಥಳೀಯ ಮಟ್ಟದಲ್ಲಿ ಸೀಟು ಹಂಚಿಕೆ ಕುರಿತು ಚರ್ಚೆಗಳು ಪ್ರಾರಂಭವಾಗಲಿವೆ ಎಂದು ಮತ್ತೊಬ್ಬ ನಾಯಕರು ತಿಳಿಸಿದ್ದಾರೆ.

ಸೋಮವಾರ ನಡೆದ ಪ್ರತ್ಯೇಕ ಸಭೆಯಲ್ಲಿ, ಮಹಾಯುತಿ ಮಹಾನಗರ ಪಾಲಿಕೆ ಮತ್ತು ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ಒಗ್ಗಟ್ಟಾಗಿ ಹೋರಾಟ ನಡೆಸಲಿದೆ ಎಂದು ಶಿಂಧೆ ತಮ್ಮ ಪಕ್ಷದ ಶಾಸಕರು ಮತ್ತು ಸಚಿವರಿಗೆ ತಿಳಿಸಿದರು. "ಮೈತ್ರಿ ಧರ್ಮ"ವನ್ನು ಅನುಸರಿಸಲು, ಬಿಜೆಪಿ, ಶಿವಸೇನೆ ಮತ್ತು ಎನ್‌ಸಿಪಿಯ ಮಹಾಯುತಿ ಮೈತ್ರಿಕೂಟದೊಳಗೆ ಸಂಘರ್ಷಕ್ಕೆ ಕಾರಣವಾಗುವ ಯಾವುದೇ ಹೇಳಿಕೆ ನೀಡಬಾರದು ಎಂದು ಸಲಹೆ ನೀಡಿದರು ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!