ದೇಶ

'ಬೆದರಿಸುವ ಪ್ರಯತ್ನ ಬೇಡ': TN ಜಡ್ಜ್ ವಿರುದ್ಧ INDIA ಕೂಟದ ಪದಚ್ಯುತಿ ಪ್ರಸ್ತಾವನೆಗೆ ನಿವೃತ ನ್ಯಾಯಧೀಶರು ಟೀಕೆ!

ತಮಿಳುನಾಡಿನ ತಿರುಪರನಕುಂದ್ರಂ ಬೆಟ್ಟದಲ್ಲಿ ದರ್ಗಾದ ಬಳಿ ಇರುವ ಕಲ್ಲಿನ ಕಂಬದ ಮೇಲೆ ಸಾಂಪ್ರದಾಯಿಕ ದೀಪ ಬೆಳಗಲು ಅನುಮತಿ ನೀಡಿದ್ದ ನ್ಯಾಯಾಧೀಶ ಜಿ. ಆರ್ ಸ್ವಾಮಿನಾಥನ್ ಅವರನ್ನು ಮಹಾಭಿಯೋಗ ಪ್ರಸ್ತಾವನೆ ಮೂಲಕ ತೆಗೆದುಹಾಕಲು ವಿರೋಧ ಪಕ್ಷ ಪ್ರಯತ್ನಿಸುತ್ತಿದೆ.

ನವದೆಹಲಿ: ತಮಿಳುನಾಡಿನ ತಿರುಪರನಕುಂದ್ರಂ ಬೆಟ್ಟದಲ್ಲಿ ದರ್ಗಾದ ಬಳಿ ಇರುವ ಕಲ್ಲಿನ ಕಂಬದ ಮೇಲೆ ಸಾಂಪ್ರದಾಯಿಕ ದೀಪ ಬೆಳಗಲು ಅನುಮತಿ ನೀಡಿದ್ದ ನ್ಯಾಯಾಧೀಶ ಜಿ. ಆರ್ ಸ್ವಾಮಿನಾಥನ್ ಅವರನ್ನು ಮಹಾಭಿಯೋಗ ಪ್ರಸ್ತಾವನೆ ಮೂಲಕ ತೆಗೆದುಹಾಕಲು ವಿರೋಧ ಪಕ್ಷ ಪ್ರಯತ್ನಿಸುತ್ತಿದೆ. ಏತನ್ಮಧ್ಯೆ, ನಿವೃತ್ತ ಸುಪ್ರೀಂ ಕೋರ್ಟ್‌ ನ್ಯಾಯಧೀಶರು ಸೇರಿದಂತೆ 56 ಮಾಜಿ ನ್ಯಾಯಮೂರ್ತಿಗಳು ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶರನ್ನು ಬೆಂಬಲಿಸಿ ಪತ್ರ ಬರೆದಿದ್ದಾರೆ.

ಇಂಡಿ ಕೂಟದ ಮಹಾಭಿಯೋಗ ಪ್ರಸ್ತಾವನೆಗೆ 56 ನ್ಯಾಯಾಧೀಶರು ಗಂಭೀರ ಆಕ್ಷೇಪಣೆಗಳನ್ನು ವ್ಯಕ್ತಪಡಿಸಿದ್ದಾರೆ. ಇದನ್ನು ಮುಂದುವರಿಸಲು ಬಿಟ್ಟರೆ. ಅದು ನಮ್ಮ ಪ್ರಜಾಪ್ರಭುತ್ವದ ಬೇರುಗಳನ್ನು ಮತ್ತು ನ್ಯಾಯಾಂಗದ ಸ್ವಾತಂತ್ರ್ಯವನ್ನು ನಾಶಪಡಿಸುತ್ತದೆ ಎಂದು ನ್ಯಾಯಾಧೀಶರು ಎಚ್ಚರಿಸಿದ್ದಾರೆ. ಸಮಾಜದ ಒಂದು ನಿರ್ದಿಷ್ಟ ವರ್ಗದ ಸೈದ್ಧಾಂತಿಕ ಮತ್ತು ರಾಜಕೀಯ ನಿರೀಕ್ಷೆಗಳಿಗೆ ಅನುಗುಣವಾಗಿರದ ನ್ಯಾಯಾಧೀಶರನ್ನು ಬೆದರಿಸುವ ನಾಚಿಕೆಯಿಲ್ಲದ ಪ್ರಯತ್ನ ಎಂದು ನಿವೃತ್ತ ನ್ಯಾಯಾಧೀಶರು ಬಣ್ಣಿಸಿದ್ದಾರೆ. ನ್ಯಾಯಾಧೀಶರು ತಮ್ಮ ಪತ್ರದಲ್ಲಿ, ಮಾಜಿ ಪ್ರಧಾನಿ ಇಂದಿರಾ ಗಾಂಧಿ 1975ರಲ್ಲಿ ಘೋಷಿಸಿದ ತುರ್ತು ಪರಿಸ್ಥಿತಿಯನ್ನು ಸಹ ಉಲ್ಲೇಖಿಸಿದ್ದಾರೆ.

ತುರ್ತು ಪರಿಸ್ಥಿತಿಯ ಕರಾಳ ದಿನಗಳಲ್ಲಿಯೂ ಸಹ ಆಗಿನ ಸರ್ಕಾರವು 'ಅಧಿಕಾರವನ್ನು ಪಾಲಿಸಲು' ನಿರಾಕರಿಸಿದ ನ್ಯಾಯಾಧೀಶರನ್ನು ಶಿಕ್ಷಿಸಲು ವಿವಿಧ ಕಾರ್ಯವಿಧಾನಗಳನ್ನು ಅಳವಡಿಸಿಕೊಂಡಿತು. ಅವರ ಬಡ್ತಿಗಳನ್ನು ರದ್ದುಗೊಳಿಸುವುದು ಸೇರಿದಂತೆ ಎಂಬುದನ್ನು ನೆನಪಿಸಿಕೊಳ್ಳಬೇಕು ಎಂದು ಈ ನ್ಯಾಯಾಧೀಶರು ಹೇಳುತ್ತಾರೆ. ಪತ್ರದಲ್ಲಿ 1973ರ ಕೇಶವಾನಂದ ಭಾರತಿ ಪ್ರಕರಣ ಸೇರಿದಂತೆ ಮೂರು ಗಮನಾರ್ಹ ತೀರ್ಪುಗಳನ್ನು ಉಲ್ಲೇಖಿಸಿದ್ದಾರೆ.

ಈ ವಾರದ ಆರಂಭದಲ್ಲಿ, ಕಾಂಗ್ರೆಸ್ ಸಂಸದ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸೇರಿದಂತೆ 100ಕ್ಕೂ ಹೆಚ್ಚು ಇಂಡಿ ಕೂಟದ ಸಂಸದರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಪ್ರಸ್ತಾವನೆಯನ್ನು ಸಲ್ಲಿಸಿದ್ದರು. ಆದಾಗ್ಯೂ, ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ದೋಷಾರೋಪಣೆ ಪ್ರಯತ್ನವನ್ನು ಬಲವಾಗಿ ಟೀಕಿಸಿದರು. ವಿರೋಧ ಪಕ್ಷಗಳು ಓಲೈಕೆ ರಾಜಕೀಯವನ್ನು ನಡೆಸುತ್ತಿವೆ ಎಂದು ಆರೋಪಿಸಿದರು. ಲೋಕಸಭೆಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯದ ನಂತರ, ನ್ಯಾಯಾಧೀಶರು ಯಾವುದೇ ನಿರ್ಧಾರಕ್ಕಾಗಿ ದೋಷಾರೋಪಣೆಯನ್ನು ಎದುರಿಸಿರುವುದು ಎಂದಿಗೂ ಸಂಭವಿಸಿಲ್ಲ ಎಂದು ಹೇಳಿದರು. ಅವರು ತಮ್ಮ ಮತಬ್ಯಾಂಕ್ ಅನ್ನು ಓಲೈಸಲು ಈ ಕ್ರಮವನ್ನು ತೆಗೆದುಕೊಂಡಿದ್ದಾರೆ ಎಂದು ಆರೋಪಿಸಿದ್ದರು.

ತಿರುಪ್ಪರಂಕುಂದ್ರಂ ಸುಬ್ರಹ್ಮಣ್ಯಸ್ವಾಮಿ ದೇವಾಲಯದ ಪ್ರಕರಣವು ತಮಿಳುನಾಡಿನ ಮಧುರೈನಲ್ಲಿರುವ ಬೆಟ್ಟದ ಮೇಲೆ ಇರುವ ಎರಡು ಪ್ರಾಚೀನ ಕಂಬಗಳಲ್ಲಿ ಒಂದರ ಮೇಲೆ "ದೀಪಥನ" ಹಬ್ಬದ ಪ್ರಯುಕ್ತ ಜ್ಯೋತಿ ಬೆಳಗಿಸುವುದಕ್ಕೆ ಸಂಬಂಧಿಸಿದ್ದಾಗಿದೆ. ಈ ಬೆಟ್ಟದಲ್ಲಿ 6ನೇ ಶತಮಾನದ ದೇವಾಲಯ ಮತ್ತು 14ನೇ ಶತಮಾನದ ದರ್ಗಾ ಎರಡೂ ಇದೆ. ಕಂಬದ ಮೇಲೆ ದೀಪ ಬೆಳಗಿಸುವುದಕ್ಕೆ ಸಂಬಂಧಿಸಿದ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಸ್ವಾಮಿನಾಥನ್, ರಾಜ್ಯ ಸರ್ಕಾರ ಮತ್ತು ದೇವಾಲಯ ಅಧಿಕಾರಿಗಳ ವಿರೋಧವನ್ನು ತಳ್ಳಿಹಾಕಿದರು. 100 ವರ್ಷಗಳಿಗೂ ಹೆಚ್ಚು ಕಾಲದಿಂದ ಜಾರಿಯಲ್ಲಿರುವ ಸಂಪ್ರದಾಯವಾದ ಬೆಟ್ಟದ ಬುಡದಲ್ಲಿರುವ ಕಂಬದ ಬದಲಿಗೆ ಬೆಟ್ಟದ ಮಧ್ಯದಲ್ಲಿರುವ ಕಂಬದ ಮೇಲೆ ದೀಪಗಳನ್ನು ಬೆಳಗಿಸುವಂತೆ ಆದೇಶಿಸಿದರು. ಮೇಲಿನ ಕಂಬವು ಕೂಡ ದೇವಾಲಯದ ಆಸ್ತಿಯಾಗಿದ್ದು, ಆದ್ದರಿಂದ ಅದನ್ನು ಆಚರಣೆಯಲ್ಲಿ ಸೇರಿಸಬೇಕು ಎಂದು ಅವರು ವಾದಿಸಿದರು. ಸ್ವಾಧೀನದ ಹಕ್ಕಿನ ಅಗತ್ಯವನ್ನು ನ್ಯಾಯಾಲಯ ಒತ್ತಿ ಹೇಳಿದೆ. ಆದಾಗ್ಯೂ, ಅಂತಹ ಆದೇಶವು ಕೋಮು ಉದ್ವಿಗ್ನತೆಯನ್ನು ಪ್ರಚೋದಿಸಬಹುದು ಎಂದು ಡಿಎಂಕೆ ವಾದಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕರ್ನಾಟಕ ಅಕ್ರಮದ ಹಾದಿ ಹಿಡಿಯದಿರಲಿ: ಗೃಹ ಸಚಿವ ಪರಮೇಶ್ವರರ "ಧ್ವಂಸ" ಹೇಳಿಕೆಗೆ ಪಿ. ಚಿದಂಬರಂ ಕಿಡಿ!

ಭಾರತದಲ್ಲಿ 11,718 ಕೋಟಿ ರೂ ವೆಚ್ಚದಲ್ಲಿ 'ಡಿಜಿಟಲ್ ಜನಗಣತಿ': ಕೇಂದ್ರ ಸಂಪುಟ ಅನುಮೋದನೆ!

ಡಿ.ಕೆ ಶಿವಕುಮಾರ್​​ರನ್ನು ಬಿಜೆಪಿಗೆ ಕರೆತರುವ ಪ್ರಯತ್ನವಾಗಿ ಪಕ್ಷದಿಂದ ನನ್ನ ಉಚ್ಚಾಟನೆ: ಯತ್ನಾಳ್ ಆರೋಪ

News headlines 12-12-2025 | ಗೃಹ ಲಕ್ಷ್ಮಿ ಹಣ: ಸದನಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸುಳ್ಳು ಮಾಹಿತಿ?: ಡ್ರಗ್ಸ್ ಮಾರುವವರು ವಾಸಿಸುವ ಬಾಡಿಗೆ ಕಟ್ಟಡ ಧ್ವಂಸ- ಗೃಹ ಸಚಿವ; ಮಾಜಿ ಸಚಿವ ಹೆಚ್.ಎಂ ರೇವಣ್ಣ ಪುತ್ರನ ಕಾರು ಅಪಘಾತ; ಬೈಕ್ ಸವಾರ ಸಾವು!

ಶೆಹಬಾಜ್ ಷರೀಫ್ ಗೆ 40 ನಿಮಿಷ ಕಾಯಿಸಿದ ಪುಟಿನ್: video ವೈರಲ್, 'ಬೆಗ್ಗರ್' ಗಳಿಗೆ ಟ್ರಂಪ್ ಕೂಡಾ ಹೀಗೆ ಮಾಡ್ತಾರೆ ಎಂದ ನೆಟ್ಟಿಗರು!

SCROLL FOR NEXT