ಸಾಂದರ್ಭಿಕ ಚಿತ್ರ 
ದೇಶ

ರೈಲಿನಲ್ಲಿ ನಿದ್ದೆಗೆ ಜಾರಿದ ವ್ಯಾಪಾರಿ; 5.53 ಕೋಟಿ ಮೌಲ್ಯದ ಚಿನ್ನಾಭರಣ ಕಳ್ಳತನ!

ಚಿನ್ನದ ವ್ಯಾಪಾರಿ, ಸಿದ್ಧೇಶ್ವರ ಎಕ್ಸ್‌ಪ್ರೆಸ್ ರೈಲಿನಲ್ಲಿ ಸೋಲಾಪುರದಿಂದ ಮುಂಬೈಗೆ ಪ್ರಯಾಣಿಸುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಅವರು ಹೇಳಿದ್ದಾರೆ.

ಮುಂಬೈ: ಮುಂಬೈ ಮೂಲದ ಚಿನ್ನದ ವ್ಯಾಪಾರಿಯೊಬ್ಬರು ಸೋಲಾಪುರದಿಂದ ರಾಜ್ಯ ರಾಜಧಾನಿಗೆ ರೈಲು ಪ್ರಯಾಣ ಮಾಡುವಾಗ ನಿದ್ರೆಗೆ ಜಾರಿದ ನಂತರ ಅವರ ಬಳಿ ಇದ್ದ 5.53 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆಭರಣಗಳನ್ನು ಕದ್ದಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಡಿಸೆಂಬರ್ 6 ಮತ್ತು 7 ರ ಮಧ್ಯರಾತ್ರಿ ಚಿನ್ನದ ವ್ಯಾಪಾರಿ, ಸಿದ್ಧೇಶ್ವರ ಎಕ್ಸ್‌ಪ್ರೆಸ್ ರೈಲಿನಲ್ಲಿ ಸೋಲಾಪುರದಿಂದ ಮುಂಬೈಗೆ ಪ್ರಯಾಣಿಸುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಅವರು ಹೇಳಿದ್ದಾರೆ.

ಕಲ್ಯಾಣ್ ಸರ್ಕಾರಿ ರೈಲ್ವೆ ಪೊಲೀಸ್(ಜಿಆರ್‌ಪಿ) ಪ್ರಕಾರ, ವ್ಯಾಪಾರಿ 4,456 ಗ್ರಾಂ ಚಿನ್ನದ ಆಭರಣಗಳನ್ನು ಹೊಂದಿರುವ ಎರಡು ಟ್ರಾಲಿ ಬ್ಯಾಗ್‌ಗಳನ್ನು ಸರಪಳಿಯಿಂದ ಭದ್ರಪಡಿಸಿಕೊಂಡು ತನ್ನ ಸೀಟಿನ ಕೆಳಗೆ ಇಟ್ಟಿದ್ದರು. ಅವರು ನಿದ್ರಿಸುತ್ತಿದ್ದಾಗ, ಅಪರಿಚಿತ ಕಳ್ಳನೊಬ್ಬ ಸರಪಳಿ ಮುರಿದು, ಎರಡೂ ಬ್ಯಾಗ್‌ಗಳನ್ನು ಕದ್ದು, ಸೋಲಾಪುರ ಮತ್ತು ಕಲ್ಯಾಣ್(ಥಾಣೆ ಜಿಲ್ಲೆಯಲ್ಲಿ) ನಡುವೆ ಎಲ್ಲೋ ಬೆಲೆಬಾಳುವ ವಸ್ತುಗಳೊಂದಿಗೆ ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ.

ವ್ಯಾಪಾರಿ ಎಚ್ಚರವಾದಾಗ ಎರಡೂ ಬ್ಯಾಗ್‌ಗಳು ಕಾಣೆಯಾಗಿರುವುದು ಬೆಳಕಿಗೆ ಬಂದಿದೆ.

ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಭಾರತೀಯ ನ್ಯಾಯ ಸಂಹಿತೆ(ಬಿಎನ್‌ಎಸ್) ಸೆಕ್ಷನ್ 305 (ಸಿ) (ವಾಸಸ್ಥಳ, ಸಾರಿಗೆ ಸಾಧನ ಅಥವಾ ಪೂಜಾ ಸ್ಥಳದಲ್ಲಿ ಕಳ್ಳತನ) ಅಡಿಯಲ್ಲಿ ಅಪರಾಧ ದಾಖಲಿಸಲಾಗಿದೆ.

ಪಿಟಿಐ ಜೊತೆ ಮಾತನಾಡಿದ ಕಲ್ಯಾಣ್ ಜಿಆರ್‌ಪಿಯ ಹಿರಿಯ ಇನ್ಸ್‌ಪೆಕ್ಟರ್ ಪಂಢರಿ ಕಾಂಡೆ, "ನಾವು ಎಫ್‌ಐಆರ್ ದಾಖಲಿಸಿದ್ದೇವೆ ಮತ್ತು ತನಿಖೆಯನ್ನು ಪ್ರಾರಂಭಿಸಿದ್ದೇವೆ. ಆರೋಪಿ, ವ್ಯಾಪಾರಿ ನಿದ್ರೆಗೆ ಜಾರಿದ್ದನ್ನು ನೋಡಿಕೊಂಡು ಚಿನ್ನದ ಆಭರಣಗಳಿದ್ದ ಚೀಲಗಳೊಂದಿಗೆ ಪರಾರಿಯಾಗಿದ್ದಾರೆ. ಇಲ್ಲಿಯವರೆಗೆ ಯಾರನ್ನೂ ಬಂಧಿಸಲಾಗಿಲ್ಲ ಮತ್ತು ಶಂಕಿತನನ್ನು ಗುರುತಿಸು ಪ್ರಯತ್ನಗಳು ನಡೆಯುತ್ತಿವೆ" ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕ್ರಿಕೆಟ್ ಅಭಿಮಾನಿಗಳಿಗೆ ಡಿಕೆಶಿ ಗುಡ್ ನ್ಯೂಸ್; ಮತ್ತೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಮ್ಯಾಚ್

ಮೈಸೂರು: ಸೆರೆ ಸಿಕ್ಕಿದ್ದ 4 ಹುಲಿ ಮರಿಗಳ ನಿಗೂಢ ಸಾವು!

MUDA: 300 ಎಕರೆ ಜಮೀನಿನಲ್ಲಿ ಹೊಸದಾಗಿ ಲೇಔಟ್‌ ಅಭಿವೃದ್ಧಿ; ಸಚಿವ ಬೈರತಿ ಸುರೇಶ್‌

'ಅಧಿಕಾರ ಹಂಚಿಕೆ ಬಗ್ಗೆ ಯಾರೂ ಮಾತನಾಡಬೇಡಿ, ಸಾರ್ವಜನಿಕ ಹೇಳಿಕೆ ಕೊಡಬೇಡಿ': ಕಾಂಗ್ರೆಸ್ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಬುದ್ದಿಮಾತು

'ನೀವು ಶಾಶ್ವತ ವಿಪತ್ತು ನಿಧಿ ಏಕೆ ರಚಿಸಿಲ್ಲ': ಸಿಎಂ ಸಿದ್ದರಾಮಯ್ಯಗೆ ವಿಪಕ್ಷ ನಾಯಕ ಆರ್ ಅಶೋಕ್ ಪ್ರಶ್ನೆ

SCROLL FOR NEXT