ಶಶಿ ತರೂರ್  
ದೇಶ

ವೀರ್ ಸಾವರ್ಕರ್ ಪ್ರಶಸ್ತಿಗೆ ಶಶಿ ತರೂರ್ ಆಯ್ಕೆ: ಕಾಂಗ್ರೆಸ್ ಪಕ್ಷಕ್ಕೆ ಪೀಕಲಾಟ ತಂದಿಟ್ಟ ಸಂಸದ; ವಿಷಯವೇ ಗೊತ್ತಿಲ್ಲ ಎಂದ ತರೂರ್ ಕಚೇರಿ!

ಸಂಸದ ಶಶಿ ತರೂರ್ ಸೇರಿದಂತೆ ಪಕ್ಷದ ಯಾವ ಸದಸ್ಯರು ವೀರ ಸಾವರ್ಕರ್ ಅವರ ಹೆಸರಿನಲ್ಲಿ ನೀಡುವ ಯಾವುದೇ ಪ್ರಶಸ್ತಿಯನ್ನು ಸ್ವೀಕರಿಸಬಾರದು. ಬ್ರಿಟಿಷರ ಮುಂದೆ ತಲೆಬಾಗಿದವರ ಹೆಸರಿನಲ್ಲಿ ನೀಡುವ ಪ್ರಶಸ್ತಿ ಸ್ವೀಕರಿಸುವುದು ಸರಿಯಲ್ಲ.

ತಿರುವನಂತಪುರಂ: ಕಾಂಗ್ರೆಸ್ ನಾಯಕ ಮತ್ತು ತಿರುವನಂತಪುರಂ ಶಶಿ ತರೂರ್ ಅವರಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸಿದ್ಧಾಂತವಾದಿ ವಿಡಿ ಸಾವರ್ಕರ್ ಅವರ ಹೆಸರಿನ ಪ್ರಶಸ್ತಿಯನ್ನು ನೀಡುವುದಾಗಿ ಎನ್‌ಜಿಒ ಘೋಷಿಸಿದ ನಂತರ ತರೂರ್ ಕಾಂಗ್ರೆಸ್ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ತರೂರ್ ಅವರು ಪ್ರಶಸ್ತಿಯನ್ನು ಸ್ವೀಕರಿಸುವುದಿಲ್ಲ ಅಥವಾ ಸಮಾರಂಭದಲ್ಲಿ ಭಾಗವಹಿಸುವುದಿಲ್ಲ ಎಂದು ಅವರ ಕಚೇರಿ ಸ್ಪಷ್ಟಪಡಿಸಿದೆ. ಈ ವಿಷಯ ನಮ್ಮ ಗಮನಕ್ಕೆ ಬಂದಿಲ್ಲ, ನಮ್ಮ ಒಪ್ಪಿಗೆಯಿಲ್ಲದೆ ಈ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದೆ

ಸಂಸದ ಶಶಿ ತರೂರ್ ಸೇರಿದಂತೆ ಪಕ್ಷದ ಯಾವ ಸದಸ್ಯರು ವೀರ ಸಾವರ್ಕರ್ ಅವರ ಹೆಸರಿನಲ್ಲಿ ನೀಡುವ ಯಾವುದೇ ಪ್ರಶಸ್ತಿಯನ್ನು ಸ್ವೀಕರಿಸಬಾರದು ಎಂದು ಕಾಂಗ್ರೆಸ್‌ ಮುಖಂಡ ಕೆ. ಮುರಳೀಧರನ್‌ ಬುಧವಾರ ಹೇಳಿದ್ದಾರೆ. ಬ್ರಿಟಿಷರ ಮುಂದೆ ತಲೆಬಾಗಿದವರ ಹೆಸರಿನಲ್ಲಿ ನೀಡುವ ಪ್ರಶಸ್ತಿ ಸ್ವೀಕರಿಸುವುದು ಸರಿಯಲ್ಲ ಎಂದಿದ್ದಾರೆ.

ತರೂರ್‌ ಅವರು ಸಾವರ್ಕರ್ ಹೆಸರಿನ ಪ್ರಶಸ್ತಿಯನ್ನು ಸ್ವೀಕರಿಸುತ್ತಾರೆ ಎಂದು ನಾನು ನಂಬುವುದಿಲ್ಲ. ಅವರು ಪ್ರಶಸ್ತಿ ಸ್ವೀಕರಿಸಿದರೆ ಅದರಿಂದ ಕಾಂಗ್ರೆಸ್‌ ಮುಜುಗರ ಅನುಭವಿಸುತ್ತದೆ ಎಂದು ಹೇಳಿದ್ದಾರೆ.

ಎಚ್‌ಆರ್‌ಡಿಎಸ್‌ ಇಂಡಿಯಾ, 2025ರ ವೀರ್‌ ಸಾವರ್ಕರ್‌ ಅಂತರರಾಷ್ಟ್ರೀಯ ಇಂ‌ಪ್ಯಾಕ್ಟ್ ಪ್ರಶಸ್ತಿಗೆ ಶಶಿ ತರೂರ್‌ ಅವರನ್ನು ಆಯ್ಕೆ ಮಾಡಿತ್ತು. ಇಂದು(ಬುಧವಾರ) ಅವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ ಎನ್ನಲಾಗಿತ್ತು.

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಶಿ ತರೂರ್‌, ‘ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಹೋಗುತ್ತಿಲ್ಲ ಎಂದಿದ್ದಾರೆ. ಮಾಧ್ಯಮಗಳ ಮೂಲಕ ನನಗೆ ಈ ವಿಷಯ ತಿಳಿದಿದೆ. ಆ ಪ್ರಶಸ್ತಿಯನ್ನು ಕೊಡುತ್ತಿರುವವರು ಯಾರು ಎಂದು ನನಗೆ ಗೊತ್ತಿಲ್ಲ. ಪ್ರಶಸ್ತಿಗೆ ಸಂಬಂಧಿಸಿದ ಯಾವುದೇ ವಿಷಯವೂ ತಿಳಿದಿಲ್ಲ. ಅಲ್ಲದೇ ಆ ವೇಳೆ ನಾನು ಇಲ್ಲಿ ಇರುವುದಿಲ್ಲ ಎಂದು ಹೇಳಿದ್ದಾರೆ.

ಬುಧವಾರ ಸಂಜೆ ನವದೆಹಲಿಯ NDMC ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯುವ ಸಮಾರಂಭದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕ್ರಿಕೆಟ್ ಅಭಿಮಾನಿಗಳಿಗೆ ಡಿಕೆಶಿ ಗುಡ್ ನ್ಯೂಸ್; ಮತ್ತೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಮ್ಯಾಚ್

ಮೈಸೂರು: ಸೆರೆ ಸಿಕ್ಕಿದ್ದ 4 ಹುಲಿ ಮರಿಗಳ ನಿಗೂಢ ಸಾವು!

ಮದುವೆಯಾಗಿ ಮೂರೇ ದಿನಕ್ಕೆ ವಿಚ್ಛೇದನ ಕೇಳಿದ ವಧು; ಮೊದಲ ರಾತ್ರಿಯೇ ಆಘಾತಕಾರಿ ವಿಷಯ ಬಹಿರಂಗ!

MUDA: 300 ಎಕರೆ ಜಮೀನಿನಲ್ಲಿ ಹೊಸದಾಗಿ ಲೇಔಟ್‌ ಅಭಿವೃದ್ಧಿ; ಸಚಿವ ಬೈರತಿ ಸುರೇಶ್‌

'ಅಧಿಕಾರ ಹಂಚಿಕೆ ಬಗ್ಗೆ ಯಾರೂ ಮಾತನಾಡಬೇಡಿ, ಸಾರ್ವಜನಿಕ ಹೇಳಿಕೆ ಕೊಡಬೇಡಿ': ಕಾಂಗ್ರೆಸ್ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಬುದ್ದಿಮಾತು

SCROLL FOR NEXT